• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಪ್ರವೇಶ್ ಶುಕ್ಲಾವನ್ನು ಬಿಡುಗಡೆ ಮಾಡಬೇಕು ಅವರೊಬ್ಬ ಪಂಡಿತ! ಸಂತ್ರಸ್ತ ದಶ್ಮತ್ ರಾವತ್

by Dynamic Leader
08/07/2023
in ದೇಶ
0
0
SHARES
1
VIEWS
Share on FacebookShare on Twitter

ಸಹ ಮನುಷ್ಯನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣದಲ್ಲಿ ದಿಢೀರ್ ಟ್ವಿಸ್ಟ್; ಬಾಧಿತ ವ್ಯಕ್ತಿ ಆರೋಪಿಯನ್ನು ಖುಲಾಸೆಗೊಳಿಸುವಂತೆ ಮನವಿ ಮಾಡಿರುವುದು ಎಲ್ಲರನ್ನೂ ಚಕಿತಗೊಳಿಸುವಂತೆ ಮಾಡಿದೆ.

ಆರೋಪಿಗೆ ತಾನು ಮಾಡಿರುವುದು ಅಪರಾಧವೆಂದು ಅರಿವಾಗಿರುವುದರಿಂದ ಆತನನ್ನು ಬಿಡುಗಡೆ ಮಾಡಬಹುದು ಎಂದು ಬುಡಕಟ್ಟು ಜನಾಂಗದ ದಶ್ಮತ್ ರಾವತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶ ಸಿಧಿ ಜಿಲ್ಲೆಗೆ ಸೇರಿದ ಅದಿವಾಸಿ ಯುವಕನ ಮೇಲೆ ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ, ಮೂತ್ರ ವಿಸರ್ಜನೆ ಮಾಡಿದ ಅಮಾನವೀಯ ಘಟನೆ ಕೆಲವು ದಿನಗಳ ಹಿಂದೆ ನಡೆದಿತ್ತು. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ದೇಶಾದ್ಯಂತ ಸಂಚಲನ ಮೂಡಿಸಿತು.

ನಂತರದ ತನಿಖೆಯಲ್ಲಿ, ಸಿಧಿ ಜಿಲ್ಲೆಯ 36 ವರ್ಷದ ದಶ್ಮತ್ ರಾವತ್ ಸಂತ್ರಸ್ತನಾಗಿದ್ದು, ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ ಈ ಕೃತ್ಯದಲ್ಲಿ ಭಾಗಿಯಾಗಿರುವುದು ಎಂದು ತಿಳಿದುಬಂದಿತು. ಆರೋಪಿ ಪ್ರವೇಶ್ ಶುಕ್ಲಾ, ಕ್ಷೇತ್ರದ ಬಿಜೆಪಿ ಶಾಸಕ ಕೇದಾರ್ ಶುಕ್ಲಾ ಅವರ ಪ್ರತಿನಿಧಿ ಎಂದು ವಿರೋಧ ಪಕ್ಷಗಳು ಬಲವಾಗಿ ಆರೋಪಿಸಿತು. ಆದರೆ, ಶಾಸಕ ಕೇದಾರ್ ಶುಕ್ಲಾ ಅವರು, “ಪ್ರವೇಶ್ ಶುಕ್ಲಾ ಅವರನ್ನು ಕ್ಷೇತ್ರದ ವ್ಯಕ್ತಿಯಾಗಿ ನನಗೆ ತಿಳಿದಿದೆ. ಆದರೆ, ಬಿಜೆಪಿಗೂ ಆತನಿಗೂ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಆಡಳಿತಕ್ಕೆ ಸೂಚಿಸಿರುವುದಾಗಿ ತಿಳಿಸಿದ್ದರು.ಮತ್ತು ಕಳೆದ ಗುರುವಾರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಂತ್ರಸ್ತನನ್ನು ಭೋಪಾಲ್‌ನಲ್ಲಿರುವ ತಮ್ಮ ನಿವಾಸಕ್ಕೆ ಕರೆದು, ಅವರ ಪಾದಗಳನ್ನು ತೊಳೆದು ಕ್ಷಮೆಯಾಚಿಸಿದರು. ಆದರೆ ಮುಖ್ಯಮಂತ್ರಿಗಳ ಈ ಕ್ರಮ ಬರೀ ನಾಟಕ ಎಂದು ವಿರೋಧ ಪಕ್ಷಗಳು ವ್ಯಂಗ್ಯ ಮಾಡಿದವು.

ಇದನ್ನೂ ಓದಿ: ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ ಮುಖಂಡನ ಬಂಧನ!

ಸಿಧಿ ಪೊಲೀಸರು ಪ್ರವೇಶ್ ಶುಕ್ಲಾ ವಿರುದ್ಧ ಐಪಿಸಿ ಸೆಕ್ಷನ್ 294 ಮತ್ತು 504, SC/ST ಕಾಯಿದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ಕಳೆದ ಬುಧವಾರ ಬಂಧಿಸಿದರು. ಈ ಹಿನ್ನಲೆಯಲ್ಲಿ ಪ್ರವೇಶ್ ಶುಕ್ಲಾ ಅವರಿಂದ ಬಾಧೆಗೊಳಗಾದ ದಶ್ಮತ್ ರಾವತ್, ಆತನನ್ನು ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾನೆ.

ಇದರ ಬಗ್ಗೆ ಮಾತನಾಡಿದ ಸಂತ್ರಸ್ತ ದಶ್ಮತ್ ರಾವತ್, “ತಪ್ಪು ನಡೆದಿರುವುದು ನಿಜ; ಆದರೂ ಆತನನ್ನು ಬಿಡುಗಡೆ ಮಾಡುವಂತೆ ಸರ್ಕಾರವನ್ನು ಕೋರುತ್ತೇನೆ. ಪ್ರವೇಶ್ ಶುಕ್ಲಾಗೆ ತನ್ನ ತಪ್ಪಿನ ಅರಿವಾಗಿದೆ. ಅವರು ನಮ್ಮ ಹಳ್ಳಿಯ ಪಂಡಿತರು” ಎಂದು ಹೇಳಿದ್ದಾರೆ. ಇದು ಎಲ್ಲರನ್ನೂ ಚಕಿತಗೊಳಿಸುವಂತೆ ಮಾಡಿದೆ.

Tags: Dashmat Rawat Urination CaseMadhya PradeshPravesh ShuklaShivaraj Singh Chouhanದಶ್ಮತ್ ರಾವತ್ಪ್ರವೇಶ್ ಶುಕ್ಲಾಮಧ್ಯಪ್ರದೇಶಶಿವರಾಜ್ ಸಿಂಗ್ ಚೌಹಾಣ್
Previous Post

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಡವರ-ಮಧ್ಯಮ ವರ್ಗದವರ ಮೇಲೆ ಯಾವುದೇ ತೆರಿಗೆ ಹಾಕಿಲ್ಲ! ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಉತ್ತರ ಪ್ರದೇಶದಲ್ಲಿ ದಲಿತ ಯುವಕನ ಮೇಲೆ ಹಲ್ಲೆ; ಶೂ ನೆಕ್ಕುವಂತೆ ಮಾಡಿದ ವೀಡಿಯೊ ವೈರಲ್!

Next Post

ಉತ್ತರ ಪ್ರದೇಶದಲ್ಲಿ ದಲಿತ ಯುವಕನ ಮೇಲೆ ಹಲ್ಲೆ; ಶೂ ನೆಕ್ಕುವಂತೆ ಮಾಡಿದ ವೀಡಿಯೊ ವೈರಲ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS