• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಸಿದ್ದರಾಮಯ್ಯ ನವರೇ… ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by Dynamic Leader
30/07/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ ಸಿದ್ದರಾಮಯ್ಯ ನವರೇ.. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮೂಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ, ಇದರಲ್ಲಿ ‘ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ?’ ‘ಸುಳ್ಳು ಸಂಶೋಧಕ ಸಿದ್ದರಾಮಯ್ಯ’ನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ, ಇನ್ನಿತರರ ಮೇಲೆ ಸಿಡಿಸಲು ಹೊರಟು ಲಜ್ಜೆಗೇಡಿತನದ ಪರಮಾವಧಿ ಮೆರೆದಿದ್ದೀರಿ ಎಂದು ಕಿಡಿಕಾರಿದ್ದಾರೆ.

‘ಮೂಡಾ ಭೂಮಿಯನ್ನು ಮುಖ್ಯಮಂತ್ರಿ ಕುಟುಂಬ ಮುಕ್ಕಿ ತಿಂದಿದೆ’ ಎಂದು ಇಡೀ ದೇಶ ಮಾತನಾಡುತ್ತಿದೆ. ದಾಖಲೆಗಳು ಹಾದಿಬೀದಿಯಲ್ಲಿ ಹೊರಳಾಡುತ್ತಿವೆ! ನಿಮ್ಮ ಸಮಾಜವಾದಿ ಮುಖವಾಡ, ಅಹಿಂದಾ ಅಲಂಕಾರ, ಸತ್ಯವಂತನ ಸಿಂಗಾರ.. ಇದೆಲ್ಲವೂ ಕಳಚಿಬಿದ್ದಿದೆ. ಅಸಹ್ಯವಾಗುವಷ್ಟು ಅನಾಚಾರ ಮಾಡಿ ಅಹಿಂದ ರಕ್ಷಣೆ ಪಡೆಯಲು ಯತ್ನಿಸುತ್ತಿರುವ ನಿಮ್ಮ ಅಸಹಾಯತೆ ನನಗೆ ಅರ್ಥವಾಗುತ್ತದೆ. ಪಾಪ.. ನಿಮ್ಮ ಪಕ್ಷದವರೇ ನಿಮಗೆ ‘ಶರಪಂಜರ’ ಸೃಷ್ಟಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕುಮಾರಸ್ವಾಮಿ ರಾಜ್ಯಕ್ಕೆ ಕೈಗಾರಿಕೆ ತರಲಿ, ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎನ್ನುತ್ತೀರಿ. ಅದು ನನಗೆ ಗೊತ್ತಿದೆ. ನಾನು ಕೇಂದ್ರ ಸಚಿವನಾಗಿ ಇನ್ನೂ ಎರಡು ತಿಂಗಳಾಗಿಲ್ಲ. ರಾಜ್ಯದ ಕೆಲಸ ಮಾಡೋಣ ಎಂದರೆ ನಿಮ್ಮ ಅಸಹಕಾರ, ಅಸೂಯೆ ಅಡ್ಡಿ. ಒಂದು ನಾಲಿಗೆ ಮೇಲೆ ಸಹಕಾರ, ಅಸಹಕಾರ.. ಇದು ಹೇಗೆ ಸಾಧ್ಯ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ, ಎರಡು ನೀತಿ.. ನಿಮ್ಮ ಐಡಿಯಾಲಜಿ! ಆ ಸಿದ್ದಾಲಜಿ (Siddalogy) ನನಗೆ ಗೊತ್ತಿಲ್ಲದಲ್ಲ ಸಿದ್ದರಾಮಯ್ಯನವರೇ.. ರಾಜ್ಯಕ್ಕೆ ಒಳ್ಳೆಯದಾಗಲಿ ಎನ್ನುವ ಆಶಯ ಇರಲಿ, ನನ್ನ ಮೇಲೆ ಅಸೂಯೆ ಏಕೆ? ನಿಮ್ಮ ಸಕಲ ಗುಣಗಳ ಸಿದ್ದಾಲಜಿ ನನಗೆ ಚೆನ್ನಾಗಿಯೇ ಗೊತ್ತಿದೆ ಎಂದು ಹೇಳಿದ್ದಾರೆ.

Tags: H.D.KumaraswamyMUDAMuda ScamMysore Urban Development AuthoritySiddaramaiahಜೆಡಿಎಸ್ಬಿಜೆಪಿಮುಡ ಹಗರಣಮುಡಾಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಸಿದ್ದರಾಮಯಹೆಚ್.ಡಿ.ಕುಮಾರಸ್ವಾಮಿ
Previous Post

ಕೇರಳದಲ್ಲಿ ಭೀಕರ ಭೂಕುಸಿತ: ಮೃತರ ಸಂಖ್ಯೆ 56ಕ್ಕೆ ಏರಿಕೆ… ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನೆ!

Next Post

ರಾಜ್ಯ ಸರ್ಕಾರ ಕೋಮುವಾದಿಗಳಿಗೆ ಆಸರೆಯಾಗುತ್ತಿದೆಯೇ?: ವೆಲ್ಫೇರ್ ಪಾರ್ಟಿ

Next Post

ರಾಜ್ಯ ಸರ್ಕಾರ ಕೋಮುವಾದಿಗಳಿಗೆ ಆಸರೆಯಾಗುತ್ತಿದೆಯೇ?: ವೆಲ್ಫೇರ್ ಪಾರ್ಟಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS