• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ; ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ! ಸಿದ್ದರಾಮಯ್ಯ

by Dynamic Leader
02/04/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಸಂಸತ್ತಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಹೇಳಿದರು.

ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು, ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. ಇವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರವನ್ನು ವ್ಯಾಪಕವಾಗಿ ಮಾಡುತ್ತಿದ್ದಾರೆ. ಆದರೆ, ಎಂ.ಲಕ್ಷ್ಮಣ್ ಅವರು ಅಪ್ಪಟ ಒಕ್ಕಲಿಗರು. ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ, ಆ ಕಾರಣಕ್ಕೇ ಲಕ್ಷ್ಮಣ್ ಅವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ನಮ್ಮ ನಾಡಿಗೆ ಪ್ರವಾಹ ಬಂದಾಗ ನರೇಂದ್ರ ಮೋದಿ ಬರಲಿಲ್ಲ; ಬರಗಾಲ ಬಂದಾಗಲೂ ಮೋದಿ ಬರಲಿಲ್ಲ. ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ; ಚುನಾವಣೆ ಬಂತು ನೋಡಿ – ಮೋದಿ ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಾರೆ ಎಂದು ವ್ಯಂಗ್ಯವಾಡಿದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ದೇವೇಗೌಡರು ಸಿದ್ದರಾಮಯ್ಯರಿಗೆ ಗರ್ವ ಇದೆ ಎನ್ನುತ್ತಿದ್ದಾರೆ.

ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ. ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಡಿದ ಜೆಡಿಎಸ್ ನವರು, ನನ್ನನ್ನೂ ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದು ಪುನರುಚ್ಚಿಸಿದರು.

ಆದ್ದರಿಂದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಬೇಕು. ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ ಎಂದು ಸವಾಲೆಸದರು.

ಪಶು ಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್,‌ ಚಾಮರಾಜ ಕ್ಷೇತ್ರದ ಶಾಸಕರಾದ ಹರೀಶ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ಮತ್ತು ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರುಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರು ಹಾಗೂ ಬ್ಲಾಕ್ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Tags: 5 ಗ್ಯಾರಂಟಿMysore KodaguParliament ElectionSiddaramaiahಕಾಂಗ್ರೆಸ್ಕಾಂಗ್ರೆಸ್ ಗ್ಯಾರಂಟಿಗ್ಯಾರಂಟಿ ಯೋಜನೆಜಿಜೆಪಿಜೆಡಿಎಸ್ಬಿಜೆಪಿ ಜೆಡಿಎಸ್ ಮೈತ್ರಿಮೈಸೂರು ಕೊಡಗುಸಂಸತ್ ಚುನಾವಣೆಸಿದ್ದರಾಮಯ್ಯಹೆಚ್.ಡಿ.ಕುಮಾರಸ್ವಾಮಿಹೆಚ್.ಡಿ.ದೇವೇಗೌಡ
Previous Post

ದೆಹಲಿ ಸಂಸದ ಸಂಜಯ್ ಸಿಂಗ್‌ಗೆ ಜಾಮೀನು!

Next Post

ಬಿಜೆಪಿ ಮತ್ತೆ ಗೆದ್ದರೆ Paytm ಬದಲಿಗೆ PayPM: ಪ್ರಶಾಂತ್ ಭೂಷಣ್

Next Post

ಬಿಜೆಪಿ ಮತ್ತೆ ಗೆದ್ದರೆ Paytm ಬದಲಿಗೆ PayPM: ಪ್ರಶಾಂತ್ ಭೂಷಣ್

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS