• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ ’45’ ಚಿತ್ರ ಮೈಸೂರಿನಲ್ಲಿ ಆರಂಭ! 

by Dynamic Leader
05/05/2023
in ಸಿನಿಮಾ
0
0
SHARES
0
VIEWS
Share on FacebookShare on Twitter

ವರದಿ: ಅರುಣ್ ಜಿ.,

ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ‘45’ ಚಿತ್ರದ ಮುಹೂರ್ತ ಇತ್ತೀಚೆಗೆ ಮೈಸೂರಿನಲ್ಲಿ ನೆರವೇರಿತು. ದೇವರ ಮೇಲೆ ಚಿತ್ರೀಕರಿಸಲಾದ ಮೊದಲ ದೃಶ್ಯಕ್ಕೆ ಗೀತಾ ಶಿವರಾಜಕುಮಾರ್ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು, ಗಣ್ಯರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು.

‘45’ ಚಿತ್ರವನ್ನು ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಂ.ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಕಥೆ-ಚಿತ್ರಕಥೆ ಬರೆದು ಸಂಗೀತ ಸಂಯೋಜಿಸಿದ್ದು, ಸತ್ಯ ಹೆಗಡೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಅನಿಲ್ ಕುಮಾರ್ ಸಂಭಾಷಣೆ ಬರೆದಿದ್ದು, ಕೆ.ಎಂ.ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವರಾಜಕುಮಾರ್, ‘ಇದೊಂದು ಫಿಲಾಸಫಿಕಲ್ ಎಂಟರ್ ಟೈನರ್ ಎಂದು ಚಿತ್ರವನ್ನು ಬಣ್ಣಿಸುತ್ತಾರೆ. ಕಳೆದ ಒಂದು ವರ್ಷದಿಂದ ಈ ಚಿತ್ರದ  ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಅರ್ಜುನ್ ಜನ್ಯ ಕಥೆ ಹೇಳಿದಾಗ ತುಂಬಾ ಇಷ್ಟವಾಗಿತ್ತು. ಆ ನಂತರ ಅನಿಮೇಶನ್ ರೂಪದಲ್ಲಿ ಚಿತ್ರವನ್ನು ತೋರಿಸಿದ್ದಾರೆ. ಅವರೊಬ್ಬ ಪ್ರತಿಭಾವಂತ. ಈ ಸಿನಿಮಾದ ನಂತರ ಭಾರತದ ಟಾಪ್ ನಿರ್ದೇಶಕರ ಸಾಲಿನಲ್ಲಿ ಅರ್ಜುನ್ ಜನ್ಯ ಕೂಡ ಒಬ್ಬರಾಗುತ್ತಾರೆ ಎಂಬ ನಂಬಿಕೆಯಿದೆ. ತುಂಬಾ ಪ್ರಬುದ್ಧವಾಗಿರುವ ಪಾತ್ರ ಈ ಚಿತ್ರದಲ್ಲಿದೆ’ ಎಂದರು.

‘ಸಾಮಾನ್ಯವಾಗಿ ನಟರಿಗೆ ನಿರ್ದೇಶಕರು ಚಿತ್ರದ ಕಥೆ ಹೇಳಿದರೆ, ಅರ್ಜುನ್ ಜನ್ಯ ನನಗೆ ಚಿತ್ರವನ್ನೇ ತೋರಿಸಿದರು. ಒಂದು ಚಿತ್ರಕ್ಕೆ ನಾವು ಸಹ ಸಾಕಷ್ಟು ತಯಾರಿ ಮಾಡಿಕೊಳ್ಳುವುದರಿಂದ, ಮೊದಲು ನನ್ನ ತಂಡದ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ ಅರ್ಜುನ್ ಜನ್ಯ ಮತ್ತು ಅವರ ತಂಡದ ಕೆಲಸ ನೋಡಿ ಆಶ್ಚರ್ಯವಾಯಿತು. ಅವರು ಈ ಚಿತ್ರಕ್ಕೆ ಮಾಡಿಕೊಂಡ ತಯಾರಿ ಅದ್ಭುತ. ಒಬ್ಬ ನಟನಾಗಿ, ಪ್ರೇಕ್ಷಕನಾಗಿ ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಯಿದೆ’ ಎಂದು ರಾಜ್ ಬಿ ಶೆಟ್ಟಿ ಹೇಳಿದರು.

‘ಮೊದಲ ಬಾರಿಗೆ ಹೆಸರಾಂತ ಕಲಾವಿದರು ಮತ್ತು ತಂತ್ರಜ್ಞರ ಜೊತೆ ಈ ಸಿನಿಮಾದಲ್ಲಿ ಅಭಿನಯಿಸುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ.  ಬೋಲ್ಡ್ ಆಗಿರುವಂತ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ’ ಎಂದರು ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಕೌಸ್ತುಭ ಮಣಿ.

ನಿರ್ಮಾಪಕ ರಮೇಶ್ ರೆಡ್ಡಿ ಅವರಿಗೆ ಅರ್ಜುನ್ ಜನ್ಯ ಹೇಳಿದ ಕಥೆ ಬಹಳ ಇಷ್ಟವಾಯಿತಂತೆ. ‘ಚಿತ್ರದ ಘೋಷಣೆಯಾಗಿ ಹಲವು ತಿಂಗಳಾದರೂ ನಿಧಾನಕ್ಕೆ ಸಾಗುತ್ತಿತ್ತು. ಈ ಬಗ್ಗೆ ಅರ್ಜುನ್ ಜನ್ಯ ಅವರನ್ನು ಕೇಳಿದಾಗ, ಅವರು ಅನಿಮೇಶನ್ ಮೂಲಕ ಸಿನಿಮಾ ತೋರಿಸಿದರು. ಚಿತ್ರೀಕರಣ ಶುರುವಾಗುವುದಕ್ಕಿಂತ ಮೊದಲೇ, ಚಿತ್ರ ತೋರಿಸಿದರು. ನಾವು ಅಂದುಕೊಂಡಿರುವುದಕ್ಕಿಂತ ಸಿನಿಮಾ ಚೆನ್ನಾಗಿ ಬರುತ್ತದೆ ಎಂಬ ನಂಬಿಕೆಯಿದೆ’ ಎಂದರು ರಮೇಶ್ ರೆಡ್ಡಿ.

ಕೊನೆಗೆ ಮಾತನಾಡಿದ ಅರ್ಜುನ್ ಜನ್ಯ, ‘ಚಿತ್ರೀಕರಣ ಈಗ ಶುರುವಾಗುತ್ತಿದ್ದರೂ, ಸುಮಾರು 9 ತಿಂಗಳ ಕಾಲ ಪ್ರೀ-ಪ್ರೊಡಕ್ಷನ್ ಕೆಲಸಗಳನ್ನು ಮಾಡಿ ಈಗ ಚಿತ್ರೀಕರಣಕ್ಕೆ ಹೊರಡುತ್ತಿದ್ದೇವೆ. ಮೊದಲು ಶಿವಣ್ಣ ಅವರಿಗೆ ಕಥೆ ಹೇಳಿದಾಗ, ನೀವೇ ಈ ಸಿನಿಮಾ ಮಾಡಿ ಎಂದು ಹುರುದಿಂಬಿಸಿದರು. ಈ ಚಿತ್ರದ ಮೂಲಕ ಒಂದು ದೊಡ್ಡ ಫಿಲಾಸಫಿಯನ್ನು ಸರಳ ರೀತಿಯಲ್ಲಿ, ಕ್ಲಾಸ್ ಮತ್ತು ಮಾಸ್ ಆಗಿ ಹೇಳುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು. 

‘45’ ಚಿತ್ರಕ್ಕೆ 80 ದಿನಗಳ ಕಾಲ ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಕನ್ನಡವಲ್ಲದೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲೂ ಮೂಡಿಬರುತ್ತಿರುವ ಈ ಚಿತ್ರವನ್ನು 2024ರಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Tags: 45Actor UpendraDynamic LeaderDynamic Leader MagazineDynamic Leader News PortalRaj B ShettyShivannaShivaraj Kumarಉಪೇಂದ್ರರಾಜ್ ಬಿ. ಶೆಟ್ಟಿಶಿವರಾಜಕುಮಾರ್
Previous Post

ಕೇರಳ ಮಸೀದಿಯಲ್ಲಿ ಹಿಂದೂ ಮದುವೆ; ವಿಡಿಯೋ ಹಂಚಿಕೊಂಡ ಎ.ಆರ್.ರೆಹಮಾನ್!

Next Post

ಜನಮನ ಗೆದ್ದ ‘ರಾಘವೇಂದ್ರ ಸ್ಟೋರ್ಸ್’

Next Post

ಜನಮನ ಗೆದ್ದ 'ರಾಘವೇಂದ್ರ ಸ್ಟೋರ್ಸ್'

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS