• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ನಂಗುನೇರಿ: ಹುಟ್ಟಿನಿಂದ ಮನುಷ್ಯರು ಎಲ್ಲರೂ ಸಮಾನರು; ಜನರ ನಡುವೆ ತಾರತಮ್ಯ ಮಾಡುವುದು ಅವಮಾನಕರ! – ನಟ ಕಮಲಹಾಸನ್

by Dynamic Leader
16/08/2023
in ದೇಶ
0
0
SHARES
0
VIEWS
Share on FacebookShare on Twitter

ತಿರುನೆಲ್ವೇಲಿ ಜಿಲ್ಲೆ ನಂಗುನೇರಿಯ ದೊಡ್ದ ಬೀದಿಯ ನಿವಾಸಿ ಚಿನ್ನದುರೈ (ವಯಸ್ಸು 17) ತಂಗಿಯ ಹೆಸರು ಚಂದ್ರ ಸೆಲ್ವಿ. ಇಬ್ಬರೂ ವಳ್ಳಿಯೂರಿನ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಓದುತ್ತಿದ್ದಾರೆ. ಚಿನ್ನದುರೈ 12ನೇ ತರಗತಿಯಲ್ಲಿ ಓದುತ್ತಿದ್ದಾನೆ. ಚಿನ್ನದುರೈ ಜೊತೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ಜಾತಿ ತಾರತಮ್ಯ ತೋರಿಸಿ ಓದದಂತೆ ತಡೆದಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ಚಿನ್ನದುರೈ ಶಾಲೆಗೆ ಹೋಗಿರಲಿಲ್ಲ.

ಈ ವಿಷಯ ತಿಳಿದ ಶಾಲಾ ಆಡಳಿತ ಮಂಡಳಿ ಚಿನ್ನದುರೈಗೆ ಕಿರುಕುಳ ನೀಡಿದ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿತು. ಇದರಿಂದ ಸಿಟ್ಟಿಗೆದ್ದ ಕೆಲವು ವಿದ್ಯಾರ್ಥಿಗಳು ಚಿನ್ನದುರೈ ಅವರ ಮನೆಗೆ ತೆರಳಿ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ತಡೆಯಲು ಯತ್ನಿಸಿದ ಆಕೆಯ ತಂಗಿ ಚಂದ್ರು ಸೆಲ್ವಿಯನ್ನೂ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಇಬ್ಬರನ್ನೂ ರಕ್ಷಿಸಲಾಗಿದ್ದು, ಸದ್ಯ ತಿರುನಲ್ವೇಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಉಪನಿಷತ್ತುಗಳು, ವೇದಗಳು ಮತ್ತು ಸಂಸ್ಕೃತ ಇಡೀ ಜಗತ್ತಿಗೆ ವಿಶ್ವಕೋಶಗಳಾಗಿವೆ; ಯಾವುದೇ ಆಕ್ಷೇಪವಿಲ್ಲದೆ ಅಧಿಕೃತ ಭಾಷೆಯನ್ನಾಗಿ ಹಿಂದಿಯನ್ನು ಒಪ್ಪಿಕೊಳ್ಳುವ ಅಗತ್ಯವನ್ನು ರೂಪಿಸಿಕೊಲ್ಲಿ! – ಅಮಿತ್ ಶಾ

ಈ ಘಟನೆಯಲ್ಲಿ 7 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಾಲಾ ವಿದ್ಯಾರ್ಥಿಗಳು ತಮ್ಮ ಸಹಪಾಠಿಯನ್ನು ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಇಡೀ ತಮಿಳುನಾಡನ್ನು ಬೆಚ್ಚಿ ಬೀಳಿಸಿದೆ. ಈ ಘಟನೆಯ ನಂತರ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ಜಾತಿ ಮತ್ತು ಜನಾಂಗೀಯ ಭಾವನೆಗಳಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳ ನಡುವೆ ನಡೆಯುವ ಹಿಂಸಾಚಾರ ತಪ್ಪಿಸಲು, ಸಾಮರಸ್ಯ ಮೂಡಿಸಲು ಮತ್ತು ಕ್ರಮಗಳನ್ನು ರೂಪಿಸಲು ನಿವೃತ್ತ ನ್ಯಾಯಮೂರ್ತಿ ಚಂದ್ರು ನೇತೃತ್ವದಲ್ಲಿ ಏಕವ್ಯಕ್ತಿ ಸಮಿತಿಯನ್ನು ರಚಿಸಲಾಗುವುದು ಎಂದು ಘೋಷಿಸಿದ್ದಾರೆ.

ಈ ಹಿನ್ನಲೆಯಲ್ಲಿ ಜನರ ನಡುವೆ ತಾರತಮ್ಯ ಮಾಡುವುದು ನಾಚಿಕೆಗೇಡು ಎಂಬ ಸಾಮಾಜಿಕ ಪಾಠವನ್ನು ಪ್ರಧಾನವಾಗಿ ಕಲಿಸಬೇಕು ಎಂದು ನಟ ಕಮಲಹಾಸನ್ ನೇತೃತ್ವದ ‘ಮಕ್ಕಳ್ ನೀಧಿ ಮೈಯಂ’ ಪಕ್ಷ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ. “ನಂಗುನೇರಿಯಲ್ಲಿ ಜಾತಿಯ ದ್ವೇಷಕ್ಕೆ ತುತ್ತಾಗಿರುವ ಸಹೋದರ ಚಿನ್ನದೊರೈ ಮತ್ತು ಅವರ ಸಹೋದರಿಗೆ ಸಾಂತ್ವನ ಹೇಳಲು ಜಗತ್ತಿನ ಯಾವುದೇ ಭಾಷೆಯಲ್ಲಿ ಪದಗಳಿಲ್ಲ. ಅವರು ಸುರಿಸಿದ ರಕ್ತ, ತಮಿಳುನಾಡಿನಲ್ಲಿ ಮುಗ್ದ ಮಕ್ಕಳ ಮನಸ್ಸಿನಲ್ಲೂ ಜಾತೀಯತೆ ಬೇರೂರಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸಿದೆ. ಸಹೋದರ ಚಿನ್ನದೊರೈ ಮತ್ತು ಅವರ ಸಹೋದರಿ ಬೇಗ ಗುಣಮುಖರಾಗಿ ಬರಬೇಕು. ಶಾಲೆಗೆ ಮರುಪ್ರವೇಶ ಮಾಡಿ ಉತ್ತಮ ಶಿಕ್ಷಣ ಪಡೆದು ಮಹಾನ್ ವಿಜೇತರಾಗಿ ಹೊರನಡೆಯಬೇಕು.

ಬಾಬಾಸಾಹೇಬ್ ಅಂಬೇಡ್ಕರರು ಕೂಡ ಓದುತ್ತಿರುವಾಗ ಇಂತಹ ದೌರ್ಜನ್ಯಗಳನ್ನು ಎದುರಿಸಿದರು; ನಂತರ ವಿಶ್ವ ಮೆಚ್ಚಿದ ಮಹಾನ್ ಶಿಕ್ಷಣ ತಜ್ಞರಾದರು. ಅವರಂತೆ ಇಲ್ಲಿ ಕ್ರೌರ್ಯಕ್ಕೆ ಒಳಗಾದ ಈ ಮಕ್ಕಳು ಕೂಡ ಜಗತ್ತು ಮೆಚ್ಚುವಷ್ಟು ವಿದ್ಯಾವಂತರಾಗಬೇಕು. ಅಂಬೇಡ್ಕರ್, ಗಾಂಧಿ, ಪೆರಿಯಾರ್, ನಾರಾಯಣ ಗುರು ಮತ್ತು ಇನ್ನಿತರ ನಾಯಕರು ಜಾತಿ ಅಸಮಾನತೆ ಮತ್ತು ದಬ್ಬಾಳಿಕೆಯ ವಿರುದ್ಧ ನಡೆಸಿದ ಯುದ್ಧವನ್ನು ನಾವು ಅದೇ ಉತ್ಸಾಹದಿಂದ ಮತ್ತೆ ಪ್ರಾರಂಭಿಸಲು ಒತ್ತಾಯಿಸಲ್ಪಟ್ಟಿದ್ದೇವೆ.

ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಪ್ರಭಾವಿ ಜಾತಿ ಮುಖಂಡರ ಬೆಂಬಲ ಪಡೆಯಲು ಬಿಜೆಪಿ ನಿರ್ಧಾರ!

ನಂಗುನೇರಿ ಸಮಸ್ಯೆಯ ಗಂಭೀರತೆಯನ್ನು ಮನಗಂಡು ತಮಿಳುನಾಡು ಸರ್ಕಾರ ತ್ವರಿತ ಕ್ರಮ ಕೈಗೊಂಡಿರುವುದು ಸಮಾಧಾನ ತಂದಿದೆ. ಶಾಲೆಗಳಲ್ಲಿ ಅನೇಕ ವಿಷಯಗಳನ್ನು ಕಲಿಸಲಾಗುತ್ತದೆ. ಹುಟ್ಟಿನಿಂದ ಮನುಷ್ಯರು ಎಲ್ಲರೂ ಸಮಾನರು; ಜನರ ನಡುವೆ ತಾರತಮ್ಯ ಮಾಡುವುದು ಅವಮಾನಕರ ಎಂಬುದು ಪ್ರಾಥಮಿಕವಾಗಿ ಕಲಿಸಬೇಕಾದ ಸಾಮಾಜಿಕ ಪಾಠ. ಶಾಲಾ ವಿದ್ಯಾರ್ಥಿಗಳು ಜಾತಿ ಗುರುತಿನ ಹಗ್ಗಗಳನ್ನು ಕಟ್ಟುವುದು, ವಾಹನಗಳಿಗೆ ಜಾತಿ ಹೆಸರು ಬರೆಸುವುದು, ಸಹವರ್ತಿ ವಿದ್ಯಾರ್ಥಿಗಳ ಮೇಲೆ ಒಂದೇ ಜಾತಿಯ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸುವುದು, ಮಾದಕ ವಸ್ತುಗಳ ಸೇವನೆ ಹಲವು ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವುದು ಕಹಿ ಸತ್ಯ.

ಈ ಪರಿಸ್ಥಿತಿಯನ್ನು ಬದಲಾಯಿಸಲು ಸರ್ಕಾರ, ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳು, ಪೋಷಕರು ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಕೆಲಸ ಮಾಡುವುದು ಅವಶ್ಯಕ. ಸಾಮಾಜಿಕ ಪ್ರಗತಿಗೆ ಶ್ರಮಿಸುತ್ತಿರುವ ಪ್ರಗತಿಪರ ಚಿಂತಕರು, ವಿದ್ವಾಂಸರು, ಕಲಾವಿದರನ್ನು ಕರೆತಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಬೇಕು. ಸಾಮಾಜಿಕ ನ್ಯಾಯವನ್ನು ಪ್ರತ್ಯೇಕ ವಿಷಯವಾಗಿ ಕಲಿಸಬೇಕು. ವಿದ್ಯಾರ್ಥಿಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ರೂಪಿಸಿ ನಡೆಸಬೇಕು. ಜಾತಿ ತಾರತಮ್ಯ ಹೆಚ್ಚಿರುವ ಶಾಲೆಗಳಲ್ಲಿ ಪ್ರತಿ ವಿದ್ಯಾರ್ಥಿಗೆ ಒಬ್ಬ ಸಾಮಾಜಿಕ ಕಾರ್ಯಕರ್ತನನ್ನು ಮಾರ್ಗದರ್ಶಕರನ್ನಾಗಿ (mentor) ನೇಮಿಸಬಹುದು. ಸಾರ್ವಜನಿಕವಾಗಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಜಾತಿ ತಾರತಮ್ಯ ಮತ್ತು ದ್ವೇಷ ಹರಡುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಇದನ್ನೂ ಓದಿ: ಭಾರತ ಮಾತೆ ಕೇವಲ ಭೂಮಿ ಅಲ್ಲ; ನಿರ್ದಿಷ್ಟ ಸಂಸ್ಕೃತಿ, ಇತಿಹಾಸ, ಧರ್ಮಕ್ಕೆ ಸಂಬಂಧಿಸಿಲ್ಲ ಭಾರತ ಪ್ರತಿಯೊಬ್ಬ ಭಾರತೀಯನ ಧ್ವನಿಯಾಗಿದೆ! – ರಾಹುಲ್ ಗಾಂಧಿ

ಶತಶತಮಾಗಳಿಂದ ತುಳಿತಕ್ಕೊಳಗಾದವರು ಶಿಕ್ಷಣವೇ ತಮನ್ನು ದಡಕ್ಕೆ ತರುವ ದಾರಿದೀಪ ಎಂಬುದನ್ನು ಅರಿತುಕೊಂಡು ಪ್ರಗತಿಯಲ್ಲಿರುವಾಗ ಅವರನ್ನು ಬೆಂಬಲಿಸುವುದು ಮತ್ತು ಅಪ್ಪಿಕೊಳ್ಳುವುದು ಆರೋಗ್ಯಕರ ಸಮುದಾಯದ ಕರ್ತವ್ಯವಾಗಿದೆ. ಮುಂದೆ ಇಂತಹ ಅನ್ಯಾಯ ಆಗದಂತೆ ತಡೆಯೋಣ” ಎಂದು ಉಲ್ಲೇಖಿಸಿದ್ದಾರೆ.

Tags: Justice ChandruKamal HaasanMakkal Needhi MaiamNanguneriNanguneri Incidentಕಮಲಹಾಸನ್ನಂಗುನೇರಿನಂಗುನೇರಿ ಘಟನೆನ್ಯಾಯಮೂರ್ತಿ ಚಂದ್ರುಮಕ್ಕಳ್ ನೀಧಿ ಮೈಯಂ
Previous Post

2024ರ ಲೋಕಸಭಾ ಚುನಾವಣೆಗೆ ಪ್ರಭಾವಿ ಜಾತಿ ಮುಖಂಡರ ಬೆಂಬಲ ಪಡೆಯಲು ಬಿಜೆಪಿ ನಿರ್ಧಾರ!

Next Post

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹ!

Next Post

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS