• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಬೆಚ್ಚಿ ಬೀಳಿಸುವ ಘಟನೆಗಳ ಜೊತೆಗೆ ಕಾಡಿನಲ್ಲಿ ಸುತ್ತಾಡಿಸುವ ಡಿಸೆಂಬರ್ 24! ಸಿನಿಮಾ ರಿವ್ಯೂ

by Dynamic Leader
11/02/2023
in ಸಿನಿಮಾ
0
0
SHARES
1
VIEWS
Share on FacebookShare on Twitter

ಅರುಣ್ ಜಿ.,

ಬೆಂಗಳೂರು: ಸೈನ್ಸ್‌ ಜೊತೆಗೆ ಹಾರರ್‌, ಥ್ರಿಲ್ಲರ್‌ ಅಂಶಗಳನ್ನು ಹೊಂದಿಸೋದು ಕಷ್ಟ. ಇಂಥ ಸಿನಿಮಾಗಳು ಕನ್ನಡದಲ್ಲಿ ಬಹಳ ಅಪರೂಪವಾಗುತ್ತಿವೆ. ಈ ಹೊತ್ತಲ್ಲಿ ಜ್ಞಾನದ ಜೊತೆಗೆ ಕಲ್ಪನೆಯನ್ನು ಬೆಸುಗೆ ಹಾಕಿ ದೃಶ್ಯದ ಮೂಲಕಗ ತೆರೆಗೆ ಬಂದಿರುವ ಚಿತ್ರ ಡಿಸೆಂಬರ್ 24.

ʻನವಜಾತ ಶಿಶುಗಳ ಮರಣʼ ಎನ್ನುವ ಸುದ್ದಿಗಳನ್ನು ಆಗಾಗ ನೋಡುತ್ತಿರುತ್ತೇವಲ್ಲಾ? ಒಂದೇ ಏಟಿಗೆ ಅದಕ್ಕೆ ಕಾರಣ ಮತ್ತು ಪರಿಹಾರವನ್ನು ಎರಡನ್ನೂ ಹುಡುಕುವ ಪ್ರಯತ್ನ ಮಾಡಿರುವ ಸಿನಿಮಾ ಇದು. 2015 ರಿಂದ 2019ರ ನಡುವೆ ಹುಲಿಯೂರು ದುರ್ಗ ಸುತ್ತಮುತ್ತ ಹಲವಾರು ಮಕ್ಕಳು ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪುವ ನೈಜ ಘಟನೆಯನ್ನು ಇಟ್ಟುಕೊಂಡು ತಯಾರಾದ ಹಾರರ್, ಥ್ರಿಲ್ಲರ್ ಚಿತ್ರ ಡಿಸೆಂಬರ್ 24

ಆಗತಾನೆ ಹುಟ್ಟಿದ ಮಕ್ಕಳು ಉಸಿರಾಟದ ಸಮಸ್ಯೆಯಿಂದ ಇದ್ದಕ್ಕಿದ್ದಹಾಗೆ ಸಾವನ್ನಪ್ಪುತ್ತಿರುವ ಘಟನೆಗೆ ಸಂಬಂಧಿಸಿದಂತೆ ನಡೆಯುವ ಘಟನೆಗಳನ್ನಿಟ್ಟುಕೊಂಡು ನಾಗರಾಜ್ ಎಂಜಿ ಗೌಡ ಅವರು  ಡಿಸೆಂಬರ್ 24 ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ. ಪಕ್ಕಾ ಥ್ರಿಲ್ಲರ್ ಜಾನರ್ನಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ನಾಯಕ ಅಜಯ್ (ಅಪ್ಪು ಬಡಿಗೇರ್) ತನ್ನ ಅಕ್ಕನ ಮಗು ಹುಟ್ಟಿದ ಕೂಡಲೇ ಉಸಿರಾಟ ನಿಲ್ಲಿಸಿದ ಘಟನೆಯಿಂದ ವಿಚಲಿತನಾದಾಗ ಆತನ ಸ್ನೇಹಿತರೆಲ್ಲ ದೈರ್ಯ ತುಂಬುತ್ತಾರೆ. ಅವರೆಲ್ಲ ಮೆಡಿಕಲ್ ಓದುತ್ತಿರುವ ಗೆಳೆಯರು. ಹೇಗಾದರೂ ಮಾಡಿ ಈ ಸಮಸ್ಯೆಗೆ ಒಂದು ಪರಿಹಾರ ಕಂಡುಹಿಡಿಯಬೇಕೆಂದು ಸಾಕಷ್ಟು ಸರ್ಚ್ ಮಾಡಿದಾಗ ಉಡದ ಮೊಟ್ಟೆ, ಅದರಲ್ಲೂ  ಅದು ಕಾವು ಕೊಟ್ಟಿರುವ ಮೊಟ್ಟೆಯಿಂದ ಈ ಸಮಸ್ಯೆಗೆ ಔಷಧವನ್ನು ತಯಾರಿಸಬಹುದೆಂದು ತಿಳಿಯುತ್ತದೆ. ಅದನ್ನು ನಂಬಿದ ಈ ಎಂಟು ಜನ ವಿದ್ಯಾರ್ಥಿಗಳು ಉಡದ ಮೊಟ್ಟೆಯನ್ನರಸಿಕೊಂಡು ಕಾಡಿಗೆ ಬರುತ್ತಾರೆ. ಇಲ್ಲಿ ‘ಡಿಸೆಂಬರ್ 24’ ಉಡ ತಾನಿಟ್ಟ ಮೊಟ್ಟೆಗೆ ಕಾವು ಕೊಡುವ ದಿನ. ಅದೇ ಚಿತ್ರದ ಶೀರ್ಷಿಕೆಯಾಗಿದೆ.

ಅಜಯ್, ಕಾವ್ಯ (ಭೂಮಿಕಾ ರಮೇಶ್) ಸೇರಿದಂತೆ ಗೆಳೆಯರೆಲ್ಲ ಒಂದು ದಟ್ಟ ಕಾಡಿಗೆ ಬಂದು ಅಲ್ಲಿ ಮಾದಕ ವಸ್ತುಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದ ಗ್ಯಾಂಗ್ ಲೀಡರ್ (ಅನಿಲ್ ಗೌಡ್ರು) ಕೈಗೆ ಸಿಕ್ಕಿ ಹಾಕಿಕೊಳ್ಳುತ್ತಾರೆ. ಆ ಗ್ಯಾಂಗ್ನೊಂದಿಗೆ ಹೊಡೆದಾಟ ನಡೆಸಿ ಹೇಗೋ ತಪ್ಪಿಸಿಕೊಂಡು ಬಂದ ಈ ಸ್ನೇಹಿತರಿಗೆ ತಾವು ಹುಡುಕುತ್ತಿದ್ದ  ಮೊಟ್ಟೆಗಳು ಕೊನೆಗೂ ಸಿಗುತ್ತವೆ. ಮೊಟ್ಟೆ ಸಿಕ್ಕ ಖುಷಿಯಲ್ಲೆ ಆ ಕಾಡಿಂದ ಹೊರಹೋಗಬೇಕೆನ್ನುವ ಹೊತ್ತಿಗೆ ಕತ್ತಲಾಗಿ ಒಂದು ಹಾಳು ಮನೆಯೊಳಗೆ ಸೇರಿಕೊಳ್ಳುತ್ತಾರೆ. ಆ ಮನೆ ಭೂತಬಂಗ್ಲೆ ಎಂದೇ ಆ ಭಾಗದಲ್ಲಿ ಹೆಸರುವಾಸಿಯಾಗಿರುತ್ತದೆ, ಆ ಮನೆಯೊಳಗೆ ಹೋದ ಯಾರೊಬ್ಬರೂ ಇದುವರೆಗೆ ಬದುಕಿಬಂದ ಉದಾಹರಣೆಗಳಿಲ್ಲ. ಅಂಥಾ ಸಾವಿನ ಮನೆಯೊಳಗೆ ಹೋದ ಇವರನ್ನು ಆರಂಭದಿಂದಲೂ ಗಮನಿಸುತ್ತಿದ್ದ ಸ್ಥಳೀಯ ಫಾರೆಸ್ಟ್ ಆಫೀಸರ್ (ಆನಂದ್ ಪಟೇಲ್ ಹುಲಿಕಟ್ಟೆ) ಆ ವಿದ್ಯಾರ್ಥಿಗಳನ್ನು ಅಲ್ಲಿಂದ ರಕ್ಷಿಸಿ ಹೊರತರುತ್ತಾರೆ. ಆ ಮನೆಯಲ್ಲಿ  ಅಂಥಾದ್ದೇನಿದೆ, ಅಲ್ಲಿ ಹೋದವರು ಯಾಕೆ ಬದುಕಿ ಬರೋದಿಲ್ಲ, ಇದಕ್ಕೆಲ್ಲ ಉತ್ತರ ಬೇಕೆಂದರೆ ನೀವೆಲ್ಲ ಒಮ್ಮೆ ಥೇಟರ್ಗೆ ಹೋಗಿ  ಡಿಸೆಂಬರ್ 24 ಚಿತ್ರವನ್ನು ವೀಕ್ಷಿಸಲೇಬೇಕು.

ಇಲ್ಲಿ ಭಾಗ್ಯಲಕ್ಷ್ಮಿ ಖ್ಯಾತಿಯ ಭೂಮಿಕಾ ರಮೇಶ್ ನಾಯಕಿಯಾಗಿ ತನ್ನ ಮುಗ್ಧ ಅಭಿನಯದ ಮೂಲಕ ನೋಡುಗರಿಗೆ ಇಷ್ಟವಾಗುತ್ತಾರೆ.  ನಾಯಕನಾಗಿ ಅಪ್ಪು ಬಡಿಗೇರ್ ತನ್ನ ಸಹಜಾಭಿನಯದಿಂದಲೇ ಗಮನ ಸೆಳೆಯುತ್ತಾರೆ. ಉಳಿದಂತೆ ರವಿ ಕೆ.ಆರ್.ಪೇಟೆ, ಜಗದೀಶ್, ದಿವ್ಯಆಚಾರ್, ಸಾಗರ್ ಸೇರಿದಂತೆ ಎಲ್ಲರೂ ತಂತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ಛಾಯಾಗ್ರಾಹಕ ವಿನಯ್ಗೌಡ ಅವರ ಕ್ಯಾಮೆರಾದಲ್ಲಿ ದಾಂಡೇಲಿ ಫಾರೆಸ್ಟ್ ಅತ್ಯದ್ಭುತವಾಗಿ  ಸೆರೆಯಾಗಿದೆ. ಫ್ರೆಂಡ್ಷಿಪ್ಗೆ ಹೆಚ್ಚು ಪ್ರಾಮುಖ್ಯತೆ ಇರುವ ಕಥೆ ಇದಾಗಿದ್ದು, ಇದೇ ಕಾರಣಕ್ಕೆ ಚಿತ್ರ ನೋಡುಗರಿಗೂ ಇಷ್ಟವಾಗುತ್ತದೆ. ಪ್ರವೀಣ್ ನಿಕೇತನ್ ಹಾಗೂ ವಿಶಾಲ್ ಆಲಾಪ್ ಅವರ ಸಂಗೀತದಲ್ಲಿ ಮೂಡಿಬಂದಿರುವ  ಹಾಡುಗಳು ಒಮ್ಮೆ ಕೇಳಲು ಅಡ್ಡಿಯೇನಿಲ್ಲ. ಹಿನ್ನೆಲೆ ಸಂಗೀತ ಇನ್ನಷ್ಟು ಪರಿಣಾಮಕಾರಿಯಾಗಿರಬೇಕಿತ್ತು.  ನಿರ್ದೇಶಕ ನಾಗರಾಜ್ ಎಂ.ಜಿ. ಗೌಡ ಅವರ ಮೊದಲ ಪ್ರಯತ್ನ ಎಂಬ ಕಾರಣಕ್ಕೆ,  ಮೊದಲ ಚಿತ್ರದಲ್ಲೇ ಹೊಸತನದ ಕಥೆ ಹೇಳಿರುವ ಶೈಲಿಯನ್ನು ಮೆಚ್ಚಬೇಕು.  ಇನ್ನು ಈ ಚಿತ್ರಕ್ಕೆ  ರಘು ಎಸ್, ಮಂಜು ಡಿ.ಟಿ, ಸಿದ್ದಮ್ಮ ಕಂಬಾರ್, ಮಹಂತೇಶ್ ನೀಲಪ್ಪ ಚೌಹಾಣ್ ಹಾಗೂ ವಿ.ಬೆಟ್ಟೇಗೌಡ ಇವರೆಲ್ಲ ಸೇರಿ ಬಂಡವಾಳ ಹಾಕಿದ್ದು, ಇವರೆಲ್ಲರೂ ರೈತರೆನ್ನುವುದು ಇಲ್ಲಿ ವಿಶೇಷ.

ಸಿನಿಮಾ ರೇಟಿಂಗ್: 3.5/5

Tags: December 24December 24 Cinema Reviewಡಿಸಂಬರ್ 24ಡಿಸಂಬರ್ 24 ಸಿನಿಮಾ ರಿವ್ಯೂ
Previous Post

ಮೋದಿಗೆ ತಾಯಿಗಿಂತ, ದೇಶದ ಸೇವೆಗಿಂತ; ಅದಾನಿಯೇ ಮುಖ್ಯ?

Next Post

ಅದಾನಿ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು! ಸುಬ್ರಮಣಿಯನ್ ಸ್ವಾಮಿ.

Next Post

ಅದಾನಿ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು! ಸುಬ್ರಮಣಿಯನ್ ಸ್ವಾಮಿ.

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS