• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಎಲ್ಲಾ ಗಲಭೆಗಳು ನಡೆಯೋದು ಬಿಜೆಪಿ ಆಡಳಿತದಲ್ಲೇ ಏಕೆ? ಬಜರಂಗದಳ ಬಿಜೆಪಿಯ ಮುದ್ದಿನ ಕೂಸೆ?

by Dynamic Leader
04/05/2023
in ರಾಜಕೀಯ
0
0
SHARES
0
VIEWS
Share on FacebookShare on Twitter

“ಮಣಿಪುರ ಹೊತ್ತಿ ಉರಿಯುತ್ತಿದೆ! ಮಣಿಪುರದಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರವಿದೆ! ಪ್ರಧಾನಿ ಮತ್ತು ಗೃಹ ಸಚಿವರು ಕರ್ನಾಟಕದಲ್ಲಿ ರೋಡ್ ಷೋ ಮಾಡುತ್ತ ಬ್ಯುಸಿಯಾಗಿದ್ದಾರೆ”! ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷವು ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ.

“ಎಲ್ಲಾ ಗಲಭೆಗಳು ನಡೆಯೋದು ಬಿಜೆಪಿ ಆಡಳಿತದಲ್ಲೇ ಏಕೆ? ಗುಜರಾತ್ ಗಲಭೆ: ಬಿಜೆಪಿ ಸರ್ಕಾರ, ತ್ರಿಪುರ ಗಲಭೆ: ಬಿಜೆಪಿ ಸರ್ಕಾರ, ಬೆಂಗಳೂರು ಗಲಭೆ: ಬಿಜೆಪಿ ಸರ್ಕಾರ, ದೆಹಲಿ ಗಲಭೆ: ಬಿಜೆಪಿ ಸರ್ಕಾರ, ಈಗ ಮಣಿಪುರ ಗಲಭೆ: ಬಿಜೆಪಿ ಸರ್ಕಾರ. ಬಿಜೆಪಿ ಆಡಳಿತದಲ್ಲಿ ಜನರಿಗೆ ತಮ್ಮ ಸ್ವಂತ ಮನೆಯೊಳಗೇ ರಕ್ಷಣೆ ಇಲ್ಲವಾದಾಗ ದೇಶದ ರಕ್ಷಣೆ ಸಾಧ್ಯವೇ?

ನಿಜವಾದ ಭಜರಂಗಿಗಳು (ಕ್ರೀಡಾಪಟುಗಳು) ದೆಹಲಿಯ ಜಂತರ್ ಮಂಥರ್‌ನಲ್ಲಿ ತಮಗಾದ ಶೋಷಣೆಯ ನೋವು ತಾಳದೆ ಪ್ರತಿಭಟಿಸುತ್ತಿದ್ದಾರೆ. ನರೇಂದ್ರ ಮೋದಿ ಅವರೇ, ಇಲ್ಲಿನ ನಕಲಿ ಭಜರಂಗಿಗಳ ಓಲೈಕೆ ಬಿಟ್ಟು ಅಸಲಿ ಭಜರಂಗಿಗಳ ನೋವು ಆಲಿಸಿ. ಅಲ್ಲೂ “ಬಜರಂಗಿ ಪುನಿಯಾ” ಎಂಬ ಹೆಸರಿನ ಕ್ರೀಡಾಪಟು ನೋವಿನಲ್ಲಿದ್ದಾರೆ. ನಿಮಗೆ ಆ ಅಸಲಿ ಬಜರಂಗಿಗಳ ಹಿತ ಬೇಡವೇ?

ಬಜರಂಗದಳ ಬಿಜೆಪಿಯ ಮುದ್ದಿನ ಕೂಸು ಎಂದಾದರೆ, ದಿನೇಶ್ ನಾಯ್ಕ ಎಂಬ ದಲಿತನ ಕೊಲೆಯ ಹೊಣೆಯನ್ನು ಬಿಜೆಪಿ ಹೊರಲಿ; ಮಂಗಳೂರಿನ ಪಬ್ ದಾಳಿಯ ಹೊಣೆಯನ್ನು ಬಿಜೆಪಿ ಹೊರಲಿ; ಸಮಾಜಘಾತುಕ ಕೃತ್ಯಗಳೆಲ್ಲದರ ಹೊಣೆಯನ್ನು ಬಿಜೆಪಿಯೇ ಹೊರಲಿ; ನಂತರ ಬಜರಂಗದಳವನ್ನು ಸಮರ್ಥಿಸಿಕೊಳ್ಳಲಿ.

ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುವ ಬಜರಂಗದಳ, PFI ಸೇರಿದಂತೆ ಯಾವುದೇ ಸಂಘಟನೆಯ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದರೆ ಉರಿದು ಬೀಳುವ ಬಿಜೆಪಿ ಸಂವಿಧಾನ ಬದಲಿಸುತ್ತೇವೆ ಎಂದವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ? ನರೇಂದ್ರ ಮೋದಿ ಅವರೇ ಹಾಗೂ ಬಿಜೆಪಿಗೆ ಸಂವಿಧಾನ ಮುಖ್ಯವೇ, ಸಂವಿಧಾನ ವಿರೋಧಿ ಸಂಘಟನೆಗಳು ಮುಖ್ಯವೇ? ಸ್ಪಷ್ಟಪಡಿಸಿ ನಂತರ ಮಾತಾಡಲಿ.

ಬಜರಂಗದಳ ಬಿಜೆಪಿಯ ಅಂಗಸಂಘಟನೆಯೇ? ಇಷ್ಟೊಂದು ಮಮಕಾರ ತೋರುವ ಕರ್ನಾಟಕ ಬಿಜೆಪಿ, ಬಜರಂಗದಳದವರಿಗೆ ಎಷ್ಟು ಟಿಕೆಟ್ ನೀಡಿದೆ? ಹಿರಿಯರ ನಾಯಕತ್ವವನ್ನು ಮುಗಿಸಲು ಅವರ ಮಕ್ಕಳು, ಸೊಸೆಯಂದಿರು, ಪತ್ನಿಯರಿಗೆ ಟಿಕೆಟ್ ನೀಡುವ ಬದಲು ಬಜರಂಗದಳದವರಿಗೆ ಟಿಕೆಟ್ ನೀಡಿಲ್ಲವೇಕೆ? ಅಮಾಯಕ ಹುಡುಗರನ್ನು ಕಾನೂನು ವಿರೋಧಿ ಕೃತ್ಯಗಳಿಗೆ ಬಳಸಿ ಲಾಭ ಪಡೆಯುವುದು ಮಾತ್ರ ಬಿಜೆಪಿಯ ಕೆಲಸವೇ?

ಬಜರಂಗದಳ ಅತ್ಯತ್ತಮ ಸಂಘಟನೆಯಾಗಿದ್ದರೆ ಅಮಿತ್ ಶಾ ಅವರು ತಮ್ಮ ಮಗನನ್ನು BCCI ಹುದ್ದೆಯಿಂದ ಕಿತ್ತು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ನೇಮಿಸಲಿ. ಬೊಮ್ಮಾಯ್ ತಮ್ಮ ಮಗನ ಉದ್ಯಮವನ್ನು ಮುಚ್ಚಿಸಿ ರಾಜ್ಯಾಧ್ಯಕ್ಷನನ್ನಾಗಿ ಮಾಡಲಿ. ಬಿಜೆಪಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಡವರ, ದಲಿತ, ಹಿಂದುಳಿದವರ ಮಕ್ಕಳನ್ನು ಬಳಸಿ ಕೋರ್ಟು, ಕೇಸಿಗೆ ಅಲೆಯುವಂತೆ ಮಾಡುವುದನ್ನು ಬಿಡಲಿ.

ಬಜರಂಗದಳ ಬಗ್ಗೆ ಭಯಂಕರವಾಗಿ ಮಾತನಾಡುವ ಕರ್ನಾಟಕ ಬಿಜೆಪಿ ನಾಯಕರು ಉತ್ತರಿಸಲಿ. ಸಿ.ಟಿ.ರವಿ ಮಕ್ಕಳು, ಬಜರಂಗದಳದ ಯಾವ ಹುದ್ದೆಯಲ್ಲಿದ್ದಾರೆ? ಆರ್.ಅಶೋಕ್ ಮಗ ಬಜರಂಗದಳಲ್ಲಿ ಏನು ಕೆಲಸ ಮಾಡುತ್ತಿದ್ದಾರೆ? ತೇಜಶ್ವಿ ಸೂರ್ಯ ಏಕೆ ಬಜರಂಗದಳ ಸೇರಿಲ್ಲ? ಬೊಮ್ಮಾಯ್ ಮಗ ಬಜರಂಗದಳ ಸೇರಿ ಬೆಂಕಿ ಹಚ್ಚುವುದನ್ನು ಬಿಟ್ಟು ಉದ್ಯಮಿಯಾಗಿದ್ದೇಕೆ”? ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷವು ಸರಣಿ ಟ್ವೀಟ್ ಮಾಡಿ ಬಿಜೆಪಿಯ ವಿರುದ್ಧ ಕೆಂಡ ಕಾರಿದೆ.

Tags: Amit ShahBajarang DalBajarangi PuniaBasavaraj BommaiBJpCT RaviDinesh NaikDouble Engine GovernmentDynamic LeaderDynamic Leader MagazineDynamic Leader News PortalManipurNarendra ModiPFIR.AsokeRoad ShowTejasvi Suryaಅಮಿತ್ ಶಾಆರ್.ಅಶೋಕ್ಕರ್ನಾಟಕ ಬಿಜೆಪಿಡಬಲ್ ಎಂಜಿನ್ ಸರ್ಕಾರತೇಜಶ್ವಿ ಸೂರ್ಯದಿನೇಶ್ ನಾಯ್ಕನರೇಂದ್ರ ಮೋದಿಬಜರಂಗದಳಬಜರಂಗಿ ಪುನಿಯಾಬಸವರಾಜ್ ಬೊಮ್ಮಾಯಿಬಿಜೆಪಿಮಣಿಪುರರೋಡ್ ಷೋಸಿ.ಟಿ.ರವಿ
Previous Post

‘ದಿ ಕೇರಳ ಸ್ಟೋರಿ’ ಸಿನಿಮಾಗೆ ವಿರೋಧ ಯಾಕೆ? – ಸಂಪೂರ್ಣ ಹಿನ್ನೆಲೆ ಏನು?!

Next Post

ಕೇರಳ ಮಸೀದಿಯಲ್ಲಿ ಹಿಂದೂ ಮದುವೆ; ವಿಡಿಯೋ ಹಂಚಿಕೊಂಡ ಎ.ಆರ್.ರೆಹಮಾನ್!

Next Post

ಕೇರಳ ಮಸೀದಿಯಲ್ಲಿ ಹಿಂದೂ ಮದುವೆ; ವಿಡಿಯೋ ಹಂಚಿಕೊಂಡ ಎ.ಆರ್.ರೆಹಮಾನ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS