• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ನೀವು ಯುವಕರ ಆತ್ಮಹತ್ಯೆಯನ್ನು ‘ಜೋಕ್’ ಎಂದು ಭಾವಿಸುತ್ತೀರಾ?: ಮೋದಿ ಹೇಳಿದ ಕ್ರೂರ ಹಾಸ್ಯ

by Dynamic Leader
28/04/2023
in ದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ಹಾಸ್ಯ ಪ್ರಜ್ಞೆ ಎಲ್ಲರಿಗೂ ಅಗತ್ಯ; ಹಾಸ್ಯಕ್ಕೆ ಭಾವನೆಗಳನ್ನು ಪರಿವರ್ತಿಸುವ ಶಕ್ತಿ ಇದೆ. ಮಹಾತ್ಮ ಗಾಂಧೀಜಿಯವರು “ನನಗೆ ಹಾಸ್ಯ ಪ್ರಜ್ಞೆ ಇಲ್ಲದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ” ಎಂದು ಹೇಳಿದರಂತೆ.

ಆದರೆ ಪ್ರಧಾನಿ ನರೇಂದ್ರ ಮೋದಿಯವರು ಆತ್ಮಹತ್ಯೆಯನ್ನು ತಮಾಷೆ ಎಂಬ ಹೆಸರಿನಲ್ಲಿ ವ್ಯಾಖ್ಯಾನಿಸಿ, ಭಾರತದ ಯುವ ಪೀಳಿಗೆಗೆ ಅವಮಾನ ಮಾಡಿದ್ದಾರೆ. ಹಾಸ್ಯವು ಯಾರ ಹೃದಯವನ್ನೂ ನೋಯಿಸದಂತೆ ಇರಬೇಕು ಎಂಬುದು ಸಾಮಾನ್ಯ ನಿಯಮ.

ಬಿಜೆಪಿ ಪರಿವಾರವನ್ನು ಹೊಗಳುವುದು ಮತ್ತು ಇತರರನ್ನು ನಿಂದಿಸುವುದೇ ವೃತ್ತಿಯನ್ನಾಗಿ ಮಾಡಿಕೊಂಡಿರುವ ರಿಪಬ್ಲಿಕ್ ಟಿವಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಒಬ್ಬ ಪ್ರೊಫೆಸರ್ ಮಗಳು, ‘ನನಗೆ ಬದುಕಲು ಇಷ್ಟವಿಲ್ಲ ಮತ್ತು ನಾನು ಕಂಗಾರಿಯಾ ಸರೋವರಕ್ಕೆ ಹಾರಿ ಸಾಯುತ್ತೇನೆ’ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಳಂತೆ ಮರುದಿನ ಪ್ರಾಧ್ಯಾಪಕರು ಪತ್ರವನ್ನು ನೋಡಿ ಇಷ್ಟು ವರ್ಷ ಹೇಳಿದರೂ , ಅವಳು ಇನ್ನೂ ಕಂಗಾರಿಯಾ ಸರೋವರದ ಹೆಸರನ್ನು ತಪ್ಪಾಗಿಯೇ ಬರೆದಿದ್ದಾಳೆ’ ಎಂದು ಕೋಪಗೊಂಡರೆಂತೆ ಎಂದು ಹಾಸ್ಯ ಮಾಡಿದ್ದಾರೆ. ಈ ರೀತಿಯ ಕ್ರೂರ ಹಾಸ್ಯಕ್ಕೆ ಇದೀಗ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಕರ್ನಾಟಕದ ಕೋಲಾರದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಿರ್ದಿಷ್ಟ ವ್ಯಕ್ತಿಗಳ ಹೆಸರುಗಳು ಒಂದೇ ರೀತಿಯಲ್ಲಿ ಕೊನೆಗೊಳ್ಳುತ್ತದೆ ಎಂದು ಲೇವಡಿ ಮಾಡಿದ್ದ ಕಾರಣಕ್ಕೆ, ಅದನ್ನು ದೊಡ್ಡ ಸಮಸ್ಯೆಯನ್ನಾಗಿ ಮಾಡಿ; ಸೂರತ್‌ನಲ್ಲಿ ಪ್ರಕರಣ ದಾಖಲಿಸಿ; ತಕ್ಷಣ ತನಿಖೆ ನಡೆಸಿ; ಶಿಕ್ಷೆ ವಿಧಿಸಿ; ಅವರ ಸಂಸದ ಸ್ಥಾನವನ್ನೂ ರದ್ದುಪಡಿಸಿ, ಮನೆಯಿಂದ ಹೊರಹಾಕಲಾಯಿತು. ಅಷ್ಟರಮಟ್ಟಿಗೆ ಆಡಳಿತಗಾರರಿಗೆ ‘ಹಾಸ್ಯ ಪ್ರಜ್ಞೆ’ ಹೆಚ್ಚು.

ಭಾರತದಲ್ಲಿ ಯುವಕರ ಆತ್ಮಹತ್ಯೆ ಪ್ರಮಾಣ ಆತಂಕಕಾರಿಯಾಗಿದೆ. ಎನ್‌ಸಿಆರ್‌ಬಿ ಅಂಕಿ ಅಂಶಗಳ ಪ್ರಕಾರ, 2021ರಲ್ಲಿ 1 ಲಕ್ಷದ 64 ಸಾವಿರದ 33 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂದು ತಿಳಿದುಬಂದಿದೆ. 1990ರ ದಶಕದಲ್ಲಿ ಆಧುನಿಕ ಉದಾರೀಕರಣ ನೀತಿಗಳ ಅನುಷ್ಠಾನದ ನಂತರ, ಭಾರತದ ಜನರ ಜೀವನೋಪಾಯಕ್ಕೆ ತೀವ್ರ ತೊಂದರೆಯಾಗಿದೆ.

Depression and suicide, especially among the youth IS NOT a laughing matter.

According to NCRB data, 164033 Indians committed suicide in 2021. Of which a huge percentage were below the age of 30. This is a tragedy not a joke.

The Prime Minister and those laughing heartily at… pic.twitter.com/yoPt5c8Kx7

— Priyanka Gandhi Vadra (@priyankagandhi) April 27, 2023

ಜೀವನದಲ್ಲಿ ಅಭದ್ರತೆ ಇದ್ದಂತೆ ಕಾಣುತ್ತದೆ ಎಂದು ಹದಿಹರೆಯದವರು ತಮ್ಮ ಭಾವನೆಗಳನ್ನು ದಾಖಲಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರ ಅನುಸರಿಸುತ್ತಿರುವ ಆರ್ಥಿಕ ನೀತಿಗಳಿಂದ ನಿರುದ್ಯೋಗ ಹೆಚ್ಚುತ್ತಿದೆ. ವರ್ಷಕ್ಕೆ 2 ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ಹೇಳಿದರು. ಈ ಬಗ್ಗೆ ಕೇಳಿದರೆ ಯುವಕರು ಪಕೋಡ ಮಾರಿ ಬದುಕಬಹುದು ಎಂದು ಸಲಹೆ ನೀಡುತ್ತಾರೆ.

ಭಾರತದಲ್ಲಿ ಯುವಕರು ಅದರಲ್ಲೂ ಯುವತಿಯರೇ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಿವಿಧ ಅಂಕಿ ಅಂಶಗಳು ತೋರಿಸುತ್ತಿರುವ ಹಿನ್ನಲೆಯಲ್ಲಿ, ಆತ್ಮಹತ್ಯೆ ಮಾಡಿಕೊಳ್ಳುವವರ ಸ್ಥಿತಿಯನ್ನು ತಮಾಷೆಯಾಗಿ ಪರಿವರ್ತಿಸುವುದು ವಿನೋದವಲ್ಲ. ಅದೊಂದು ಕ್ರೂರ ಹಾಸ್ಯ.

Tags: DepressionDynamicDynamic LeaderDynamic Leader News PortalJokeKolarLaughingLeaderModiRahul GandhiRepublic SummitRepublic TVsuicideಆತ್ಮಹತ್ಯೆಕೋಲಾರ್ಖಿನ್ನತೆನಗುಮೋದಿರಾಹುಲ್ ಗಾಂಧಿಹಾಸ್ಯ
Previous Post

ಸಾರ್ವಜನಿಕ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಕಾಂಗ್ರೆಸ್‌ನ ಐದನೇ ಗ್ಯಾರಂಟಿ!

Next Post

ಮಾನ್ವಿಯಲ್ಲಿ ಮುಂದಿನ ಶಾಸಕರು ಯಾರು.? ಒಂದು ರಾಜಕೀಯ ನೋಟ ‌‌‌‌‌

Next Post

ಮಾನ್ವಿಯಲ್ಲಿ ಮುಂದಿನ ಶಾಸಕರು ಯಾರು.? ಒಂದು ರಾಜಕೀಯ ನೋಟ ‌‌‌‌‌

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS