• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡದಿರಲು ಚೀನಾವೇ ಕಾರಣ! ಸುಬ್ರಮಣಿಯನ್ ಸ್ವಾಮಿ

by Dynamic Leader
17/12/2023
in ದೇಶ, ರಾಜಕೀಯ
0
0
SHARES
0
VIEWS
Share on FacebookShare on Twitter

ಗಲಭೆಗಳು ಭುಗಿಲೆದ್ದಿರುವ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡದಿರಲು ಚೀನಾವೇ ಕಾರಣ ಎಂದು ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ತಮ್ಮ ಟ್ವಿಟರ್ ಪುಟದಲ್ಲಿ ಹೇಳಿದ್ದಾರೆ.

ಪ್ರಸ್ತುತ ಭಾರತದ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ವಾಸಿಸುವ 2 ಬುಡಕಟ್ಟುಗಳ ನಡುವೆ ಸಂಘರ್ಷವಿದೆ. ಕಳೆದ ವರ್ಷ ಇಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬುಡಕಟ್ಟು ಸಮುದಾಯಕ್ಕೆ ಸೇರಿದ ಬಿರೇನ್ ಸಿಂಗ್ ಮುಖ್ಯಮಂತ್ರಿಯಾಗಿದ್ದಾರೆ. ಅಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗಿನಿಂದ ಸಮಸ್ಯೆಗಳು ಹೆಚ್ಚುತ್ತಲೇ ಇವೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಮೈತೇಯಿ ಸಮುದಾಯದ ಜನರು ತಮ್ಮನ್ನು ಬುಡಕಟ್ಟು ಪಟ್ಟಿಗೆ ಸೇರಿಸಬೇಕು ಎಂದು ಕಳೆದ ಕೆಲವು ತಿಂಗಳಿನಿಂದ ಒತ್ತಾಯಿಸುತ್ತಿದ್ದಾರೆ. ಆದರೆ ಪರಿಶಿಷ್ಟ ಪಂಗಡಕ್ಕೆ ಸೇರಿದ ‘ಕುಕಿ’ ಸಮುದಾಯ ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದೆ.

ಇದರಿಂದಾಗಿ ಎರಡು ಸಮುದಾಯಗಳ ನಡುವೆ ಸಮಸ್ಯೆಗಳು ಉದ್ಭವಿಸಿ ಗಲಭೆಯಾಗಿ ಮಾರ್ಪಟ್ಟಿವೆ. ಈ ಗಲಭೆಯಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ ಅಲ್ಲಿರುವ ಕೇಂದ್ರ ಸಚಿವರು ಹಾಗೂ ರಾಜ್ಯ ಸಚಿವರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಇದಲ್ಲದೇ ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೇಂದ್ರ-ರಾಜ್ಯ ಬಿಜೆಪಿ ಸರ್ಕಾರ ಈ ಗಲಭೆಯನ್ನು ನಿಯಂತ್ರಣಕ್ಕೆ ತರದೆ ತಮಾಷೆ ನೋಡುತ್ತಿದೆ ಎಂದು ದೇಶಾದ್ಯಂತ ವಿರೋಧ ಪಕ್ಷಗಳು ಟೀಕಿಸುತ್ತಿರುವ ಬೆನ್ನಲ್ಲೇ, ರಾಜ್ಯದ ಬಿಜೆಪಿ ಸಚಿವರುಗಳು, ಬಿಜೆಪಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸರ್ಕಾರಕ್ಕೆ ದೂರು ಪತ್ರ ರವಾನಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಅಲ್ಲದೇ 50 ದಿನಗಳಿಗೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಈ ಅಹಿತಕರ ಘಟನೆಯನ್ನು ಸರಿಪಡಿಸಲು ಮುಂದಾಗದ ಪ್ರಧಾನಿ ಮೋದಿ, ಮಣಿಪುರದ ಬದಲು ಅಮೆರಿಕ-ಈಜಿಪ್ಟ್ ಪ್ರವಾಸಕ್ಕೆ ತೆರಳಿದ್ದರು. ಈ ಘಟನೆಯಿಂದ ದೇಶದೆಲ್ಲೆಡೆ ಮೋದಿಯವರ ವಿರುದ್ದ ವ್ಯಾಪಕವಾದ ಖಂಡನೆಗಳು ವ್ಯಕ್ತವಾದವು. ಆದರೂ, ಇಲ್ಲಿಯವರೆಗೆ ಮೋದಿಯವರು ಮಣಿಪುರದ ಕಡೆ ನೋಡಲೇ ಇಲ್ಲ.

ಈ ಹಿನ್ನಲೆಯಲ್ಲಿ ಮೋದಿ ಮಣಿಪುರಕ್ಕೆ ಹೋಗದಿರಲು ಚೀನಾವೇ ಕಾರಣ ಎಂದು, ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ತಮ್ಮ ಟ್ವಿಟರ್ ಪುಟದಲ್ಲಿ ಹೇಳಿದ್ದಾರೆ. ಇದರ ಬಗ್ಗೆ ಅವರು ಮಾಡಿರುವ ಟ್ವೀಟ್ ನಲ್ಲಿ, “ಪ್ರಧಾನಿ ಮೋದಿ ಮಣಿಪುರಕ್ಕೆ ಹೋಗಿ ಅಲ್ಲಿನ ಜನರಿಗೆ ಏಕೆ ಸಾಂತ್ವನ ಹೇಳಲಿಲ್ಲ.

ಬರ್ಮಾ (ಮ್ಯಾನ್ಮಾರ್) ಮೂಲಕ ಚೀನಾ ಸರಬರಾಜು ಮಾಡುವ ಶಸ್ತ್ರಾಸ್ತ್ರಗಳಿಂದ ಮೈತೇಯಿ ವಿರೋಧಿ (ಹಿಂದೂ) ಜನರನ್ನು ಗುರಿಯಾಗಿಸಲಾಗುತ್ತಿದೆ. ಈ ಹಿಂದೆ ಲಡಾಖ್‌ನಲ್ಲಿ ಚೀನಾ ನಮ್ಮ ಭೂಮಿಯನ್ನು ಕಬಳಿಸಲು ಯತ್ನಿಸಿದಾಗ ಮೋದಿ ಹೆದರಿದ್ದರು.

ಅಂದರೆ, ಮ್ಯಾನ್ಮಾರ್ ಮೂಲಕ ಮೈತೇಯಿ ಸಮುದಾಯದ ಮೇಲೆ ದಾಳಿ ಮಾಡಲು ಚೀನಾ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದ್ದು, ಚೀನಾದ ಭಯದಿಂದ ಪ್ರಧಾನಿ ಮೋದಿ ಈ ವಿಷಯದಲ್ಲಿ ಮೌನವಾಗಿದ್ದಾರೆ” ಎಂದು ಸುಬ್ರಮಣಿಯನ್ ಸ್ವಾಮಿ ಟೀಕಿಸಿದ್ದಾರೆ.

ಗಲಭೆಯಿಂದ ಸಂತ್ರಸ್ತರಾದ ಜನರನ್ನು ಮೋದಿ ಭೇಟಿ ಮಾಡದಿರುವ ಹಿನ್ನಲೆಯಲ್ಲಿ, ಅಲ್ಲಿನ ಜನರನ್ನು ಭೇಟಿ ಯಾಗಲು ಇಂದು ರಾಹುಲ್ ಗಾಂಧಿ ಮಣಿಪುರಕ್ಕೆ ತೆರಳಿದ್ದಾರೆ. ಆದರೆ ಇಂಫಾಲ ವಿಮಾನ ನಿಲ್ದಾಣದಿಂದ ಸುರಚಂದಪುರಕ್ಕೆ ತೆರಳುತ್ತಿದ್ದ ರಾಹುಲ್ ಗಾಂಧಿ ಅವರನ್ನು ಬಿಷ್ಣುಪುರ ಪ್ರದೇಶದಲ್ಲಿ ಪೊಲೀಸರು ತಡೆದರು. ಇದರಿಂದಾಗಿ ಕಾಂಗ್ರೆಸ್ ಪಕ್ಷವು ಅಲ್ಲಿ ಪ್ರತಿಭಟನೆಯಲ್ಲಿ ತೊಡಗಿತು.

Tags: BurmaChinaChina WeaponsManipur ViolenceMyanmarRahul Gandhi in ManipurSubramanian Swamyಚೀನಾಚೀನಾ ಶಸ್ತ್ರಾಸ್ತ್ರಗಳುಬರ್ಮಾಮಣಿಪುರಮಣಿಪುರ ಗಲಭೆಮ್ಯಾನ್ಮಾರ್ರಾಹುಲ್ ಗಾಂಧಿಸುಬ್ರಮಣಿಯನ್ ಸ್ವಾಮಿ
Previous Post

ಪ್ರತಿಪಕ್ಷಗಳ ನಾಯಕರ ಸಭೆ ಬೆಂಗಳೂರಿಗೆ ಸ್ಥಳಾಂತರ: ಪ್ರತಿಪಕ್ಷ ನಾಯಕರ ಸಭೆಯಿಂದ ಪ್ರಧಾನಿ ಮೋದಿ ಅಸ್ತವ್ಯಸ್ತರಾಗಿ ಕಾಣುತ್ತಿದ್ದಾರೆ!

Next Post

ಕರ್ನಾಟಕದಲ್ಲಿ ಆಗಿರುವ ತಪ್ಪುಗಳು ಮತ್ತೆ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿರುವ ಮೋದಿ!

Next Post

ಕರ್ನಾಟಕದಲ್ಲಿ ಆಗಿರುವ ತಪ್ಪುಗಳು ಮತ್ತೆ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿರುವ ಮೋದಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS