• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಅಶ್ವಿನಿ ಬಸವರಾಜು ಕಂಠದಲ್ಲಿ “ದೇವ ದೇವ ಮಹದೇವ” ಡಾ.ವಿ.ನಾಗೇಂದ್ರ ಪ್ರಸಾದ್ ಮೆಚ್ಚುಗೆ!

by Dynamic Leader
17/12/2023
in ದೇಶ, ರಾಜ್ಯ
0
0
SHARES
1
VIEWS
Share on FacebookShare on Twitter

ಅರುಣ್ ಜಿ.,

ಒಬ್ಬೊಬ್ಬರಿಗೆ ಒಂದೊಂದು ಕ್ಷೇತ್ರದಲ್ಲಿ ಆಸಕ್ತಿ ಇರುತ್ತದೆ. ತಮ್ಮಿಷ್ಟದ ವಿಭಾಗದಲ್ಲಿ ಸಾಧಿಸಿ, ಹೆಸರು ಮಾಡಬೇಕು ಎನ್ನುವ ತುಡಿತವಿರುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಹೆಸರು ಗಳಿಸಿ, ವೇಯ್ಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಕ್ರೀಡೆಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ, ಬೆಂಗಳೂರಿನ ಸ್ಟ್ರಾಂಗೆಸ್ಟ್ ವುಮೆನ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದವರು, ಕ್ರೀಡಾ ಕ್ಷೇತ್ರದಲ್ಲಿ ಹಲವಾರು ಪ್ರಶಸ್ತಿ, ಮೆಡಲ್ ಗಳನ್ನು ಪಡೆದಿದ್ದವರು ಅಶ್ವಿನಿ ಬಸವರಾಜು.

ಅಥ್ಲೆಟಿಕ್ ನಲ್ಲಿ ಸಾಧನೆಯ ಮೆಟ್ಟಿಲೇರುವ ಹೊತ್ತಿಗೆ ಅಶ್ವಿನಿ ಮನಸ್ಸಿನಲ್ಲಿ ತಾನು ಹಾಡುಗಾರ್ತಿಯಾಗಬೇಕು ಎನ್ನುವ ಬಯಕೆ ಚಿಗುರೊಡೆದಿತ್ತು. ಅಜ್ಜಿ ಯಶೋಧಾ ಜೊತೆ ಪೂಜಾ ಕಾರ್ಯಕ್ರಮಗಳಲ್ಲಿ ಕೂತು ಸಾಯಿಬಾಬಾ ಭಕ್ತಿಗೀತೆಗಳನ್ನು ಹಾಡುತ್ತಿದ್ದರು. ಕ್ರಮೇಣ ಸಂಗೀತದ ಗುಂಗು ಹತ್ತಿತ್ತು. ತಮ್ಮದೇ ಹೆಸರಿನಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿ ‘ಮರೆಯುವೆನು ನಿನಗಾಗಿ’ ಎನ್ನುವ ಆಲ್ಬಂ ಸಾಂಗ್ ಅನ್ನು ಹೊರತಂದಿದ್ದರು. ನಂತರ ಮತ್ತೊಂದು ಫೀಲಿಂಗ್ ಸಾಂಗ್ ಕೂಡಾ ಲೋಕಾರ್ಪಣೆಗೊಂಡಿತು. ಇವೆಲ್ಲದರ ಜೊತೆಗೆ ಸಂಗೀತ ಗುರು ಚಂದ್ರಕಾಂತ್ ಅವರ ಬಳಿ ಹಿಂದೂಸ್ತಾನಿ ಸಂಗೀತ ಕಲಿಯುತ್ತಿದ್ದ ಅಶ್ವಿನಿ ಬಸವರಾಜು ಈ ಬಾರಿ ಹೊಸದೊಂದು ಪ್ರಯತ್ನ ಮಾಡಬೇಕು ಎನ್ನುವ ತೀರ್ಮಾನಕ್ಕೆ ಬಂದಿದ್ದರು. ಈ ನಿಟ್ಟಿನಲ್ಲಿ ಶುರುವಾಗಿದ್ದು ‘ದೇವ ದೇವ ಮಹದೇವ’ ಹಾಡು.

ಜನಪದ ಶೈಲಿಯ ಈ ಹಾಡಿಗೆ ಮಯೂರ್ ಅಂಬೆಕಲ್ಲು ಸಂಗೀತ, ಮಯೂರ್ ನೈಗ ಸಾಹಿತ್ಯವಿದೆ. ಮಹದೇಶ್ವರ ಬೆಟ್ಟದಲ್ಲಿ ಈ ವಿಡಿಯೋ ಆಲ್ಬಂ ಅನ್ನು ಚಿತ್ರೀಕರಿಸಲಾಗಿದೆ. ಶಿವರಾತ್ರಿಯ ಈ ಸುಸಂದರ್ಭದಲ್ಲಿ ದೇವ ದೇವ ಮಹದೇವ ಹಾಡನ್ನು ಖ್ಯಾತ ಚಿತ್ರಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಬಿಡುಗಡೆ ಮಾಡಿದ್ದಾರೆ. ‘ಭಕ್ತಿಗೀತೆ ಕ್ಷೇತ್ರದಲ್ಲಿ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ದೇವ ದೇವ ಮಹದೇವ ಹಾಡಿನ ಮೂಲಕ ಮಹದೇಶ್ವರನ ಖಂಡಕಾವ್ಯವನ್ನು, ಮಹಾಪುರುಷನ ಇತಿಹಾಸವನ್ನು ಒಂದೇ ಹಿಡಿಯಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ. ಅಶ್ವಿನಿ ಅವರ ಧ್ವನಿಯನ್ನು ಕೇಳುತ್ತಿದ್ದರೆ ಅವರಿಗೆ ಉತ್ತಮ ಭವಿಷ್ಯವಿದೆ ಅನ್ನೋದು ಗೊತ್ತಾಗುತ್ತದೆ’ ಎಂದಿದ್ದಾರೆ ನಾಗೇಂದ್ರ ಪ್ರಸಾದ್.

ಬೆಂಗಳೂರಿನ ರಾಮಸಂದ್ರ ಗ್ರಾಮದಲ್ಲಿ ಹುಟ್ಟಿ ಬೆಳೆದು, ಸೇಂಟ್ ಫಿಲೋಮಿನಾ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಮುಗಿಸಿ, ಶೇಷಾದ್ರಿಪುರಂ ವಿದ್ಯಾ ಸಂಸ್ಥೆಯಲ್ಲಿ ಉನ್ನತ ಶಿಕ್ಷಣ ಪಡೆದು, ಪ್ರಸ್ತುತ  ಹೆಸರಾಂತ  ಐಟಿ ಕಂಪನಿಯಲ್ಲಿ ಉದ್ಯೋಗಕ್ಕಿರುವ ಅಶ್ವಿನಿ ಬಸವರಾಜು ಅವರಿಗೆ ಗಾಯಕಿಯಾಗಿಯೇ ಪೂರ್ಣ ಪ್ರಮಾಣದಲ್ಲಿ ಗುರುತಿಸಿಕೊಳ್ಳಬೇಕು ಎನ್ನುವ ಬಯಕೆಯಿದೆ. ಬಹುಶಃ ದೇವ ದೇವ ಮಹದೇವ ಆಲ್ಬಂ ಸಾಂಗ್ ಇವರ ಅಪೇಕ್ಷೆಯನ್ನು ಈಡೇರಿಸಬಹುದು.

Tags: Ashwini BasavarajuDeva Deva MahadevaDr. V.Nagendra Prasadಅಶ್ವಿನಿ ಬಸವರಾಜುಡಾ.ವಿ.ನಾಗೇಂದ್ರ ಪ್ರಸಾದ್ದೇವ ದೇವ ಮಹದೇವ
Previous Post

ಜನಸಂಖ್ಯೆ ನಿಯಂತ್ರಣಕ್ಕೆ ವಿಎಚ್‌ಪಿ ಒತ್ತಾಯ ಹಾಗೂ ಚೀನಾದ ಇಂದಿನ ಪರಿಸ್ಥಿತಿ! ಒಂದು ಅವಲೋಕನ

Next Post

ಬಿಜೆಪಿ ನಾಯಕರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ತಪ್ಪಿಸಿಕೊಳ್ಳಲು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ!

Next Post
ಸಿದ್ದರಾಮಯ್ಯ

ಬಿಜೆಪಿ ನಾಯಕರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ತಪ್ಪಿಸಿಕೊಳ್ಳಲು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS