• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಸನಾತನ ಧರ್ಮದ ಬಗ್ಗೆ 8 ವಾರಗಳಲ್ಲಿ ಮಾಹಿತಿ ಒದಗಿಸಬೇಕು: ತಮಿಳುನಾಡು ರಾಜಭವನ ಕಛೇರಿಗೆ ಮದರಾಸ್ ಹೈಕೋರ್ಟ್ ಆದೇಶ!

by Dynamic Leader
18/06/2023
in ದೇಶ
0
0
SHARES
1
VIEWS
Share on FacebookShare on Twitter

ಚೆನ್ನೈ: ಸನಾತನ ಧರ್ಮದ ಕುರಿತು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೇಳಿಕೆಗೆ ಸಂಬಂಧಿಸಿದಂತೆ, ಮಾಹಿತಿ ಹಕ್ಕು ಕಾಯ್ದೆಯಡಿ ವಿವರಗಳನ್ನು ಕೋರಿ ಸಲ್ಲಿಸಿದ ಅರ್ಜಿಗೆ 8 ವಾರಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ರಾಜಭವನದ ಸಾರ್ವಜನಿಕ ಮಾಹಿತಿ ಮೇಲ್ಮನವಿ ಅಧಿಕಾರಿಗೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ.

ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಭಾಗವಹಿಸುತ್ತಿದ್ದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ, ಸನಾತನ ಧರ್ಮದ ಶ್ರೇಯಸ್ಸನ್ನು ವಿವರಿಸುತ್ತಾ, ಅದನ್ನು ಅನುಸರಿಸುವುದು ಮುಖ್ಯ ಎಂದು ನಿರಂತರವಾಗಿ ಹೇಳುತ್ತಿದ್ದರು. ಸನಾತನ ಧರ್ಮದ ಉಲ್ಲೇಖಗಳ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ, ಚೆನ್ನೈ ಮೂಲದ ಹಿರಿಯ ವಕೀಲ ಎಸ್.ದುರೈಸ್ವಾಮಿ ಅವರು ರಾಜ್ಯಪಾಲ ಆರ್.ಎನ್.ರವಿ ಅವರಿಗೆ ಅರ್ಜಿ ಸಲ್ಲಿಸಿ, ಸನಾತನ ಧರ್ಮದ ಬಗ್ಗೆ ಮಾಹಿತಿ ಒದಗಿಸುವಂತೆ ಕೋರಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ತಮಿಳುನಾಡು ರಾಜಭವನ ಕಚೇರಿಯ ಮಾಹಿತಿ ಅಧಿಕಾರಿ, ‘ವಕೀಲರು ಎತ್ತಿರುವ ಪ್ರಶ್ನೆಗಳು ಆರ್‌ಟಿಐ ಕಾಯ್ದೆಯಡಿ ಬರುವುದಿಲ್ಲ. ಅದಕ್ಕೆ ಸಂಬಂಧಪಟ್ಟ ಮಾಹಿತಿ ತಮ್ಮ ಕಛೇರಿಯಲ್ಲಿ ಲಭ್ಯವಿಲ್ಲ’ ಎಂಬ ಮಾಹಿತಿಯನ್ನು ಒದಗಿಸಿದ್ದರು.

ಸಾರ್ವಜನಿಕ ಮಾಹಿತಿ ಅಧಿಕಾರಿ ನೀಡಿದ ಅಪೂರ್ಣವಾದ ಮಾಹಿತಿಯ ವಿರುದ್ಧ, ವಕೀಲ ಎಸ್.ದುರೈಸ್ವಾಮಿ ಅವರು ಕಳೆದ ವರ್ಷ ನವೆಂಬರ್ 3 ರಂದು ರಾಜಭವನದ ಸಾರ್ವಜನಿಕ ಮಾಹಿತಿ ಮೇಲ್ಮನವಿ ಅಧಿಕಾರಿಗೆ ಸಕ್ಷನ್ 19(1) ರಡಿಯಲ್ಲಿ ಮೇಲ್ಮನವಿ ಸಲ್ಲಿಸಿದರು.

ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ

 ಅರ್ಜಿಯಲ್ಲಿ, ‘ರಾಜಕೀಯ ವ್ಯವಸ್ಥೆಯಲ್ಲಿ ಉನ್ನತ ಸ್ಥಾನದಲ್ಲಿರುವ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಸೂಕ್ತ ಉತ್ತರ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಅವರು ಸನಾತನ ಧರ್ಮದ ಬಗ್ಗೆ ಮಾತನಾಡಲು ಆಧಾರವೇನು ಎಂಬುದನ್ನು ತಿಳಿಸಬೇಕು’ ಎಂದು ಕೋರಿದ್ದರು.

ಈ ಮೇಲ್ಮನವಿಯ ಮೇಲೆ ರಾಜಭವನದ ಸಾರ್ವಜನಿಕ ಮಾಹಿತಿ ಮೇಲ್ಮನವಿ ಅಧಿಕಾರಿ ಕ್ರಮ ಕೈಗೊಳ್ಳದ ಕಾರಣ, ವಕೀಲ ದುರೈಸ್ವಾಮಿ ಅವರು ಮದ್ರಾಸ್ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದರು. ನ್ಯಾಯಮೂರ್ತಿ ಎಂ.ತಂಡಪಾಣಿ ಅವರ ಮುಂದೆ ಪ್ರಕರಣ ವಿಚಾರಣೆಗೆ ಬಂದಿತ್ತು.ಅರ್ಜಿದಾರರ ಪರವಾಗಿ ವಕೀಲ ಇಳಂಗೋವನ್ ವಾದ ಮಂಡಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ‘ವಕೀಲ ದುರೈಸ್ವಾಮಿ ಅವರ ಮೇಲ್ಮನವಿ ಕುರಿತು ರಾಜಭವನದ ಸಾರ್ವಜನಿಕ ಮಾಹಿತಿ ಮೇಲ್ಮನವಿ ಅಧಿಕಾರಿ 8 ವಾರಗಳಲ್ಲಿ ತೀರ್ಮಾನ ಕೈಗೊಳ್ಳಬೇಕು’ ಎಂದು ಆದೇಶಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದಾರೆ.

The Madras High Court has directed the appellant authority of Tamil Nadu Raj Bhavan to take action against the RTI application seeking an explanation about the Sanatan Dharma quotes used by the Governor during his speeches, within 8 weeks.

Tags: Dynamic Leaderdynamicleader.inKannada NewsKannada News OnlineKannada News Portalkannada Online News PortalPolitical NewsR.N.RaviRTI ActRTI ActivistSanatan DharamSanatana DharmaTamilunadu Raj Bhavanಆರ್.ಎನ್.ರವಿಆರ್‌ಟಿಐ ಕಾಯ್ದೆಆರ್‌ಟಿಐ ಕಾರ್ಯಕರ್ತತಮಿಳುನಾಡು ರಾಜ ಭವನಸನಾತನ ಧರ್ಮ
Previous Post

ರಾಯಚೂರಿನಲ್ಲಿ ಏಮ್ಸ್‌ (AIIMS) ಆಸ್ಪತ್ರೆ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ!

Next Post

ಶಕ್ತಿ ಯೋಜನೆಯಿಂದಾಗಿ ದೇವಸ್ಥಾನ ಹಾಗೂ ಪೂಜಾ ಕೇಂದ್ರಗಳಿಗೆ ಬರುವ ಭಕ್ತರ ಸಂಖ್ಯೆ ದ್ವಿಗುಣವಾಗಿದೆ! ಸಚಿವ ಪ್ರಿಯಾಂಕ್ ಖರ್ಗೆ

Next Post

ಶಕ್ತಿ ಯೋಜನೆಯಿಂದಾಗಿ ದೇವಸ್ಥಾನ ಹಾಗೂ ಪೂಜಾ ಕೇಂದ್ರಗಳಿಗೆ ಬರುವ ಭಕ್ತರ ಸಂಖ್ಯೆ ದ್ವಿಗುಣವಾಗಿದೆ! ಸಚಿವ ಪ್ರಿಯಾಂಕ್ ಖರ್ಗೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS