• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಕೃತಕ ಸಿಹಿಕಾರಕಗಳು ಟೈಪ್-2 ಮಧುಮೇಹವನ್ನು ಹೆಚ್ಚಿಸುತ್ತವೆ: ವಿಶ್ವ ಆರೋಗ್ಯ ಸಂಸ್ಥೆ

by Dynamic Leader
17/12/2023
in ದೇಶ
0
0
SHARES
0
VIEWS
Share on FacebookShare on Twitter

ವಿವಿಧ ಉತ್ಪನ್ನಗಳಲ್ಲಿ ಸಕ್ಕರೆಗೆ ಪರ್ಯಾಯವಾಗಿ ಬಳಸುವ ಕೃತಕ ಸಿಹಿಕಾರಕಗಳು, ತೂಕವನ್ನು ಕಡಿಮೆ ಮಾಡದೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ಸಕ್ಕರೆಗೆ ಪರ್ಯಾಯವಾಗಿ, ಡಯಟ್ ಸೋಡ, ಕಾಫಿ ಮುಂತಾದವುಗಳಲ್ಲಿ ದೇಹದ ತೂಕವನ್ನು ಕಡಿಮೆ ಮಾಡಲಿಕ್ಕಾಗಿ ದಿನವೂ ಲಕ್ಷಾಂತರ ಜನರಿಂದ, ಕೃತಕ ಸಿಹಿಕಾರಕಗಳನ್ನು ಬಳಸಲಾಗುತ್ತಿದೆ. ಆದರೆ ಇವು ಆರೋಗ್ಯಕರವೇ ಎಂಬುದರ ಬಗ್ಗೆ ಬಹಳ ಹಿಂದಿನಿಂದಲೂ ವಿವಾದಗಳು ನಡೆಯುತ್ತಲೇ ಇವೆ.

ಈ ವೇಳೆ ಎನ್‌ಎಸ್‌ಎಸ್ (NSS) ಎಂದು ಕರೆಯಲ್ಪಡುವ ಸಕ್ಕರೆ ರಹಿತ ಕೃತಕ ಸಿಹಿಕಾರಕಗಳನ್ನು ಬಳಸುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ, ‘ನಮ್ಮ ಬಳಿ ಇರುವ ಪುರಾವೆಗಳನ್ನು ಮೌಲ್ಯಮಾಪನ ಮಾಡಿದಾಗ, ಹಿರಿಯರು ಮತ್ತು ಮಕ್ಕಳ ಕೊಬ್ಬನ್ನು ಕರಗಿಸುವುದರಲ್ಲಿ ಕೃತಕ ಸಿಹಿಕಾರಕಗಳು ದೀರ್ಘ ಕಾಲದ ಫಲವನ್ನು ನೀಡುವುದಿಲ್ಲ. ದೀರ್ಘ ಕಾಲದಿಂದ ಇದನ್ನು ಬಳಸುವ ಹಿರಿಯರಿಗೆ ಮಧುಮೇಹ, ಹೃದಯ ಸಮಸ್ಯೆ, ಸಾವು ಸೇರಿದಂತೆ ಹೆಚ್ಚಿನ ಅಪಾಯಗಳನ್ನು ಏರ್ಪಡಿಸುವಂತಹ ಸಾಧ್ಯತೆಗಳೇ ಹೆಚ್ಚಾಗಿದ್ದು, ಇದರಿಂದ ಅಹಿತಕರ ಘಟನೆಗಳು ಸಂಭವಿಸಬಹುದು ಎಂಬ ಶಿಫಾರಸ್ಸನ್ನು ಮಾಡಲಾಗುತ್ತದೆ’ ಎಂದು ಅದರಲ್ಲಿ ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪೋಷಣೆ ಮತ್ತು ಆಹಾರ ಸುರಕ್ಷತಾ ಇಲಾಖೆಯ ನಿರ್ದೇಶಕ ಫ್ರಾನ್ಸೆಸ್ಕೊ ಬ್ರಾಂಕಾ ಅವರು, ‘ಕೃತಕ ಸಿಹಿಕಾರಕಗಳನ್ನು ಬಳಸುವುದು ತೂಕ ನಿಯಂತ್ರಣಕ್ಕೆ ಸಹಾಯ ಮಾಡುವುದಿಲ್ಲ. ಹಣ್ಣುಗಳು ಅಥವಾ ಸಿಹಿ ಅಲ್ಲದ ಆಹಾರ ಮತ್ತು ನೈಸರ್ಗಿಕವಾಗಿ ಸಕ್ಕರೆಗಳನ್ನು ಹೊಂದಿರುವ ಪಾನೀಯಗಳಂತಹ ಆಹಾರಗಳನ್ನು ಹಾಗೂ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುವ ಇತರ ಆಹಾರ ವಿಧಾನಗಳನ್ನು ಪರಿಗಣಿಸಬೇಕು.

ಕೃತಕ ಸಿಹಿಕಾರಕವು ಅತ್ಯಗತ್ಯ ಆಹಾರವಲ್ಲ. ಅದರಲ್ಲಿ ಪೌಷ್ಟಿಕಾಂಶವಿಲ್ಲ. ಆದ್ದರಿಂದ, ಜನರು ತಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು, ಜೀವನದ ಆರಂಭದಿಂದಲೂ ಸಿಹಿ ತಿಂಡಿಗಳ ಸೇವನೆಯನ್ನು ಕಡಿಮೆ ಮಾಡಿಕೊಳ್ಳಬೇಕು. ಈಗಾಗಲೇ ಮಧುಮೇಹದಿಂದ ಬಳಲುತ್ತಿರುವವರನ್ನು ಹೊರತುಪಡಿಸಿ ಮತ್ತೆಲ್ಲರಿಗೂ ಇದು ಅನ್ವಯಿಸುತ್ತದೆ’ ಎಂದು ಹೇಳಿದ್ದಾರೆ.

ಹೆಚ್ಚು ವ್ಯಾಪಕವಾಗಿ ಬಳಸುವ ಕೃತಕ ಸಿಹಿಕಾರಕಗಳಲ್ಲಿ Acesulfame K, Aspartame, Advantame, Cyclamates, Neotame, Saccharin, Sucralose, stevia ಮತ್ತು stevia derivatives ಮುಂತಾದವುಗಳು ಒಳಗೊಂಡಿರುತ್ತದೆ.

Tags: DiabetesDynamicDynamic LeaderDynamic Leader MagazineDynamic Leader News PortalLeaderSugar FreeType 2 DiabetesWHOWorld Health Organizational
Previous Post

ರಾಹುಲ್ ಗಾಂಧಿ ಮತ್ತು ಪ್ರದಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ! ಹಿನ್ನೆಲೆ ಏನು?

Next Post

ಪರಮಾಣು ವಿದ್ಯುತ್ ಸ್ಥಾವರಗಳಲ್ಲಿ 4374 ಹುದ್ದೆಗಳು; ITI / Diploma / BSc ಗೆ ಅವಕಾಶ!

Next Post

ಪರಮಾಣು ವಿದ್ಯುತ್ ಸ್ಥಾವರಗಳಲ್ಲಿ 4374 ಹುದ್ದೆಗಳು; ITI / Diploma / BSc ಗೆ ಅವಕಾಶ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS