• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಶಕ್ತಿ ಯೋಜನೆ ಚಾಲನೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪರ ಹೊಸ ಅಲೆ ಶುರುವಾಗಿದೆ!  

by Dynamic Leader
11/06/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ಇದು ದೇಶಕ್ಕೆ ಮಾದರಿ ಮಾತ್ರವಲ್ಲ ಪ್ರಜಾಸತ್ತಾತ್ಮಕ ಕ್ರಾಂತಿಯೂ ಹೌದು. ದುಡಿಯುವ ಮಹಿಳೆಗೆ ಅದರಲ್ಲೂ ಅಸಂಘಟಿತ ಮಹಿಳಾ ಉದ್ಯೋಗಿಗಳಿಗೆ ಸಿಕ್ಕಿದ ಅಂಗೀಕಾರ; ಇದು ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಜಯ; ಸರ್ಕಾರ ಮಹಿಳೆಯರಿಗೆ ನೀಡುವ ಗೌರವ; ಸರ್ಕಾರವೇ ನಿಮಗೆ ನನ್ನ ವಂದನೆಗಳು.

ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯೇ ಅತ್ಯಂತ ಮಹತ್ವವಾದದ್ದು. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಘೋಷಣೆ ಮತ್ತು ಅದಕ್ಕೆ ನೀಡಿದ ಚಾಲನೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪರ ಹೊಸ ಅಲೆ ಶುರುವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಕ್ಕೆ ಮತ ಚಲಾಯಿಸಿದ ಕೋಟ್ಯಾಂತರ ಕಾರ್ಯಕರ್ತರು ಕೂಡ ಶಕ್ತಿ ಯೋಜನೆಯ ಫಲಾನುಭವಿಯಾಗಿ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಸರ್ಕಾರವನ್ನು ಹೊಗಳುವಂತೆ ಆಗಿದೆ.

ಲಕ್ಷಾಂತರ ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಈ ಯೋಜನೆ ವರದಾನವಾಗಿ ಪರಿಣಮಿಸಿದೆ. ನಗರ ಪ್ರದೇಶಗಳಲ್ಲಿ ಮನೆ ಕೆಲಸ, ಹೌಸ್ ಕೀಪಿಂಗ್ ಮತ್ತು ಸಣ್ಣಪುಟ್ಟ ಕಾರ್ಖಾನೆಗಳಲ್ಲಿ ದಿನಗೂಲಿ ಕೆಲಸ ಮಾಡುವ ಅದೆಷ್ಟೋ ಮಹಿಳೆಯರು, ಮಾಸಿಕ ಬಸ್ ಪಾಸ್ ಮಾಡಲು ಆಗದ ಪರಿಸ್ಥಿತಿಯನ್ನು ಇಂದಿಗೂ ಎದುರಿಸುತ್ತಿದ್ದಾರೆ. ದಿನನಿತ್ಯದ ಬಸ್ ಪ್ರಯಾಣಕ್ಕೆ ಹಣವಿಲ್ಲದೇ ಒದ್ದಾಡುವ ಮಹಿಳೆಯರನ್ನು ಮತ್ತು ಶಾಲಾ ಮಕ್ಕಳನ್ನು ಸ್ಲಂ ಪ್ರದೇಶಗಳಲ್ಲಿ ಇಂದಿಗೂ ಕಾಣಬಹುದು.

ವಿರೋಧ ಪಕ್ಷದ ಬಿಜೆಪಿ ನಾಯಕರು ‘ಉಚಿತ ಬಸ್ ಪ್ರಯಾಣ ಇರಲಿ; ಮೊದಲು ಬಸ್ ಬಿಡಿ’ ಎಂದು ವ್ಯಂಗ್ಯವಾಡುತ್ತಿದ್ದಾರೆ. ‘ಚಲಾಯಿಸಲು ಬಸ್‌ಗಳೇ ಇಲ್ಲ. ಇದರಲ್ಲಿ ಉಚಿತ ಪ್ರಯಾಣ ಮಾಡುವುದು ಎಲ್ಲಿಂದ’ ಎಂಬುದು ಅವರ ವಾದವಾಗಿದೆ. ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ನೀವು, ಈ ನಾಲ್ಕು ವರ್ಷಗಳಿಂದ ಸಾರಿಗೆ ಇಲಾಖೆಯನ್ನು ಯಾವ ಮಟ್ಟಕ್ಕೆ ಇಳಿಸಿದ್ದಿರಿ ಎಂಬುದಕ್ಕೆ ನೀವೇ ಸಾಕ್ಷಿ.

ಸಾರಿಗೆ ನೌಕರರಿಗೆ ಸರಿಯಾಗಿ ಸಂಬಳ ಕೊಡದೆ; ಸಾರಿಗೆ ನೌಕರರ ಪ್ರತಿಭಟನೆಗಳನ್ನು ಹತ್ತಿಕ್ಕಿ; ಸಾರಿಗೆ ಮಹಿಳಾ ನಿರ್ವಾಹಕರನ್ನು ಬೀದಿಗಿಳಿದು ಹೋರಾಡುವಂತೆ ಮಾಡಿ, ಅವರನ್ನು ಗೋಳಾಡಿಸಿದ ನಿಮ್ಮನ್ನು ಜನ ಯಾಕೆ ತಿರಸ್ಕರಿಸಿದ್ದಾರೆ ಎಂಬುದನ್ನು ಪರಾಮರ್ಶೆ ಮಾಡಿಕೊಂಡು, ಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಿದರೆ, 2024ರ ಸಂಸತ್ ಚುನಾವಣೆಯಲ್ಲಿ ಅನುಕೂಲವಾಗುತ್ತದೆ.

ಕಾಂಗ್ರೆಸ್ ಪಕ್ಷವು ದೇಶದಲ್ಲಿ ಕಳೆದುಕೊಂಡಿದ್ದ ವರ್ಚಸ್ಸನ್ನು ಮರಳಿ ಪಡೆಯುವುದಕ್ಕಾಗಿ ಮತ್ತು 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಬಗ್ಗುಬಡಿಯಲಿಕ್ಕಾಗಿ ಕಾಂಗ್ರೆಸ್ ಸರ್ಕಾರ ಈ ಎಲ್ಲಾ 5 ಗ್ಯಾರಂಟಿಗಳನ್ನು ಜಾರಿ ಮಾಡಿಯೇ ತೀರುತ್ತದೆ. ಅದುಮಾತ್ರವಲ್ಲ, ಈ ಯಶಸ್ಸು ಕಾರ್ಯಕ್ರಮಗಳನ್ನು ಈ ವರ್ಷ ಅಂತ್ಯದಲ್ಲಿ ನಡೆಯಲಿರುವ 4 ವಿಧಾನಸಭಾ ಚುನಾವಣೆಗಳಲ್ಲೂ ಕಾರ್ಯರೂಪಕ್ಕೆ ತರಲು ಕಾಂಗ್ರೆಸ್ ಪಕ್ಷ ಮುಂದಾಗಿದೆ.

ಬಿಜೆಪಿ ರಾಷ್ಟ್ರಮಟ್ಟದಲ್ಲಿ ಬದಲಿ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಾದ ಅನಿವಾರ್ಯತೆಯನ್ನು ಎದುರಿಸುತ್ತಿದೆ. ರಾಷ್ಟ್ರಮಟ್ಟದ ಬಿಜೆಪಿ ನಾಯಕರಿಗೆ 2024ರ ಚುನಾವಣೆಯಲ್ಲಿ ಪಕ್ಷವನ್ನು ಮೂರನೇ ಬಾರಿಗೆ ಅಧಿಕಾರಕ್ಕೆ ತರಬೇಂಬ ಪೀಕಲಾಟ. ತಿಂಗಳು ಕಳೆದರು ಇನ್ನು ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಯಾರು ಎಂಬುದನ್ನು ಹೇಳಲು ಅವರಿಗೆ ಸಾದ್ಯವಾಗುತಿಲ್ಲ. ವರಿಷ್ಟರನ್ನು ಭೇಟಿಯಾಗಿ ಇದರ ಬಗ್ಗೆ ಚರ್ಚಿಸುವ ಧೈರ್ಯವೂ ಇಲ್ಲಿನ ನಾಯಕರಿಗೆ ಇಲ್ಲ.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಸದನದಲ್ಲಿ ಎದುರಿಸುವ ಸಮರ್ಥ ನಾಯಕರ ಕೊರತೆಯೂ ಬಿಜೆಪಿಯಲ್ಲಿ ಎದ್ದು ಕಾಣುತ್ತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳನ್ನು ವ್ಯಂಗ್ಯ ಮಾಡಿಕೊಂಡು ಓಡಾಡುತ್ತಿದ್ದರೆ, ಕಳೆದ ವಿಧಾನಸಭಾ ಚುನವಣೆಯ ಫಲಿತಾಂಶವೇ 2024ರ ಸಂಸತ್ ಚುನಾವಣೆಯಲ್ಲಿ ಮರುಕಳಿಸುತ್ತದೆ ಎಂಬುದು ಗ್ಯಾರಂಟಿ!

Tags: DK ShivakumarDynamicDynamic LeaderFree BusKannada NewsKannada News OnlineKannada News PortalKarnataka BJPKarnataka CongressKarnataka JDSKJ GeorgeLeaderNewsNews PortalPolitical NewsRamalinga ReddyShakti SchemeSiddaramaiahಉಚಿತ ಬಸ್ಕರ್ನಾಟಕ ಕಾಂಗ್ರೆಸ್ಕರ್ನಾಟಕ ಜೆಡಿಎಸ್ಕರ್ನಾಟಕ ಬಿಜೆಪಿಕೆ.ಜೆ.ಜಾರ್ಜ್ಡಿಕೆ ಶಿವಕುಮಾರ್ರಾಮಲಿಂಗ ರೆಡ್ಡಿಶಕ್ತಿ ಯೋಜನೆಸಿದ್ದರಾಮಯ್ಯ
Previous Post

ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ; ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ: ಸಿದ್ದರಾಮಯ್ಯ

Next Post

ಚೀನಾಗೆ ಸಹಾಯ ಮಾಡವ ಕೇರಳ ಸರ್ಕಾರ: ಭಗವಂತ್ ಖೂಬಾ ಆರೋಪ!

Next Post

ಚೀನಾಗೆ ಸಹಾಯ ಮಾಡವ ಕೇರಳ ಸರ್ಕಾರ: ಭಗವಂತ್ ಖೂಬಾ ಆರೋಪ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS