• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಸಡನ್ನಾಗಿ ದುಡ್ಡು ಸಿಕ್ಕರೆ ಏನೇನಾಗುತ್ತದೆ ಅಂತಾ ತೋರಿಸಿಕೊಟ್ಟ ಸಿನಿಮಾ ರೂಪಾಯಿ!

by Dynamic Leader
14/02/2023
in ಸಿನಿಮಾ
0
0
SHARES
1
VIEWS
Share on FacebookShare on Twitter

ಅರುಣ್ ಜಿ.,

ದುಡ್ಡೊಂದಿದ್ರೆ ಸಾಕು ಎಲ್ಲವನ್ನೂ ಪಡೆದುಕೊಳ್ಳಬಹುದು ಎನ್ನುವ ಮನಸ್ಥಿತಿಯ ಹುಡುಗರು. ಹಣ ಎಲ್ಲರ ಅವಶ್ಯಕತೆ, ಅನಿವಾರ್ಯತೆ ನಿಜ. ಹಾಗಂತ ಅದನ್ನು ಹೇಗೆ ಬೇಕಾದರೂ ಹಾಗೆ ಸಂಪಾದಿಸಿಬಿಡಲು ಸಾಧ್ಯವಿಲ್ಲವಲ್ಲಾ? ಒಳ್ಳೇ ಮಾರ್ಗಗಳನ್ನು ಕಂಡು ಹಿಡಿದುಕೊಂಡು ಶ್ರಮವಹಿಸಿ ಸಂಪಾದಿಸಬೇಕು. ಹಣ ಮಾಡುವ ಧಾವಂತಕ್ಕೆ ಬಿದ್ದು ಯಾವ್ಯಾವುದೋ ದಾರಿಯಲ್ಲಿ ದುಡಿದರೆ ಅದೂ ಒಂದು ಬದುಕು ಅನ್ನಿಸಿಕೊಳ್ಳುತ್ತಾ? ದುಡ್ಡಿನ ಕುರಿತು ನಾನಾ ಮಜಲುಗಳನ್ನು ತೆರೆದು ತೋರಿಸುವ ಸಿನಿಮಾ ʻರೂಪಾಯಿʼ.

ಎಲ್ಲೆಲ್ಲಿಂದಲೋ ಬಂದು ಒಂದು ಕಡೆ ಸೇರಿದವರ ಮನಸ್ಥಿತಿ, ಪರಿಸ್ಥಿತಿಗಳು ಬೇರೆಯದ್ದೇ ಆಗಿರುತ್ತದೆ. ಆದರೆ ಎಲ್ಲರ ಅಗತ್ಯ ಮಾತ್ರ ದುಡ್ಡು. ಇವರೊಂದಿಗೆ ದೊಡ್ಡ ಮಟ್ಟದ ಹಣ ಕೂಡಾ ಜರ್ನಿ ಮಾಡುತ್ತಿರುತ್ತದೆ. ಆದರೆ ಅದು ಇವರಿಗೆ ಗೊತ್ತೇ ಇರೋದಿಲ್ಲ. ಆ ಹಣವನ್ನು ಇನ್ಯಾರೋ ಬೆನ್ನಟ್ಟಿರುತ್ತಾರೆ. ಮನುಷ್ಯ ಹಣದ ಹಿಂದೆ ಓಡೋದನ್ನು ಇಲ್ಲಿ ರೂಪಕಗಳ ಮೂಲಕ ಬಿಚ್ಚಿಟ್ಟಿದ್ದಾರೆ. ಬದುಕಿನ ಅನಿವಾರ್ಯಗಳಿಗಾಗಿ ದೇಹವನ್ನೇ ಬಂಡವಾಳ ಮಾಡಿಕೊಂಡ ಹೆಣ್ಣುಮಕ್ಕಳ ಕತೆ ಕೇಳಿರ್ತೀವಿ. ನೀವಿಲ್ಲಿ ಗಂಡು ವೇಶ್ಯೆಯನ್ನೂ ನೋಡಬಹುದು. ಒಟ್ಟಾರೆ ಜೀವನದ ವಾಸ್ತವಗಳನ್ನು ಅಷ್ಟೇ ತಮಾಷೆ ರೀತಿಯಲ್ಲಿ ಅನಾವರಣಗೊಳಿಸಿರುವ ಸಿನಿಮಾ ರೂಪಾಯಿ!

ವಿಜಯ್ ಜಗದಾಲ್ ಮೊದಲ ಬಾರಿಗೆ ನಟಿಸಿ, ನಿರ್ದೇಶಿಸಿರುವ ಸಿನಿಮಾ ‘ರೂಪಾಯಿ’. ಆದರೆ ಇದು ಇವರ ಮೊದಲ ಸಿನಿಮಾ ಅಂತಾ ಅನ್ನಿಸೋದೇ ಇಲ್ಲ.  

‘ರೂಪಾಯಿ’ ಒಂದು ಪಕ್ಕಾ ಮನರಂಜನಾತ್ಮಕ ಚಿತ್ರವಾಗಿದ್ದು, ಒಂದು ಕಮರ್ಷಿಯಲ್ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳೂ ಈ ಚಿತ್ರದಲ್ಲಿದೆ. ‘ಪ್ರೇಕ್ಷಕರಿಗೆ ಎಲ್ಲೂ ಬೋರ್ ಆಗದ ಹಾಗೆ ಚಿತ್ರಕಥೆ ಮಾಡಿದ್ದು, ಹಣದ ಮೌಲ್ಯದ ಕುರಿತು ನಗುವಿನ ಮೂಲಕ ಹೇಳುವ ಪ್ರಯತ್ನ ಮಾಡಿದ್ದಾರೆ. ಇಲ್ಲಿ ನಗಿಸುವುದಕ್ಕೆ ಯಾವುದೇ ಪ್ರತ್ಯೇಕ ಪಾತ್ರಗಳಿಲ್ಲ. ಸನ್ನಿವೇಶಗಳೇ ನಗು ತರಿಸುತ್ತದೆ. ಸಡನ್ನಾಗಿ ಹಣ ಸಿಕ್ಕಿಬಿಟ್ಟರೆ ಸಂಬಂಧಗಳು ಹೇಗೆ ಹದಗೆಡುತ್ತವೆ ಎನ್ನುವ ವಿಚಾರದೊಂದಿಗೆ ಕ್ರಿಕೆಟ್ ಹಗರಣದ ಎಳೆಯೂ ಇಲ್ಲಿ ಬಂದು ಹೋಗುತ್ತದೆ. 

ವಿಜಯ್ ಜಗದಾಲ್ ಜೊತೆಗೆ ಕೃಷಿ ತಾಪಂಡ, ಯಶ್ವಿಕ್, ‘ಮೈತ್ರಿ’ ಜಗದೀಶ್, ಶಂಕರ್ ಮೂರ್ತಿ, ರಾಮ್ ಚಂದನ್, ಚಂದನಾ ರಾಘವೇಂದ್ರ, ಪ್ರಮೋದ್ ಶೆಟ್ಟಿ, ರಾಕ್ಲೈನ್ ಸುಧಾಕರ್, ಮೋಹನ್ ಜನೇಜ ಮುಂತಾದವರು ಪಾತ್ರಕ್ಕೆ ಹೇಗೆ ಬೇಕೋ ಹಾಗೆ ನಟಿಸಿದ್ದಾರೆ. ಚಿತ್ರಕ್ಕೆ ಆನಂದ್ ರಾಜವಿಕ್ರಮ್ ಅವರ ಸಂಗೀತ, ಆರ್.ಡಿ.ನಾಗಾರ್ಜುನ್ ಅವರ ಛಾಯಾಗ್ರಹಣ ಮತ್ತು ಶಿವರಾಜ್ ಮೇಹು ಅವರ ಸಂಕಲನ ಕೂಡಾ ಅಚ್ಚುಕಟ್ಟಾಗಿದೆ.

ಸಿನಿಮಾ ರೇಟಿಂಗ್: 3.5/5

Tags: Actor Vijay JagadalRupayi ChitraRupayi CinemaRupayi Moviesನಟ ವಿಜಯ್ ಜಗದಾಲ್ರೂಪಾಯಿ ಚಿತ್ರರೂಪಾಯಿ ಮೂವಿರೂಪಾಯಿ ಸಿನಿಮಾ
Previous Post

“1 RAಬರಿ ಕಥೆ” ಸದ್ಯದಲ್ಲೇ ಬಿಡುಗಡೆ! 

Next Post

ತುಂಗ ಬದ್ರಾ ಮತ್ತು ಕೃಷ್ಣ ನದಿಯಲ್ಲಿ ಕಳ್ಳ ಮರಳು ಸಾಗಾಣಿಕೆ ಉಪ ವಿಭಾಗಧಿಕಾರಿ ರಜನಿಕಾಂತ್ ದಾಳಿ!

Next Post

ತುಂಗ ಬದ್ರಾ ಮತ್ತು ಕೃಷ್ಣ ನದಿಯಲ್ಲಿ ಕಳ್ಳ ಮರಳು ಸಾಗಾಣಿಕೆ ಉಪ ವಿಭಾಗಧಿಕಾರಿ ರಜನಿಕಾಂತ್ ದಾಳಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS