• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಶೈವ ಧರ್ಮ ಸೇರಿದಂತೆ ಇತರ ಎಲ್ಲ ಹಿಂದೂ ಅಸ್ಮಿತೆಗಳನ್ನು ವೈಷ್ಣವೀಕರಣಗೊಳಿಸುವ ಷಡ್ಯಂತ್ರವನ್ನು ಅಯೋಧ್ಯೆಯಲ್ಲಿ ಪ್ರದರ್ಶಿಸಲಾಗಿದೆ: ತಿರುಮಾವಳವನ್

by Dynamic Leader
23/01/2024
in ದೇಶ
0
0
SHARES
0
VIEWS
Share on FacebookShare on Twitter

ಚೆನ್ನೈ: ಕಳೆದ 10 ವರ್ಷಗಳ ಬಿಜೆಪಿ ಸರ್ಕಾರದ ವೈಫಲ್ಯವನ್ನು ಮುಚ್ಚಿಡಲು ಅಯೋಧ್ಯೆಯಲ್ಲಿ ರಾಮನ ಅದ್ಧೂರಿ ಸಮಾರಂಭವನ್ನು ಯೋಜಿಸಲಾಗಿದೆ ಎಂದು ವಿಡುದಲೈ ಚಿರುತ್ತೈಗಳ್ (ಬಿಡುಗಡೆ ಚಿರುತೆಗಳು) ನಾಯಕ ತಿರುಮಾವಳವನ್ ಹೇಳಿದ್ದಾರೆ.

ವರ್ಣಾಶ್ರಮವನ್ನು ಸ್ಥಾಪಿಸಲು ಮೋದಿ ಹಾಗೂ ಅಮಿತ್ ಶಾ ಶ್ರಮಿಸುತ್ತಿದ್ದಾರೆ. ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಆರ್‌ಎಸ್‌ಎಸ್‌ ರವಿಯಾಗಿ ಕೆಲಸ ಮಾಡುತ್ತಿದ್ದಾರೆ. ಮೋದಿಯವರ 10 ವರ್ಷಗಳ ಆಡಳಿತ ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಾಯ ತಂದಿದೆ.

ಮೋದಿ ಆಡಳಿತ ವೈಫಲ್ಯದಿಂದ ಜನರ ಗಮನ ಬೇರೆಡೆ ಸೆಳೆಯಲು ಅಯೋಧ್ಯೆಯಲ್ಲಿ ಅದ್ಧೂರಿ ಸಮಾರಂಭ ನಡೆದಿದೆ. ಇಂಥವರ ಆಡಳಿತ ಮುಂದುವರಿದರೆ ಕೈಗಾರಿಕೋದ್ಯಮಿಗಳೇ ಬಲಗೊಳ್ಳಲು ಸಾಧ್ಯ. ಮೋದಿ ಆಡಳಿತವನ್ನು ತೊಡೆದುಹಾಕುವುದು ದೇಶದ ಪ್ರಮುಖ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.

­—–

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿನ್ನೆ ಅದ್ಧೂರಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ರಾಮನ ಪ್ರತಿಮೆಯನ್ನು ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಭಾರತದ ಪ್ರಮುಖ ರಾಜಕೀಯ ನಾಯಕರು, ಆಧ್ಯಾತ್ಮಿಕ ನಾಯಕರು, ಗಣ್ಯ ವ್ಯಕ್ತಿಗಳು, ಸಿನಿಮಾ ತಾರೆಯರು, ಕ್ರೀಡಾ ವ್ಯಕ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸದಸ್ಯರು ಅಯೋಧ್ಯೆ ಉತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿದರು.

ಈ ಹಿನ್ನಲೆಯಲ್ಲಿ, ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು ಚುನಾವಣಾ ರಾಜಕೀಯಕ್ಕಾಗಿ ಬಿಜೆಪಿ ಸರ್ಕಾರ ಬಳಸಿಕೊಂಡಿದೆ ಮತ್ತು ಅಯೋಧ್ಯೆ ಕಾರ್ಯಕ್ರಮವನ್ನು ಪ್ರಚಾರ ವೇದಿಕೆಯನ್ನಾಗಿ ಮಾಡಿದೆ ಎಂದು ದೇಶಾದ್ಯಂತ ವಿರೋಧ ಪಕ್ಷಗಳು ಟೀಕಿಸುತ್ತಿವೆ. ಈ ಹಿನ್ನಲೆಯಲ್ಲಿ, ಮುಸ್ಲಿಮರ ವಿರುದ್ಧ ದ್ವೇಷದ ರಾಜಕಾರಣ, ರಾಮನ ಹೆಸರಿನಲ್ಲಿ ಗೆಲುವು ಸಾಧಿಸಿದೆ ಎಂದು ತಿರುಮಾವಳವನ್ ಟೀಕಿಸಿದ್ದಾರೆ.

ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಸಂಬಂಧಿಸಿದಂತೆ ವಿಡುದಲೈ ಚಿರುತ್ತೈಗಳ್ (ಲಿಬರೇಶನ್ ಟೈಗರ್ಸ್) ಪಕ್ಷದ ನಾಯಕ ಹಾಗೂ ಸಂಸದ ತೊಲ್.ತಿರುಮಾವಳವನ್ ಪ್ರಕಟಿಸಿದ ‘ಎಕ್ಸ್’ ಸೈಟ್ ಪೋಸ್ಟ್‌ನಲ್ಲಿ, “ಮುಸ್ಲಿಮರ ವಿರುದ್ಧ ದ್ವೇಷದ ರಾಜಕಾರಣ ರಾಮನ ಹೆಸರಿನಲ್ಲಿ ಗೆಲುವು ಸಾಧಿಸಿದೆ.

ರಾಮ ಎಂಬ ಕ್ಷತ್ರಿಯ ಗುರುತನ್ನು ಆಯುಧವಾಗಿ ಬಳಸಿ, ಮೋದಿ ಎಂಬ ವೈಶ್ಯರೊಂದಿಗೆ ಸೇರಿ, ಅಮಾಯಕ ಶೂದ್ರ ಹಿಂದೂಗಳನ್ನು ಹಿಮ್ಮೆಟ್ಟಿಸಿ, ಅವರನ್ನು ಬೀಳಿಸಿದ ಬ್ರಾಹ್ಮಣ ಸನಾತನಿಯರ ರಾಜಕೀಯ ಜೂಜಿನ ವಿಜಯೋತ್ಸವವೇ ಅಯೋಧ್ಯೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮ.

ಹಿಂದುತ್ವದ ಹೆಸರಿನಲ್ಲಿ, ಶೈವ ಧರ್ಮ ಸೇರಿದಂತೆ ಇತರ ಎಲ್ಲ ಹಿಂದೂ ಅಸ್ಮಿತೆಗಳನ್ನು ವೈಷ್ಣವೀಕರಣಗೊಳಿಸುವ ಷಡ್ಯಂತ್ರವನ್ನು ಪ್ರದರ್ಶಿಸಲಾಗಿದೆ. ಇದು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ವಿರುದ್ಧ ಮಾತ್ರವಲ್ಲದೆ ಇಡೀ ರಾಷ್ಟ್ರ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಟೀಕಿಸಿದ್ದಾರೆ.

Tags: ಅಯೋಧ್ಯಆರ್‌.ಎಸ್‌.ಎಸ್‌ಉದ್ಘಾಟನೆಜೈ ಶ್ರೀರಾಮ್ತಿರುಮಾವಳವನ್ತೊಲ್.ತಿರುಮಾವಳವನ್ನರೇಂದ್ರ ಮೋದಿಬಿಜೆಪಿರಾಮ ಮಂದಿರ
Previous Post

ಮೋದಿ ಸರ್ಕಾರ ರಾಜ್ಯ ನಿಧಿಯನ್ನು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಲು ಯತ್ನಿಸಿತು:  ನೀತಿ ಆಯೋಗ ಅಧ್ಯಕ್ಷರ ಭಹಿರಂಗ ಹೇಳಿಕೆ!

Next Post

To Kill a Tiger: ಆಸ್ಕರ್ ನಾಮನಿರ್ದೇಶನ ಪಟ್ಟಿಯಲ್ಲಿ ಭಾರತದ ಬಗ್ಗೆ ಹೃದಯ ವಿದ್ರಾವಕ ಸಾಕ್ಷ್ಯಚಿತ್ರ: ಒಂದು ನೋಟ!

Next Post

To Kill a Tiger: ಆಸ್ಕರ್ ನಾಮನಿರ್ದೇಶನ ಪಟ್ಟಿಯಲ್ಲಿ ಭಾರತದ ಬಗ್ಗೆ ಹೃದಯ ವಿದ್ರಾವಕ ಸಾಕ್ಷ್ಯಚಿತ್ರ: ಒಂದು ನೋಟ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS