• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

‘45’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಭಾವುಕವಾದ ಶಿವರಾಜ್ ಕುಮಾರ್ ಮಾತುಗಳು

ಚಿಕಿತ್ಸೆಗೆ ಹೋಗುವಾಗ ನಾನು ಮತ್ತೆ ಹಿಂದಿರುಗುತ್ತೇನೆ ಎಂಬ ಭರವಸೆ ನನಗೇ ಇರಲಿಲ್ಲ. ವೈದ್ಯರು ದೇವರಂತೆ ನನ್ನನ್ನು ಮರುಜೀವಕ್ಕೆ ತಂದರು.

by Dynamic Leader
22/12/2025
in ಸಿನಿಮಾ
0
0
SHARES
1
VIEWS
Share on FacebookShare on Twitter

ಚೆನ್ನೈ: “ನಟ ಶಿವರಾಜ್ ಕುಮಾರ್ ಅವರು ‘45’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಆರೋಗ್ಯ ಸಮಸ್ಯೆಗಳು, ಚಿಕಿತ್ಸೆ ಬಳಿಕದ ಅನುಭವಗಳು ಹಾಗೂ ಸಹೋದರ ಪುನೀತ್ ರಾಜ್ ಕುಮಾರ್ ಅವರ ನಿಧನ ಕುರಿತು ಮನಕಲಕುವಂತೆ ಮಾತನಾಡಿದರು.

ಶಿವರಾಜ್ ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಅಭಿನಯದ ‘45’ ಚಿತ್ರವು ಡಿಸೆಂಬರ್ 25 ರಂದು ಕನ್ನಡದಲ್ಲಿ ಹಾಗೂ ಜನವರಿ 1ರಂದು ತಮಿಳಿನಲ್ಲಿ ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ಇತ್ತೀಚೆಗೆ ತಾನು ಎದುರಿಸಿದ ಆರೋಗ್ಯ ಸಮಸ್ಯೆಗಳು ಮತ್ತು ಚಿಕಿತ್ಸೆ ಕುರಿತು ತಮ್ಮ ಮನದಾಳದ ನೋವನ್ನು ಹಂಚಿಕೊಂಡರು.

“ಚಿಕಿತ್ಸೆಗೆ ಹೋಗುವಾಗ ನಾನು ಮತ್ತೆ ಹಿಂದಿರುಗುತ್ತೇನೆ ಎಂಬ ಭರವಸೆ ನನಗೇ ಇರಲಿಲ್ಲ. ವೈದ್ಯರು ದೇವರಂತೆ ನನ್ನನ್ನು ಮರುಜೀವಕ್ಕೆ ತಂದರು” ಎಂದು ಭಾವುಕರಾಗಿ ಹೇಳಿದರು. ಡಿಸೆಂಬರ್ 18 ರಂದು ಚಿಕಿತ್ಸೆಗಾಗಿ ದೇಶ ಬಿಟ್ಟಾಗ ತುಂಬಾ ಭಾವೋದ್ರೇಕಗೊಂಡಿದ್ದೆ. ಮಾಧ್ಯಮದ ಸ್ನೇಹಿತರು ಕೂಡ ಕಣ್ಣೀರಿಟ್ಟರು. ಡಿಸೆಂಬರ್ 24 ರಂದು ಶಸ್ತ್ರಚಿಕಿತ್ಸೆ ನಡೆಯಿತು. ಐದು-ಆರು ಗಂಟೆಗಳ ನಂತರ ಕಣ್ಣು ತೆರೆದಾಗ ಪತ್ನಿ ನನ್ನ ಕೈ ಹಿಡಿದುಕೊಂಡಿದ್ದರು. ಆ ಕ್ಷಣವೇ ನನಗೆ ಹೊಸ ಜೀವನ ದೊರೆತಂತಾಯಿತು. ಭಾರತಕ್ಕೆ ಮರಳಿದಾಗಲೂ ತುಂಬಾ ಭಾವುಕನಾಗಿದ್ದೆ. ಯಾರಾದರೂ ಆರೋಗ್ಯ ವಿಚಾರಿಸಲು ಕರೆ ಮಾಡಿದರೂ ಕಣ್ಣೀರು ಬರುತ್ತಿತ್ತು” ಎಂದು ವಿವರಿಸಿದರು.

‘45’ ಚಿತ್ರದಲ್ಲಿ ಮಹಿಳಾ ವೇಷದಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಮಾತನಾಡಿದ ಅವರು, “ಆ ವೇಷದಲ್ಲಿ ನನ್ನ ಪತ್ನಿಯ ಕೈ ಹಿಡಿದು ಸೆಟ್‌ಗೆ ಹೋಗಿದ್ದೆ. ಎಲ್ಲರೂ ಯಾರು ಈ ಇಬ್ಬರು ಮಹಿಳೆಯರು ಎಂದು ಅಚ್ಚರಿಯಿಂದ ನೋಡುತ್ತಿದ್ದರು. ನನ್ನ ಪತ್ನಿಗೆ ಅದನ್ನು ನೋಡಿದಾಗ ತುಂಬಾ ಸಂತೋಷವಾಯಿತು” ಎಂದರು.

ನೇರ ತಮಿಳು ಚಿತ್ರದಲ್ಲಿ ನಟಿಸುವ ಕುರಿತು ಪ್ರಶ್ನೆಗೆ, “ಒಂದು ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಶೀಘ್ರದಲ್ಲೇ ಅದು ಪ್ರಾರಂಭವಾಗಲಿದೆ” ಎಂದು ಉತ್ತರಿಸಿದರು. ತಮ್ಮ ಕನ್ನಡ ಚಿತ್ರದಲ್ಲಿ ರಜನಿಕಾಂತ್ ಅವರನ್ನು ನಟಿಸಲು ಆಹ್ವಾನಿಸುವ ಯೋಚನೆಯಿದೆಯೇ ಎಂಬ ಪ್ರಶ್ನೆಗೆ, “ಕೇವಲ ಅವಕಾಶವಿದೆ ಎಂದು ಮಾಡಬಾರದು. ಅಂಥದ್ದಕ್ಕೆ ತಕ್ಕ ಕಥೆ ಬರಬೇಕು. ಹಾಗೊಂದು ಅವಕಾಶ ಬಂದರೆ ಖಂಡಿತ ರಜನಿಕಾಂತ್ ಸರ್ ಅವರನ್ನು ಕೇಳುತ್ತೇನೆ” ಎಂದರು.

ರಾಜಕೀಯ ಪ್ರವೇಶದ ಕುರಿತು ಕೇಳಿದಾಗ, “ನನಗೆ ರಾಜಕೀಯದ ಅರಿವು ಇಲ್ಲ. ಜನರಿಗೆ ಸಹಾಯ ಮಾಡಲು ಅಧಿಕಾರವೇ ಬೇಕೆಂದಿಲ್ಲ. ಆದರೆ ರಾಜಕೀಯ ವ್ಯವಸ್ಥೆ ಹಾಗಿಲ್ಲ” ಎಂದು ಸ್ಪಷ್ಟಪಡಿಸಿದರು.

ಸಹೋದರ ಪುನೀತ್ ರಾಜ್ ಕುಮಾರ್ ಅವರ ನಿಧನ ಕುರಿತು ಮಾತನಾಡಿದ ಶಿವರಾಜ್ ಕುಮಾರ್, “ಅವನಿಗೆ ಆಗ ಕೇವಲ 46 ವರ್ಷ. ಜೀವನದಲ್ಲಿ ಎಲ್ಲವನ್ನೂ ಸ್ವೀಕರಿಸಲೇಬೇಕು. ಕೆಲವರು 20 ವರ್ಷದಲ್ಲೇ ಇಹಲೋಕ ತ್ಯಜಿಸುತ್ತಾರೆ. ಸಮಯ ಬಂದರೆ ಹೋಗಲೇಬೇಕು. ಪುನೀತ್ ಚಿಕ್ಕವಯಸ್ಸಿನಿಂದಲೇ ತಾಯಿ-ತಂದೆಗಳಿಗೆ ತುಂಬಾ ಹತ್ತಿರವಾಗಿದ್ದ. ಬಹುಶಃ ಅವರಿಗೇ ಅವನು ಹೆಚ್ಚು ಅಗತ್ಯವಾಗಿದ್ದರಿಂದ ದೇವರು ಕರೆದುಕೊಂಡಿರಬಹುದು” ಎಂದು ಹೇಳಿದರು.

“ಹಣವನ್ನು ಸಂಪಾದಿಸಬಹುದು, ಆದರೆ ಜನರ ಪ್ರೀತಿ-ವಿಶ್ವಾಸವನ್ನು ಸಂಪಾದಿಸಲು ಸಾಧ್ಯವಿಲ್ಲ. ಜೋಗಿ ಪಾತ್ರದಲ್ಲಿ ನಟಿಸಿದ ನನಗೆ ಎಲ್ಲರೂ ಅಪಾರ ಪ್ರೀತಿ ನೀಡಿದ್ದಾರೆ. ಅದನ್ನು ನನ್ನ ಹೃದಯದಲ್ಲಿ ಸದಾ ಇಟ್ಟುಕೊಂಡಿದ್ದೇನೆ” ಎಂದು ಕೃತಜ್ಞತೆ ಸಲ್ಲಿಸಿದರು.

Tags: 4545 ಕನ್ನಡ ಸಿನಿಮಾKannada CinemaRaj B ShettyShivaraj KumarUpendraಉಪೇಂದ್ರಪತ್ರಿಕಾಗೋಷ್ಠಿರಾಜ್ ಬಿ. ಶೆಟ್ಟಿಶಿವರಾಜ್ ಕುಮಾರ್
Previous Post

ಬೆಂಗಳೂರಿನ ಕೋಗಿಲು ಗ್ರಾಮದಲ್ಲಿ ಮನೆಗಳ ಧ್ವಂಸ ಕಾರ್ಯಾಚರಣೆ: ನೂರಾರು ಕುಟುಂಬಗಳು ಬೀದಿಪಾಲು

Next Post

ಗ್ರಾಮೀಣ ಉದ್ಯೋಗ ಕಾಯ್ದೆ ಮರುರೂಪ: ಹೊಸ ಉದ್ಯೋಗ ಕಾಯ್ದೆ ವಿರುದ್ಧ ಕಾಂಗ್ರೆಸ್ ಹೋರಾಟದ ಎಚ್ಚರಿಕೆ!

Next Post

ಗ್ರಾಮೀಣ ಉದ್ಯೋಗ ಕಾಯ್ದೆ ಮರುರೂಪ: ಹೊಸ ಉದ್ಯೋಗ ಕಾಯ್ದೆ ವಿರುದ್ಧ ಕಾಂಗ್ರೆಸ್ ಹೋರಾಟದ ಎಚ್ಚರಿಕೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS