• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ದಲಿತರು ಇಸ್ಲಾಂ – ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡರೂ ಅವರ ‘ಪರಿಶಿಷ್ಟ ಜಾತಿ’ ಮೀಸಲಾತಿ ಸೌಲಭ್ಯವನ್ನು ಮುಂದುವರಿಸಿ – ಡಿ.ಸಿ.ಪ್ರಕಾಶ್

by Dynamic Leader
02/09/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ಬೆಂಗಳೂರು: ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟರಿಗೆ ಪರಿಶಿಷ್ಟ ಜಾತಿಯ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಬಾರದೆಂದು ಸುಪ್ರೀಂ ಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್ ನೇತೃತ್ವದ ವಿಚಾರಣಾ ಆಯೋಗದ ಮುಂದೆ ಮನವಿ ಸಲ್ಲಿಸಲು ರಾಜ್ಯದ ದಲಿತ ಸಂಘಟನೆಗಳು ಮುಂದಾಗಿವೆ ಎಂದು ಇಂದು ಪ್ರಜಾವಾಣಿ ದಿನ ಪತ್ರಿಕೆಯಲ್ಲಿ ವರದಿಯಾಗಿದೆ.

ದಲಿತರು ಇಸ್ಲಾಂ-ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೂ ಅವರು ಇನ್ನೂ ದಲಿತರಾಗಿಯೇ ಕಾಲೋನಿಗಳಲ್ಲಿ, ಕೇರಿಗಳಲ್ಲಿ, ಹಟ್ಟಿಗಳಲ್ಲಿ, ಕೊಳಗೇರಿ ಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದಾರೆ. ಅದುಮಾತ್ರವಲ್ಲ, ಇನ್ನೂ ಅವರೆಲ್ಲರೂ ಅಸ್ಪೃಶ್ಯರಾಗಿ ಬಡತನದಲ್ಲೇ ಉಳಿದಿದ್ದಾರೆ ಎಂಬುದನ್ನು ದಲಿತ ಸಂಘಟನೆಗಳು ಮರೆತಿದ್ದು ಏಕೆ ಎಂಬುದು ಅರ್ಥವಾಗುತ್ತಿಲ್ಲ.

‘ಪರಿಶಿಷ್ಟ ಜಾತಿ’ ಸ್ಥಾನ ನೀಡಿ ಮೀಸಲಾತಿ ಸೌಲಭ್ಯ ಕಲ್ಪಿಸಬಾರದೆಂಬ ಸ್ಪಷ್ಟ ನಿಲುವನ್ನು ತೆಗೆದುಕೊಂಡಿರುವ ರಾಜ್ಯದ ಕೆಲವೊಂದು ದಲಿತ ಸಂಘಟನೆಗಳ ನಾಯಕರಿಗೆ ಸನಾತನದ ಸೋಂಕು ತಗಲಿದೆ ಎಂದು ಭಾವಿಸುತ್ತೇನೆ. ಅಂಬೇಡ್ಕರ್, ಪೆರಿಯಾರ್ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಮಾತನಾಡುವ ನಿಜವಾದ ಅಂಬೇಡ್ಕರ್ ವಾದಿಗಳು ಯಾರೂ ಕೂಡ ಇಂತಹ ಕುಲಗೇಡಿತನವನ್ನು ಮಾಡಲಾರರು. 

ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡವರನ್ನೂ ಸೇರಿಸಿಕೊಂಡು ಮೀಸಲಾತಿಯನ್ನು ಹೆಚ್ಚಿಸಿ, ಸ್ವಜಾತಿಯ ಇಸ್ಲಾಂ ಮತ್ತು ಕ್ರೈಸ್ತ ಧರ್ಮದವರಿಗೂ ಪರಿಶಿಷ್ಟ ಜಾತಿಯ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿಕೊಡುವ ಕೆಲಸವನ್ನು ರಾಜ್ಯದ ಪ್ರಜ್ಞಾವಂತ ದಲಿತ, ಕ್ರೈಸ್ತ ಮತ್ತು ಮುಸ್ಲಿಂ ಸಂಘಟನೆಗಳು ಜಂಟಿಯಾಗಿ ಮಾಡಬೇಕೆಂಬುದು ನಮ್ಮೆಲ್ಲರ ಆಗ್ರಹವಾಗಿದೆ. 

ನಾಳೆ ಬೆಂಗಳೂರಿನ ಅಂಬೇಡ್ಕರ್ ಭವನಕ್ಕೆ ತೆರಳಿ, ಸ್ವಜಾತಿಯ ಇಸ್ಲಾಂ ಮತ್ತು ಕ್ರೈಸ್ತ ಧರ್ಮದವರಿಗೆ ಪರಿಶಿಷ್ಟ ಜಾತಿಯ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಬಾರದೆಂದು ಮನವಿ ಸಲ್ಲಿಸುವವರು ಖಂಡಿತವಾಗಿಯೂ ಸ್ಪರ್ಶಿಸಬಹುದಾದ (Touchable) ದಲಿತ ಜನಾಂಗದವರೇ ಆಗಿರುತ್ತಾರೆ. ಇವರೆಲ್ಲರೂ ‘ಕಾವಿ’ ಮನಸ್ಥಿತಿಯ ವ್ಯಸನಿಗಳು. ಇವರಿಗೆ ನಮ್ಮ ನೋವುಗಳು, ದುಃಖ ದುಮ್ಮಾನಗಳು, ಇತಿಹಾಸ ಯಾವುದೂ ಅರ್ಥವಾಗುವುದಿಲ್ಲ.

ನಮ್ಮಿಂದ ಒಬ್ಬ ಮಾತಾಂತರಗೊಂಡು ಇಸ್ಲಾಂ ಧರ್ಮಕ್ಕೆ ಅಥವಾ ಕ್ರೈಸ್ತ ಧರ್ಮಕ್ಕೆ ಹೋದ ಮಾತ್ರಕ್ಕೆ ಅವನ ಮೀಸಲಾತಿಯ ಪಾಲನ್ನು ಸರ್ಕಾರ ಇತರರಿಗೆ ಹಂಚಿ ಕೊಡುವುದಿಲ್ಲ. ಅದು ಹಾಗೆಯೇ… ಅಲ್ಲಿಯೇ ಉಳಿದಿರುತ್ತದೆ. ಅದನ್ನು ಮತ್ತೆ ಅವನಿಗೆ ಕೊಡುವುದರಲ್ಲಿ ತಪ್ಪೇನಿದೆ. ಅದನ್ನು ಅವನು ಮತ್ತೆ ಕೇಳಿ ಪಡೆಯುವುದರಲ್ಲಿ ನಿಮಗೇನು ತೊಂದರೆ. ಇದನ್ನು ಸ್ವಜಾತಿ ವಿರೋಧಿ ಸಂಘಟನೆಗಳು ಅರ್ಥಮಾಡಿಕೊಂಡರೆ, ಅದುವೇ ನಿಜವಾದ ಸಾಮಾಜಿಕ ನ್ಯಾಯ; ಅಂಬೇಡ್ಕರ್ ವಾದ.  

ಪ್ರಗತಿಪರ, ಜಾತ್ಯತೀತ, ಸಾಮಾಜಿಕ ನ್ಯಾಯ ಮಾತನಾಡುವ ಸಮಾಜವಾದಿ ಹಿನ್ನೆಲೆಯ ನಾಯಕ, ನಮ್ಮೆಲ್ಲರ ನೆಚ್ಚಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಈ ವಿಚಾರದಲ್ಲಿ ಗಮನಹರಿಸಿ, ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟರಿಗೆ ಮತ್ತೆ ಅದೇ ಪರಿಶಿಷ್ಟ ಜಾತಿಯ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿಕೊಡಬೇಕೆಂದು (ಮುಂದುವರಿಸಬೇಕೆಂದು) ಸಮುದಾಯದ ಪರವಾಗಿ ಮನವಿ ಮಾಡುತ್ತೇವೆ. 

Tags: Dalit ChristianDalit MovementDalit MuslimReservationದಲಿತ ಕ್ರೈಸ್ತರುದಲಿತ ಮೀಸಲಾತಿದಲಿತ ಮುಸ್ಲಿಮರುಪರಿಶಿಷ್ಟ ಜಾತಿ ಮೀಸಲಾತಿಮತಾಂತರ
Previous Post

ಸಸ್ಯಾಹಾರಿ ಉತ್ಪನ್ನಗಳ ಜೊತೆಗೆ ಮಾಂಸಾಹಾರಿ ಉತ್ಪನ್ನಗಳನ್ನು ಬೆರೆಸಿ ಮಾರಾಟ? ವಿವಾದದ ಸುಳಿಯಲ್ಲಿ ಪತಂಜಲಿ… ಹೈಕೋರ್ಟ್ ನೋಟೀಸ್!

Next Post

ಜಾತಿವಾರು ಜನಗಣತಿ ಪರವೋ ಅಥವಾ ವಿರೋಧವೋ ಆರ್‌ಎಸ್‌ಎಸ್ ಸ್ಪಷ್ಟಪಡಿಸಬೇಕು – ಮಲ್ಲಿಕಾರ್ಜುನ ಖರ್ಗೆ

Next Post

ಜಾತಿವಾರು ಜನಗಣತಿ ಪರವೋ ಅಥವಾ ವಿರೋಧವೋ ಆರ್‌ಎಸ್‌ಎಸ್ ಸ್ಪಷ್ಟಪಡಿಸಬೇಕು - ಮಲ್ಲಿಕಾರ್ಜುನ ಖರ್ಗೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS