• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಸಂಸತ್ತು ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಘೋಷಿಸಬೇಕು; ಚಂದ್ರಯಾನ-3 ಬಂದಿಳಿದ ಸ್ಥಳವನ್ನು `ಶಿವಶಕ್ತಿ ಪಾಯಿಂಟ್’ ಎಂದು ಹೆಸರಿಸಿ ರಾಜಧಾನಿಯನ್ನಾಗಿ ಮಾಡಬೇಕು!

by Dynamic Leader
28/08/2023
in ದೇಶ
0
0
SHARES
0
VIEWS
Share on FacebookShare on Twitter

ಭಾರತದ ಪರವಾಗಿ ಚಂದ್ರನ ದಕ್ಷಿಣ ಭಾಗವನ್ನು ಅದ್ಯಯನ ಮಾಡಲು ಜುಲೈ 14 ರಂದು ಉಡಾವಣೆಯಾದ ಚಂದ್ರಯಾನ-3 ಕಳೆದ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ದಾಖಲೆ ನಿರ್ಮಿಸಿತು. ಈ ಸಾಧನೆಯನ್ನು ಭಾರತ ಮಾತ್ರವಲ್ಲದೆ ವಿಶ್ವದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಚಂದ್ರನ ದಕ್ಷಿಣ ಭಾಗದಲ್ಲಿ ಇಳಿದ ವಿಕ್ರಮ್ ಲ್ಯಾಂಡರ್‌ನಿಂದ ಪ್ರಗ್ಯಾನ್ ರೋವರ್ ಹೊರಬಂದು, ಅಧ್ಯಯನಕ್ಕಾಗಿ ತನ್ನ ಪಯಣವನ್ನು ಚಂದ್ರನ ದಕ್ಷಿಣ ಧ್ರುವದಿಂದ ಪ್ರಾರಂಭಿಸಿ ನಡೆಸುತ್ತಿದೆ.

ಲ್ಯಾಂಡರ್ ಚಂದ್ರನ ಮೇಲೆ ಇಳಿದಾಗ ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾದಲ್ಲಿ ನಡೆದ ಬ್ರಿಕ್ಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಗ್ರೀಸ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಅವರು ದೆಹಲಿಯಿಂದ ನೇರವಾಗಿ ಬೆಂಗಳೂರಿಗೆ ಬಂದಿಳಿದರು. ಇಲ್ಲಿನ ಇಸ್ರೋ ಬಾಹ್ಯಾಕಾಶ ಸಂಶೋಧನಾ ಕೇಂದ್ರದಲ್ಲಿ ಚಂದ್ರಯಾನ-3 ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಗಳನ್ನು ಭೇಟಿ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿ ಅವರೊಂದಿಗೆ ಸಂವಾದ ನಡೆಸಿದರು.

ಆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, “ಚಂದ್ರಯಾನ-3 ಯೋಜನೆಯಲ್ಲಿ ಮಹಿಳೆಯರ ಸಹಭಾಗಿತ್ವವೂ ಮುಖ್ಯವಾಗಿದೆ. ಹಾಗಾಗಿ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ಹೆಸರಿಡಲು ನಿರ್ಧರಿಸಲಾಗಿದೆ. ಈ ಶಕ್ತಿಯು ಮಹಿಳೆಯರ ಶಕ್ತಿಯನ್ನು ಪ್ರತಿನಿಧಿಸುತ್ತದೆ. ಅದೇ ರೀತಿ, 2019ರಲ್ಲಿ ಚಂದ್ರಯಾನ 2 ಚಂದ್ರನ ಮೇಲೆ ಇಳಿದ ಸ್ಥಳವನ್ನು ‘ತಿರಂಗ’ (ತ್ರಿವರ್ಣ ಧ್ವಜ) ಎಂದು ಕರೆಯಲಾಗುತ್ತದೆ.” ಎಂದರು.

ಇದನ್ನೂ ಓದಿ: ಚಂದ್ರಯಾನ-3 ಯೋಜನೆಗೆ “ಕನ್ನಡ ಚಂದ್ರಯಾನ-3” ಎಂಬ ಹೆಸರನ್ನು ಮರು ನಾಮಕರಣ ಮಾಡಲು ವಾಟಾಲ್ ನಾಗರಾಜ್ ಒತ್ತಾಯ!

104ನೇ ಮನ್ ಕೀ ಬಾತ್ (ಮನಸ್ಸಿನ ಧ್ವನಿ) ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಆಗಸ್ಟ್ 23, ಭಾರತ ಮತ್ತು ಭಾರತದ ಚಂದ್ರಯಾನ ನಿರ್ಣಯದ ಕೆಲವು ಸೂರ್ಯಗಳು ಚಂದ್ರನ ಮೇಲೂ ಉದಯಿಸುತ್ತದೆ ಎಂಬುದನ್ನು ಸಾಬೀತು ಪಡಿಸಿವೆ. ಮಿಷನ್ ಚಂದ್ರಯಾನ ಮೂಲಕ ಎಲ್ಲಾ ಹಂತಗಳಲ್ಲಿ ಭಾರತ ಗೆಲ್ಲಲು ಬಯಸಿದೆ. ಇದು ನವಭಾರತದ ಚೈತನ್ಯದ ಸಂಕೇತವಾಗಿದೆ.” ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಚಕ್ರಪಾಣಿ ಮಹಾರಾಜ್, “ಚಂದ್ರನನ್ನು ಸಂಸತ್ತು ಹಿಂದೂ ರಾಷ್ಟ್ರ (Hindu Rashtra) ಎಂದು ಘೋಷಿಸಬೇಕು” ಎಂದು ವಿನಂತಿಸಿಕೊಂಡಿರುವ ವೀಡಿಯೊ ಒಂದನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ, “ಸಂಸತ್ತು, ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಘೋಷಿಸಬೇಕು. ಅಲ್ಲದೆ, `ಶಿವಶಕ್ತಿ ಪಾಯಿಂಟ್’ ಎಂದು ಹೆಸರಿಸಲಾದ ಚಂದ್ರಯಾನ-3 ಬಂದಿಳಿದ ಸ್ಥಳವನ್ನು ಅದರ ರಾಜಧಾನಿಯನ್ನಾಗಿ ಘೋಷಿಸಬೇಕು.

ಇದರೊಂದಿಗೆ ಜಿಹಾದಿ ಮನಸ್ಥಿತಿಯ ಯಾವ ಭಯೋತ್ಪಾದಕನೂ ಅಲ್ಲಿಗೆ ಹೋಗುವಂತಿಲ್ಲ. ಹಾಗಾಗಿ ಭಾರತ ಸರ್ಕಾರವು ಅಲ್ಲಿಗೆ ಯಾವುದೇ ಭಯೋತ್ಪಾದಕರು ಹೋಗದಂತೆ ತ್ವರಿತವಾಗಿ ಕ್ರಮಕೈಗೊಳ್ಳಬೇಕು,” ಎಂದು ಹೇಳಿದ್ದಾರೆ.  

Tags: Chandrayaan-3Hindu RashtraISROMoonPragyan Roverಇಸ್ರೋಚಂದ್ರಚಂದ್ರಯಾನ 3ಪ್ರಗ್ಯಾನ್ ರೋವರ್ಹಿಂದೂ ರಾಷ್ಟ್ರ
Previous Post

ಚಂದ್ರಯಾನ-3 ಯೋಜನೆಗೆ “ಕನ್ನಡ ಚಂದ್ರಯಾನ-3” ಎಂಬ ಹೆಸರನ್ನು ಮರು ನಾಮಕರಣ ಮಾಡಲು ವಾಟಾಲ್ ನಾಗರಾಜ್ ಒತ್ತಾಯ!

Next Post

ಸ್ವಾಭಿಮಾನದ ಮದುವೆಗಳನ್ನು ವಕೀಲರೇ ನಡೆಸಬಹುದು; ನ್ಯಾಯಾಲಯದ ಪ್ರತಿನಿಧಿಯಾಗಿ ಅಲ್ಲ! – ಸುಪ್ರೀಂ ಕೋರ್ಟ್

Next Post

ಸ್ವಾಭಿಮಾನದ ಮದುವೆಗಳನ್ನು ವಕೀಲರೇ ನಡೆಸಬಹುದು; ನ್ಯಾಯಾಲಯದ ಪ್ರತಿನಿಧಿಯಾಗಿ ಅಲ್ಲ! - ಸುಪ್ರೀಂ ಕೋರ್ಟ್

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS