• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಪ್ರೇಮಿಗಳ ದಿನ “ಪ್ರೇಮಪತ್ರದ ಆಫೀಸಿಗೆ…” ಬಂದ ಸಿಂಹ-ಪ್ರಿಯ!

by Dynamic Leader
15/02/2023
in ಸಿನಿಮಾ
0
0
SHARES
1
VIEWS
Share on FacebookShare on Twitter

ಅರುಣ್ ಜಿ.,

ವರ್ಷಗಳ ಕಾಲ ಪ್ರೇಮಿಗಳಾಗಿದ್ದು ಇತ್ತೀಚಿಗಷ್ಟೆ ದಂಪತಿಗಳಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರು ತಮ್ಮ ವ್ಯಾಂಲಂಟೈನ್ ಡೇನ ಈ ಬಾರಿ ವಿಶೇಷವಾಗಿ ಸೆಲಬ್ರೇಟ್ ಮಾಡಿಕೊಂಡಿದ್ದಾರೆ. ಪ್ರೇಮಿಗಳ ದಿನಾಚರಣೆಯಂದು ಒಂದು ಪ್ರೇಮಕತೆಗಳ ಪುಸ್ತಕವನ್ನು ಲೋಕಾರ್ಪಣೆ ಮಾಡುವುದರ ಮೂಲಕ ತಮ್ಮ ಪ್ರೇಮದ ದಿನಗಳನ್ನು ಮೆಲುಕು ಹಾಕಿದ್ದಾರೆ. ಮಾವಲಿ ಪಬ್ಲಿಕೇಶನ್ ನ ಮೊದಲ ಪುಸ್ತಕವಾದ ಶಿವಕುಮಾರ ಮಾವಲಿಯವರ “ಪ್ರೇಮಪತ್ರದ ಆಫೀಸು ಮತ್ತು ಅವಳು” ಎಂಬ ವಿಶಿಷ್ಟ ಶೀರ್ಷಿಕೆಯ ಕಥಾ ಸಂಕಲನವನ್ನು ಅವರಿಬ್ಬರೂ ಬಿಡುಗಡೆ ಮಾಡಿದ್ದಾರೆ. ಲೇಖಕ ಶಿವಕುಮಾರ ಮಾವಲಿ, ಪ್ರಕಾಶಕಿ ಪ್ರೇಮ ಶಿವಕುಮಾರ ಜೊತೆಗೂಡಿ ಇಬ್ಬರೂ ಪ್ರೇಮ ಪುಸ್ತಕವೊಂದನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ವಾಲಂಟೈನ್ ದಿನಗಳ ನೆನಪು ಮಾಡಿಕೊಂಡರು.

ಪ್ರೇಮಪತ್ರದ ಆಫೀಸು ಎಂಬ ಶೀರ್ಷಿಕೆಯೇ ಆಸಕ್ತಿ ಹುಟ್ಟಿಸುವಂತಿದೆ, ನಾವೂ ಪ್ರೇಮಪತ್ರಗಳನ್ನ ಬರೆದುಕೊಳ್ತಿದ್ವಿ ಎಂದು ನೆನಪು ಮಾಡಿಕೊಂಡು, ಪುಸ್ತಕದಲ್ಲಿದ್ದ ಎರಡು ಪತ್ರಗಳ ಸಾಲುಗಳನ್ನು ಪರಸ್ಪರರು ಪತ್ರದ ರೀತಿಯಲ್ಲಿ ಓದಿಕೊಂಡರು. 

ಹರಿಪ್ರಿಯ, ”ಸಾವಿರ ಜನರ ಮಧ್ಯೆ ಇದ್ದರೂ ನಾನು ಏಕಾಂಗಿಯೇ, ನಿನ್ನ ನೆನಪಿನ ಭಾವವಿರದಿದ್ದರೆ” ಎಂದು ಹೇಳಿದರೆ, ವಸಿಷ್ಠ ಸಿಂಹ, “ತನಗಾಗಿ ಏನನ್ನೂ ಮಾಡಿಕೊಳ್ಳದ ನೀರಿನಂತೆ ನಾನು ನಿನ್ನನ್ನು ಪ್ರೀತಿಸುತ್ತೇನೆ” ಎಂದು ಹರಿಪ್ರಿಯಾರ ಮುಖದಲ್ಲಿ ನಗು ಮೂಡಿಸಿದರು. ಮಾವಲಿ ಪಬ್ಲಿಕೇಶನ್ ಪ್ರಕಟಮಾಡುತ್ತಿರುವ ಈ ಕಥಾ ಸಂಕಲನವನ್ನು ಹೆಚ್ಚು ಜನ ಓದಲಿ ಮತ್ತು ಇಂಥ ಅನೇಕ ಪುಸ್ತಕಗಳು ಅವರಿಂದ ಮೂಡಿ ಬರಲಿ ಎಂದು ಆಶಿಸಿದರು.

‘ಇಷ್ಟು ವರ್ಷಗಳಿಗಿಂತ ಈ ಬಾರಿ ನಮ್ಮ ವ್ಯಾಲಂಟೈನ್ ಡೇ ವಿಶೇಷವಾಗಿ ಆಯಿತು, ಪ್ರೇಮಪುಸ್ತಕವೊಂದು ನಮ್ಮಿಂದ ಬಿಡುಗಡೆ ಆಗುವಂತಾಯಿತು’ ಎಂದು ಹರಿಪ್ರಿಯ ಹೇಳಿದರು. 

‘ದೇವರು ಅರೆಸ್ಟ್ ಆದ’ ಮತ್ತು ‘ಟೈಪಿಸ್ಟ್ ತಿರಸ್ಕರಿಸಿದ ಕತೆ’ ಎಂಬ ಕತಾ ಸಂಕಲನಗಳ ಮೂಲಕ ಹೊಸ ರೀತಿಯ ಕತೆಗಳನ್ನು ಪರಿಚಯಿಸಿದ ಶಿವಕುಮಾರ ಮಾವಲಿಯವರ ‘ಸುಪಾರಿ ಕೊಲೆ’ ನಾಟಕ ಒಂದು ಪತ್ತೇದಾರಿ ಮಾದರಿಯ ನಾಟಕವಾಗಿದ್ದರೆ, ಇತ್ತೀಚಿಗೆ ಪ್ರದರ್ಶನಗೊಂಡ ಅವರ ‘ಒಂದು ಕಾನೂನಾತ್ಮಕ ಕೊಲೆ’ ನಾಟಕವು, ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಬಳಸಿಕೊಂಡು ಸಶಕ್ತವಾಗಿ ರಾಜಕೀಯ ವಿಡಂಬನೆ ಮಾಡುವ ನಾಟಕವಾಗಿದೆ. ಹಾಗೆಯೇ ರಾಜೀವ್ ಗಾಂಧಿ ಹತ್ಯೆಯ ಸಮಯದಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರ ಬದುಕಲ್ಲಿ ನಡದ ಘಟನೆಯಾಧಾರಿತ ಕಾದಂಬರಿ ‘LTTE Murthy Calling’ ಇತ್ತೀಚಿಗಷ್ಟೆ ತಮಿಳಿಗೆ ಅನುವಾದಗೊಂಡಿದೆ.

ಈಗ ಅವರ ಹೊಸ ಕತಾ ಸಂಕಲನ “ಪ್ರೇಮಪತ್ರದ ಆಫೀಸು ಮತ್ತು ಅವಳು” ಮಾವಲಿ ಪಬ್ಲಿಕೇಶನ್ ನಿಂದ ಪ್ರಕಟವಾಗುತ್ತಿರುವ ಮೊದಲ ಪುಸ್ತಕವಾಗಿದೆ. ಪುಸ್ತಕವು ಮಾರುಕಟ್ಟೆಯಲ್ಲಿ ಲಭ್ಯವಿದೆ.

Tags: Actor Vasishta SimhaActress Hariprriyaನಟ ವಸಿಷ್ಠ ಸಿಂಹನಟಿ ಹರಿಪ್ರಿಯಾ
Previous Post

ಬಿಡುಗಡೆಗೂ ಮೊದಲೆ ಕುತೂಹಲ ಹುಟ್ಟಿಸಿದೆ “ಕಡಲತೀರದ ಭಾರ್ಗವ” ಚಿತ್ರ! 

Next Post

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ತಳಹದಿ: BBC ಗೆ ಅಮೆರಿಕ ಬೆಂಬಲ!

Next Post

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ತಳಹದಿ: BBC ಗೆ ಅಮೆರಿಕ ಬೆಂಬಲ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS