• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಪ್ರಧಾನಿ ನರೇಂದ್ರ ಮೋದಿಯ “ಡಿಎಂಕೆ ದ್ರೋಹ” ಆರೋಪಕ್ಕೆ ಕೌಂಟರ್: ತಮಿಳುನಾಡು ರಾಜಕೀಯದಲ್ಲಿ ಬಿಜೆಪಿ ಹಸ್ತಕ್ಷೇಪವೇ ನಿಜದ ಸತ್ಯ!

ತಿಳುವಳಿಕೆ ಇಲ್ಲದ ಪ್ರಧಾನಿ ನರೇಂದ್ರ ಮೋದಿ ಅವರು, ನಿರಾಸೆಯ ಮಾತುಗಳನ್ನಾಡಿ ಕಾಂಗ್ರೆಸ್‌ ಡಿಎಂಕೆ 'ಬೆನ್ನಿಗೆ ಚೂರಿ ಹಾಕಿದೆ' ಎಂದು ಹೇಳಿದ್ದಾರೆ.

by Dynamic Leader
10/05/2026
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ರಾಜಕೀಯ ಕುರಿತು ನೀಡಿದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಮಾಜ ಸೇವಕ ಹಾಗೂ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡ ಅಗರ ಪ್ರಕಾಶ್ ಅವರು ಪ್ರಧಾನಿಯ ಮಾತುಗಳನ್ನು ಕಟುವಾಗಿ ಖಂಡಿಸಿದ್ದಾರೆ.

ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ‘ಎಕ್ಸ್’ ಸೈಟ್ ನಲ್ಲಿ “ಇಂದು ತಮಿಳುನಾಡಿನ ಸ್ಥಿತಿಯನ್ನು ನೋಡಿ. 25 ರಿಂದ 30 ವರ್ಷಗಳ ಕಾಲ ಕಾಂಗ್ರೆಸ್ ಡಿಎಂಕೆ ಜೊತೆ ಆಪ್ತ ಸಂಬಂಧ ಹೊಂದಿತ್ತು. ಹಲವಾರು ಬಾರಿ ಡಿಎಂಕೆಯ ಮೈತ್ರಿಯೇ ಕಾಂಗ್ರೆಸ್ ಅನ್ನು ಸಂಕಷ್ಟದಿಂದ ಪಾರು ಮಾಡಿತ್ತು. 2014ರ ಮುನ್ನ 10 ವರ್ಷ ಆಡಳಿತ ನಡೆಸಿದ ಸರ್ಕಾರವೂ ಬಹುಪಾಲು ಡಿಎಂಕೆಯ ಬೆಂಬಲದಿಂದ ಉಳಿದಿತ್ತು. ಆದರೆ ರಾಜಕೀಯ ಗಾಳಿ ಬದಲಾಗುತ್ತಿದ್ದಂತೆಯೇ, ಕಾಂಗ್ರೆಸ್ ಅದೇ ಡಿಎಂಕೆಗೆ ಬೆನ್ನಿಗೆ ಚೂರಿ ಹೊಡೆದಿದೆ. ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಮೊದಲ ಅವಕಾಶದಲ್ಲೇ ದ್ರೋಹ ಮಾಡಿತು. ಈಗ ಮತ್ತೆ ರಾಜಕೀಯವಾಗಿ ಬದುಕಲು ಇನ್ನೊಂದು ಪಕ್ಷದ ಬೆನ್ನೇರಬೇಕಾಗಿದೆ…” ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಅಗರ ಪ್ರಕಾಶ್ ಅವರು, ತಮಿಳುನಾಡಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಉಲ್ಲೇಖಿಸಿ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ ಸಿ.ಜೋಸಪ್ ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ನಿರಾಕರಿಸಿ 5 ದಿನಗಳಿಂದ ಅವಕಾಶ ನಿರಾಕರಿಸಿರುವುದನ್ನು ಪ್ರಶ್ನಿಸಿದ್ದಾರೆ.

“ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯಾಗಿ (108) ಹೊರಹೊಮ್ಮಿದ ವಿಜಯ್ ಅವರು ಮೂರು ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಆಹ್ವಾನಿಸುವಂತೆ ಮನವಿ ಮಾಡಿಕೊಂಡರು. ತಮ್ಮ ಮೆಜಾರಿಟಿಯನ್ನು ವಿಧಾನಸಭೆಯಲ್ಲಿ ಸಾಬೀತುಪಡಿಸುವುದಾಗಿಯೂ ತಿಳಿಸಿದ್ದರು. ಆದರೂ ಅವರಿಗೆ ಅವಕಾಶ ನೀಡಲಿಲ್ಲ. ತಮಿಳುನಾಡು ರಾಜ್ಯಪಾಲರನ್ನು ದೆಹಲಿಯಿಂದ ನಿಯಂತ್ರಿಸಿದ್ದು ಯಾರು?” ಎಂದು ಪ್ರಶ್ನಿಸಿದ್ದಾರೆ.

ಇದಲ್ಲದೆ, ಬಿಜೆಪಿ ನೇತೃತ್ವದ ಮೈತ್ರಿಕೂಟವನ್ನು ಹಿಂಬಾಗಿಲಿನಿಂದ ಅಧಿಕಾರಕ್ಕೆ ತರುವ ಪ್ರಯತ್ನ ನಡೆದಿತ್ತು ಎಂದು ಆರೋಪಿಸಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. “ವಿಜಯ್ ಅವರು ಮುಖ್ಯಮಂತ್ರಿ ಆಗುವುದನ್ನು ತಡೆಯಲು, ಎಐಡಿಎಂಕೆಯನ್ನು ಬಳಸಿಕೊಂಡು ಬಿಜೆಪಿ ಮೈತ್ರಿ ಸರ್ಕಾರವನ್ನು ಅಡ್ಡದಾರಿಯಲ್ಲಿ ತರಲು ಯತ್ನಿಸಲಾಯಿತು. ಯಾರಿಗೂ ಬಹುಮತ ಇಲ್ಲ ಎಂಬ ನೆಪದಲ್ಲಿ ರಾಷ್ಟ್ರಪತಿ ಆಳ್ವಿಕೆ ತರಲು ಕೂಡ ಯೋಜನೆ ರೂಪಿಸಲಾಗಿತ್ತು” ಎಂದು ಆರೋಪಿಸಿದ್ದಾರೆ.

“ತಮಿಳುನಾಡಿನಲ್ಲಿ ಜಾತ್ಯತೀತ ಸರ್ಕಾರ ರಚನೆ ಮಾಡುವ ಮೂಲಕ ಸಂವಿಧಾನ, ಸಾಮಾಜಿಕ ನ್ಯಾಯ ರಕ್ಷಣೆಗೆ ಕಾಂಗ್ರೆಸ್ ಮುಂದಾಗಿತ್ತು. ಆ ಕಾರಣದಿಂದಲೇ ಇಂದು ವಿಜಯ್ ಅವರು ತಮಿಳುನಾಡಿನಲ್ಲಿ ಜ್ಯಾತ್ಯತೀತ ಸರ್ಕಾರವನ್ನು ರಚಿಸಿದ್ದಾರೆ. ಈ ತಿಳುವಳಿಕೆ ಇಲ್ಲದ ಪ್ರಧಾನಿ ನರೇಂದ್ರ ಮೋದಿ ಅವರು, ನಿರಾಸೆಯ ಮಾತುಗಳನ್ನಾಡಿ ಕಾಂಗ್ರೆಸ್‌ ಡಿಎಂಕೆ  ‘ಬೆನ್ನಿಗೆ ಚೂರಿ ಹಾಕಿದೆ’ ಎಂದು ಹೇಳಿದ್ದಾರೆ. ಇದು ಬಿಜೆಪಿಯ ಸಂಸ್ಕೃತಿ. ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಅಲ್ಲ” ಎಂದು ಕಿಡಿಕಾರಿದ್ದಾರೆ.

“ಪ್ರಧಾನಿ ಮೋದಿ ಅವರ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು, ಅದನ್ನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಅಗರ ಪ್ರಕಾಶ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags: CM VijayTamilnadu PoliticsTVKಕಾಂಗ್ರೆಸ್ಟಿವಿಕೆತಮಿಳುನಾಡು ರಾಜಕೀಯನರೇಂದ್ರ ಮೋದಿಬಿಜೆಪಿಮುಖ್ಯಮಂತ್ರಿ ವಿಜಯ್ವಿಜಯ್
Previous Post

ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ 73 ಆರ್‌ಟಿಐ ಅರ್ಜಿಗಳಿಗೆ ಮಾಹಿತಿ ಒದಗಿಸಲು ಆಯೋಗಕ್ಕೆ ದೂರು!

Next Post

ಕಳ್ಳತನ ದೊಡ್ಡದು, ಪ್ರತಿಫಲವೂ ಅಷ್ಟೇ ದೊಡ್ಡದು – ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ನೇಮಕಕ್ಕೆ ರಾಹುಲ್ ಕಿಡಿ!

Next Post

ಕಳ್ಳತನ ದೊಡ್ಡದು, ಪ್ರತಿಫಲವೂ ಅಷ್ಟೇ ದೊಡ್ಡದು - ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ನೇಮಕಕ್ಕೆ ರಾಹುಲ್ ಕಿಡಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS