• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?!

by Dynamic Leader
19/10/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನು “ಕೈ ಹಿಡಿದ” ಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ?

ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ! ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ! ಎಂದು ಕಾಂಗ್ರೆಸ್ ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕಿಡಿಕಾರಿದೆ.

ಹಿಂದಿನ ನಿಮ್ಮ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ “ಕೋಮು-ಕುಂಡ”ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕುಮಾರಸ್ವಾಮಿಯವರೇ, ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ, ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು. “ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ” ಎಂದು. ಆದರೆ ಸಿದ್ದಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜತೆ ನಿಂತಿತ್ತು.

ಕಾಂಗ್ರೆಸ್ ದಯಾಭಿಕ್ಷೆಯಿಂದ ಎರಡನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ? ಓಹ್.. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ! ಎಂದು ಹೇಳಿದೆ.

ಕುಮಾರಸ್ವಾಮಿಯವರೇ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50 ಕೋಟಿಯಂತೆ ಸರಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿ ಟಿ ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ ಅಂಗಿ ಚುಂಗು ಹಿಡಿದು ನಿಂತಿದ್ದೀರಲ್ಲಾ… ನಿಮಗೇನಾದರೂ ಆತ್ಮಗೌರವ ಇದೆಯೇ?

ಇಡೀ ರಾಜ್ಯದ ಜನಕ್ಕೆ ಅರ್ಥವಾಗಿದೆ. ಅಧಿಕಾರದ ಕನಸು ನುಚ್ಚುನೂರಾದ ನಂತರ ನೀವೆಷ್ಟು ಹತಾಶರಾಗಿದ್ದೀರಿ, ಮತಿಭ್ರಂಶರಾಗಿದ್ದೀರಿ ಎಂದು ನೀವಾಡುವ ಒಂದೊಂದು ನುಡಿಯಲ್ಲೂ ಅದರದೇ ಪ್ರತಿಫಲನ. ಪಾಪ, ನಿಮ್ಮ ಸ್ಥಿತಿ ಕಂಡು ಅಯ್ಯೋ ಅನ್ನಿಸುತ್ತದೆ. ಇದೇ ಸ್ಥಿತಿ ಮುಂದುವರೆದರೆ ಬೀದಿಯಲ್ಲಿ ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ ಎಂಬುದನ್ನು ನೆನೆದು ಭಯವೂ ಆಗುತ್ತದೆ.

ಅದು ಒತ್ತಟ್ಟಿಗಿರಲಿ, ನಿಮ್ಮನ್ನು, ನಿಮ್ಮ ಕುಟುಂಬದವರನ್ನು ದಶಕಗಳ ಕಾಲ ಪೊರೆದ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎನ್ನುವ ಮೂಲಕ ಅವರಿಗೆ ದ್ರೋಹ, ಅವಮಾನ ಮಾಡಿರುವ ನಿಮ್ಮನ್ನು ಆ ಭೈರವೇಶ್ವರನೂ ಕ್ಷಮಿಸುವುದಿಲ್ಲ. ಒಕ್ಕಲಿಗರಿಂದ ನೀವು ಬೆಳೆದಿರೇ ಹೊರತು ನಿಮ್ಮಿಂದ ಸಮುದಾಯವೇನೂ ಉದ್ಧಾರ ಆಗಿಲ್ಲ. ಎಷ್ಟೇ ಆಗಲಿ, ಒಕ್ಕಲಿಗರ ಆತ್ಮಗೌರವದ ಸಂಕೇತವಾದ ಆದಿ ಚುಂಚನಗಿರಿ ಮಠದ ಶ್ರೀ.ಬಾಲಗಂಗಾಧರನಾಥ ಸ್ವಾಮೀಜಿಗಳಿಗೇ ಸೆಡ್ಡು ಹೊಡೆದು ಮತ್ತೊಂದು ಮಠ ಕಟ್ಟಿದ ಮಹಾನುಭಾವರಲ್ಲವೇ ನೀವು..?!

ಇನ್ನೊಂದೆಡೆ ಅಲ್ಪಸಂಖ್ಯಾತರ ಅಗತ್ಯವಿಲ್ಲ, ಅವರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಅನ್ನುತ್ತೀರಿ. ಹಾಗಾದರೆ ನಿಮಗೆ ನೀವೇ ಮತ ಹಾಕಿಕೊಂಡು ಗೆದ್ದಿರಾ ಕುಮಾರಣ್ಣ..?! ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕುಮಾರಸ್ವಾಮಿಯವರೇ, ಹಿಂದೆ ನೀವು ಮಕ್ಮಲ್ ಟೋಪಿ ಹಾಕಿದ್ದೇನು? ಬಿರಿಯಾನಿ ತಿಂದಿದ್ದೇನು? ಮಸೀದಿ ಹೊಕ್ಕಿದ್ದೇನು? ಆಹಾ..! ಅದೇನು ನಾಟಕ, ಅದೇನು ಪಂಚರಂಗಿ ಆಟ? ಈಗ, ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?!

ಐಟಿ, ಇಡಿ ಕಿಂದರ ಜೋಗಿ ಅಮಿತ್ ಶಾ ಕಾಲಿಗೆ ಬಿದ್ದು ರಾಜಕೀಯ ವಿರೋಧಿಗಳಿಗೆ ಗುಂಡಿ ತೋಡುವುದರಲ್ಲಿ ಮಗ್ನರಾಗಿರುವ ಕುಮಾರಣ್ಣ ಒಂದು ವಿಷಯ ತಿಳಿದುಕೊಳ್ಳಿ. ನೀವೇ ನಿಮ್ಮ ಪಾಲಿನ ಭಸ್ಮಾಸುರ! ಸ್ವಲ್ಪ ಕಾಲ ತಡೆದು ನೋಡಿ, ನಿಮ್ಮ ಗುಂಡಿಯಲ್ಲಿ ಬಿದ್ದು ನೀವೇ ಹೆಂಗೆ ಒದ್ದಾಡುತ್ತೀರಿ ಅಂತಾ!

ಕೈಲಾಗದವರು ಮೈ ಪರಚಿಕೊಂಡರೆ ಆಗೋದು ಗಾಯ, ರಣ ಗಾಯ! ಕೈ ನಾಯಕರ ಮೇಲೆ ಬಿದ್ದರೇ ಕೈಲಾಸ ಪ್ರಾಪ್ತಿ ಆಗದು ಕುಮಾರಣ್ಣ. ನಿಮ್ಮ ಮಾತೇ ನಿಮ್ಮ ಪಾಲಿನ ಶತ್ರು! ಮಾತಾಡಿ, ಮಾತಾಡಿ ಮಂಡ್ಯ ಚುನಾವಣೆಯಲ್ಲಿ ನಿಮ್ಮ ಮಗನನ್ನು ಬಲಿ ಕೊಟ್ಟಿರಿ. ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಪಕ್ಷವನ್ನೇ ಅಡ್ಡಡ್ಡ ಉದ್ದುದ್ದ ಮಲಗಿಸಿದಿರಿ. ಈಗ ನಿಮ್ಮನ್ನು ನೀವೇ ಹಾಳು ಮಾಡಿಕೊಳ್ಳುತಿದ್ದೀರಿ..!

ನಿಯತ್ತು ಮತ್ತು ಕುಮಾರಸ್ವಾಮಿ ಎರಡೂ ವಿರುದ್ಧ ಪದಗಳು ಎಂಬುದು ಜಗಜ್ಜಾಹಿರು! ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನು “ಕೈ ಹಿಡಿದ” ಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ? ಅದೂ ಇಲ್ಲ. ಹತಾಶೆ ಆತ್ಮಸಾಕ್ಷಿಯನ್ನೇ ಕೊಂದಿದೆ!

ಹೀಗಾಗಿ ನಿಮ್ಮಂತವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ನೀವೀಗ ನಿರುದ್ಯೋಗಿ, ಪರರ ನಿಂದನೆಗೆ ಸಾಕಷ್ಟು ಸಮಯವಿದೆ. ಮಾತಾಡುತ್ತಾ ಹೋಗಿ. ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ಕೆಲಸವಿದೆ, ಜನ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಮರೆತು ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡುತ್ತಾ ಹೋದರೆ ನಿಮಗೂ ನಮಗೂ ವ್ಯತ್ಯಾಸ ಇರುವುದಿಲ್ಲ. ನೀವು ಮಾತಾಡಿ, ಮಾತಾಡುತ್ತಾ ಹೋಗಿ… ಅಲ್ ದ ಬೆಸ್ಟ್! ಎಂದು ಕರ್ನಾಟಕ ಕಾಂಗ್ರೆಸ್ ವ್ಯಂಗ್ಯವಾಡಿದೆ.

Tags: BJpCM IbrahimCongressFamily PoliticsHD DevegowdaHD KumaraswamyJDSಕಾಂಗ್ರೆಸ್ಕುಟುಂಬ ರಾಜಕಾರಣಜೆಡಿಎಸ್ಬಿಜೆಪಿಸಿ.ಎಂ.ಇಬ್ರಾಹಿಂಹೆಚ್.ಡಿ.ಕುಮಾರಸ್ವಾಮಿಹೆಚ್.ಡಿ.ದೇವೇಗೌಡ
Previous Post

ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ಗೆ ವಿದೇಶಿ ದೇಣಿಗೆ ಪಡೆಯಲು ಕೇಂದ್ರ ಸರ್ಕಾರ ಅನುಮೋದನೆ!

Next Post

ಪೊಲೀಸ್ ಸಂಸ್ಮರಣಾ ದಿನಾಚರಣೆ: ಹುತಾತ್ಮ ಪೊಲೀಸರಿಗೆ ಪುಷ್ಪ ನಮನದ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

Next Post

ಪೊಲೀಸ್ ಸಂಸ್ಮರಣಾ ದಿನಾಚರಣೆ: ಹುತಾತ್ಮ ಪೊಲೀಸರಿಗೆ ಪುಷ್ಪ ನಮನದ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS