ಬೆಂಗಳೂರು: ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಕರ್ನಾಟಕ ರಾಜಕಾರಣದಲ್ಲಿ ಹೊಸ ಇತಿಹಾಸ ನಿರ್ಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾನ್ ನಾಯಕ ದೇವರಾಜ ಅರಸು ಅವರ ಆಡಳಿತ ದಾಖಲೆಗಳನ್ನು ಸರಿಗಟ್ಟಿದ್ದಾರೆ. ಅರಸು ನಂತರ ಮುಖ್ಯಮಂತ್ರಿಯಾಗಿ 7 ವರ್ಷ 239 ದಿನಗಳ ಕಾಲ ರಾಜ್ಯವನ್ನು ಮುನ್ನಡೆಸಿದ ಸಾಧನೆ, ಅವರನ್ನು ಇತಿಹಾಸದ ಸಾಲಿನಲ್ಲಿ ನಿಲ್ಲಿಸಿದೆ.
ಈ ಐತಿಹಾಸಿಕ ಸಾಧನೆಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ಬಜೆಟ್ ಮಂಡನೆಗೆ ಸಿದ್ಧರಾಗಿರುವುದು, ಅವರ ಅನುಭವ ಹಾಗೂ ಆಡಳಿತ ಸಾಮರ್ಥ್ಯದ ಮತ್ತೊಂದು ಸಾಕ್ಷಿಯಾಗಿದೆ.
ಸಿದ್ದರಾಮಯ್ಯ ಅವರ ಆಡಳಿತದ ಪ್ರಮುಖ ಹೈಲೈಟ್ ಎಂದರೆ, ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳು. ರಾಜ್ಯದ ಕೋಟ್ಯಂತರ ಜನರ ಜೀವನದಲ್ಲಿ ನೇರ ಬದಲಾವಣೆ ತಂದ ಈ ಯೋಜನೆಗಳು, ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತಕ್ಕೆ ಸ್ಪಷ್ಟ ಗುರುತಾಗಿವೆ.
ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ಆರ್ಥಿಕ ಭದ್ರತೆ, ಅನ್ನಭಾಗ್ಯ ಯೋಜನೆಯ ಮೂಲಕ ಬಡವರ ಆಹಾರ ಭದ್ರತೆ, ಶಕ್ತಿ ಯೋಜನೆಯ ಮೂಲಕ ಮಹಿಳೆಯರ ಉಚಿತ ಪ್ರಯಾಣ ಸೌಲಭ್ಯ, ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗಿ ಯುವಕರಿಗೆ ಬೆಂಬಲ, ಮತ್ತು ಗೃಹಜ್ಯೋತಿ ಯೋಜನೆಯ ಮೂಲಕ ಉಚಿತ ವಿದ್ಯುತ್. ಈ ಐದು ಗ್ಯಾರಂಟಿಗಳು ಸಮಾಜದ ಎಲ್ಲಾ ವರ್ಗಗಳಿಗೂ ನೇರ ನೆರವಾಗಿವೆ.
ಸಾಮಾನ್ಯ ಜನರ ಬದುಕನ್ನು ಕೇಂದ್ರವಾಗಿಟ್ಟುಕೊಂಡು, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ದಾರಿಯಲ್ಲಿ ರಾಜ್ಯವನ್ನು ಮುನ್ನಡೆಸುತ್ತಿರುವ ಅವರ ನಾಯಕತ್ವ ಶ್ಲಾಘನೀಯ. ಇದು ದೇವರಾಜ ಅರಸು ಅವರ ಜನಪರ ಪರಂಪರೆಯ ಮುಂದುವರಿಕೆಯಂತೆಯೇ ಕಾಣುತ್ತಿದೆ.
ಇತಿಹಾಸ ನಿರ್ಮಿಸಿರುವ ಈ ಸಂದರ್ಭದಲ್ಲಿ, ಕರ್ನಾಟಕದ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಐತಿಹಾಸಿಕ ಸಾಧನೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಹಾರ್ದಿಕ ಶುಭಾಶಯಗಳು.
ನಿಮ್ಮ ಜನಪರ ಆಡಳಿತ ಮತ್ತಷ್ಟು ಯಶಸ್ವಿಯಾಗಲಿ, ಕರ್ನಾಟಕ ಇನ್ನಷ್ಟು ಸಮೃದ್ಧವಾಗಲಿ ಎಂಬುದೇ ನಮ್ಮೆಲ್ಲರ ಹಾರೈಕೆ.
◾ ಡಿ.ಸಿ.ಪ್ರಕಾಶ್, ಸಂಪಾದಕರು ಹಾಗೂ ಡೈನಾಮಿಕ್ ಲೀಡರ್ ಬಳಗ














