• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಕ್ರೈಂ ರಿಪೋರ್ಟ್ಸ್

Ayahuasca: ಭಾರತದಲ್ಲಿ ಆಧ್ಯಾತ್ಮಿಕ ಭಾವಪರವಶತೆಯ ಹೆಸರಿನಲ್ಲಿ ಅಯಾಹುವಾಸ್ಕಾ ಡ್ರಗ್ಸ್ ಉತ್ಸವಗಳು!

by Dynamic Leader
16/06/2024
in ಕ್ರೈಂ ರಿಪೋರ್ಟ್ಸ್
0
0
SHARES
2
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ಅಯಾಹುವಾಸ್ಕಾ ಎಂಬುದು ಆಧ್ಯಾತ್ಮಿಕ ಭಾವಪರವಶತೆಯ ಹಬ್ಬವಾಗಿ ಪ್ರಪಂಚದಾದ್ಯಂತ ಕಂಡುಬರುವ ಒಂದು ಘಟನೆಯಾಗಿದೆ. ಅಯಾಹುವಾಸ್ಕಾ ಹಬ್ಬವು ಅಮೆಜಾನ್ ಕಾಡು ಮತ್ತು ದಕ್ಷಿಣ ಅಮೆರಿಕಾದ ದೇಶಗಳಲ್ಲಿ ಸ್ಥಳೀಯ ಸಂಸ್ಕೃತಿಯೊಂದಿಗೆ ಸಂಬಂಧಿಸಿದ ಹಬ್ಬವಾಗಿದೆ.

ಅಯಾಹುವಾಸ್ಕಾ ಮೂಲಿಕೆಯಿಂದ ಮಾಡಿದ ಕಷಾಯ ತರಹದ ಪಾನೀಯವಾಗಿದೆ. ಮಾನಸಿಕ ಕಾಯಿಲೆಗಳನ್ನು ಗುಣಪಡಿಸಲು ಮತ್ತು ಆಧ್ಯಾತ್ಮಿಕ ಭಾವಪರವಶತೆಯನ್ನು ಉಂಟುಮಾಡಲು ಇದನ್ನು ಬಳಸಲಾಗುತ್ತಿದೆ. ಆದರೆ ಈಗ ಅದೊಂದು ವ್ಯಸನಕಾರಿ ವಸ್ತುವಾಗಿ ಬದಲಾಗಿರುವುದು ದುರಾದೃಷ್ಟ.

ಮನಸ್ಸಿನಲ್ಲಿ ಭ್ರಮೆಯನ್ನು ಉಂಟುಮಾಡುವ ಅಯಾಹುವಾಸ್ಕಾದ ಬಳಕೆಯನ್ನು ಭಾರತದಲ್ಲಿ ಮಾದಕ ದ್ರವ್ಯ ನಿಗ್ರಹ (NDPS Act) ಕಾಯ್ದೆಯಡಿ ನಿಷೇಧಿಸಲಾಗಿದೆ. ಆದರೂ ನಿಷೇಧವನ್ನು ಉಲ್ಲಂಘಿಸಿ ಈ ಮಾದಕ ದ್ರವ್ಯ (Narcotics) ಗಿಡಮೂಲಿಕೆ ಉತ್ಸವ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿ ಇಲ್ಲಿ ಸದ್ದು ಮಾಡುತ್ತಿದೆ.

ಜೂನ್ 15 ರಿಂದ 2 ದಿನಗಳ ಕಾಲ ಆಧ್ಯಾತ್ಮಿಕ ಭೂಮಿಯೆಂದು ಕರೆಯಲ್ಪಡುವ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಬಗ್ಗೆ ದೊರೆತ ಗುಪ್ತ ಮಾಹಿತಿ ಮೇರೆಗೆ ಕೇಂದ್ರ ಮಾದಕ ವಸ್ತು ನಿಯಂತ್ರಣ ದಳ, ವಿಶೇಷ ಪಡೆ ರಚಿಸಿ ಶೋಧ ನಡೆಸಿದೆ. ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ರಷ್ಯಾದ ಒಬ್ಬ ಪುರುಷ ಮತ್ತು ಮಹಿಳೆಯನ್ನು ಕರೆತಂದು ವಿಚಾರಣೆಗೆ ಒಳಪಡಿಸಿದಾಗ ಅವರು ನೀಡಿದ ಹೇಳಿಕೆಗಳು ಅಧಿಕಾರಿಗಳನ್ನು ಬೆಚ್ಚಿಬೀಳುವಂತೆ ಮಾಡಿದೆ.

ಆಧ್ಯಾತ್ಮಿಕತೆ ಮತ್ತು ಪ್ರವಾಸೋದ್ಯಮದಲ್ಲಿ ಉತ್ಕೃಷ್ಟವಾಗಿರುವ ಮನಾಲಿಯ ರಿಷಿಕೇಶದಲ್ಲಿ ಅಯಾಹುವಾಸ್ಕಾ ಉತ್ಸವವನ್ನು ಆಯೋಜಿಸಲಾಗಿದ್ದು, ಅದರ ಯಶಸ್ಸನ್ನು ಆಚರಿಸಲು ಅವರು ತಿರುವಣ್ಣಾಮಲೈಗೆ ಬಂದಿದ್ದಾರೆ. 20 ರಿಂದ 35 ವರ್ಷ ವಯಸ್ಸಿನ ಪುರುಷರು ಮತ್ತು ಮಹಿಳೆಯರು ಅವರ ಗುರಿಯಾಗಿದ್ದಾರೆ. ಅಯಾಹುವಾಸ್ಕಾ ಕಷಾಯವನ್ನು ಕುಡಿದು, ದೇಹದಲ್ಲಿ ಸಣ್ಣ ರಂಧ್ರವನ್ನು ಏರ್ಪಡಿಸಿ, ಕಪ್ಪೆ ವಿಷವನ್ನು ಚುಚ್ಚುವುದರ ಮೂಲಕ ಅಮಲನ್ನು ಉಂಟು ಮಾಡುತ್ತಾರೆ.

ಅಮಲು ಉತ್ತುಂಗಕ್ಕೇರಿದಾಗ ಅಲ್ಲಿ ಅನಿಯಂತ್ರಿತ ಅತಿಕ್ರಮಣಗಳು ಮತ್ತು ಅಶ್ಲೀಲತೆಯನ್ನು ಪ್ರದರ್ಶಿಸಲಾಗುತ್ತದೆ. ಈ ಭ್ರಮೆಯು ಸುಮಾರು 6 ಗಂಟೆಗಳವರೆಗೆ ಇರುತ್ತದೆ. ಇದಕ್ಕಾಗಿ ಒಬ್ಬ ವ್ಯಕ್ತಿಗೆ ಒಂದು ಸಾವಿರ ಡಾಲರ್ ವರೆಗೆ ಅಂದರೆ ಭಾರತೀಯ ಕರೆನ್ಸಿಯಲ್ಲಿ 80 ಸಾವಿರ ರೂಪಾಯಿಗೂ ಹೆಚ್ಚು ಶುಲ್ಕ ವಿಧಿಸಲಾಗುತ್ತದೆ. ಬಂಧಿತ ರಷ್ಯನ್ನರಿಂದ ಅಯಾಹುವಾಸ್ಕಾ ಹೊರತುಪಡಿಸಿ, ಮ್ಯಾಜಿಕ್ ಅಣಬೆಗಳು ಮತ್ತು ಕಂಬೋ ಎಂದು ಕರೆಯಲ್ಪಡುವ ಕಪ್ಪೆ ವಿಷವನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಅವರ ಬಳಿ 239 ಗ್ರಾಂ ಸೈಲೋಸಿಬಿನ್, ಟಿಎಂಡಿಯಂತಹ ಮಾನಸಿಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸುವ ರಾಸಾಯನಿಕವಿರುವುದು ಪತ್ತೆಯಾಗಿದೆ. ತಮಿಳುನಾಡಿನ ಇತರ ಯಾವ ಪ್ರದೇಶಗಳಲ್ಲಿ ಇದೇ ರೀತಿಯ ಗಿಡಮೂಲಿಕೆ ಉತ್ಸವಗಳನ್ನು ನಡೆಸಲು ಯೋಜಿಸಲಾಗಿದೆ ಮತ್ತು ಯಾರೆಲ್ಲ ಭಾಗಿಯಾಗಿದ್ದಾರೆ ಎಂದು ಮಾದಕ ದ್ರವ್ಯ ನಿಗ್ರಹ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಭಾರತದಲ್ಲಿ ಅಧ್ಯಾತ್ಮದ ಹೆಸರಲ್ಲಿ ಇಂತಹ ಮಾನಸಿಕ ಗೊಂದಲ ಉಂಟು ಮಾಡುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ.

Tags: AyahuascaDrugs PartySpiritual Ecstasyಅಯಾಹುವಾಸ್ಕಾಆಧ್ಯಾತ್ಮಿಕ ಭಾವಪರವಶತೆಕಷಾಯಡ್ರಗ್ಸ್ ಪಾರ್ಟಿತಿರುವಣ್ಣಾಮಲೈಭ್ರಮೆಮಾನಸಿಕ ಕಾಯಿಲೆರಿಷಿಕೇಶ್ವ್ಯಸನಕಾರಿ ವಸ್ತು
Previous Post

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಹಿಂತೆಗೆದುಕೊಳ್ಳದಿದ್ದರೆ ಬಿಜೆಪಿಯಿಂದ ಬೀದಿಗಿಳಿದು ಹೋರಾಡುವ ಎಚ್ಚರಿಕೆ!

Next Post

ಫ್ರಿಡ್ಜ್‌ನಲ್ಲಿ ದನದ ಮಾಂಸ; 11 ಮನೆ ಧ್ವಂಸ! ಮಧ್ಯಪ್ರದೇಶದಲ್ಲಿ ಪೊಲೀಸರ ಕ್ರಮ!

Next Post

ಫ್ರಿಡ್ಜ್‌ನಲ್ಲಿ ದನದ ಮಾಂಸ; 11 ಮನೆ ಧ್ವಂಸ! ಮಧ್ಯಪ್ರದೇಶದಲ್ಲಿ ಪೊಲೀಸರ ಕ್ರಮ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS