• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಜಗಮೆಚ್ಚಿದ ನಾಯಕ ನರೇಂದ್ರ ಮೋದಿ ಅವರ ಮೇಲೆ ದ್ವೇಷ ಕಾರುವುದಷ್ಟೇ ವಿರೋಧ ಪಕ್ಷಗಳ ಅಜೆಂಡಾ!

by Dynamic Leader
18/07/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ದೇಶದ ಹಿತವನ್ನು ಬಯಸದ, ಸದಾ ವೈಯುಕ್ತಿಕ ಹಿತಾಸಕ್ತಿಗಳ ಮೇಲಾಟದಲ್ಲಿ ತೊಡಗುವ, ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ “ಅವಕಾಶವಾದಿಗಳ ಸಭೆ ಇಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ಜಗಮೆಚ್ಚಿದ ನಾಯಕ ನರೇಂದ್ರ ಮೋದಿ ಅವರ ಮೇಲೆ ದ್ವೇಷ ಕಾರುವುದಷ್ಟೇ ಇವರ ಪ್ರಮುಖ ಅಜೆಂಡಾ ಎಂದು ಕರ್ನಾಟಕ ಬಿಜೆಪಿ ಹೇಳಿದೆ.

ಸದಾ ಅಧಿಕಾರಕ್ಕಾಗಿ ಕಚ್ಚಾಡುವ ಇವರುಗಳು ರಾಜಕಾರಣದಲ್ಲಿ ಇದುವರೆಗೂ ಬದ್ಧತೆ ಎಂಬುದನ್ನು ಒಮ್ಮೆಯೂ ಪ್ರದರ್ಶಿಸಿಲ್ಲ. ಭೃಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತಗಳು ಇವರ ಮುಖ್ಯ ಸಿದ್ದಾಂತವಾಗಿದ್ದು, ಅದನ್ನು ಸಾಧಿಸಲು ಈಗ ಒಂದಾಗುವ ನಾಟಕವಾಡುತ್ತಿದ್ದಾರೆ. ಈ ಸಭೆಯ ಆಯೋಜಕರು ಯಾರು? ಈ ಸಭೆಯ ಅಧ್ಯಕ್ಷರು ಯಾರು? ಈ ಸಭೆಯ ಸಂಯೋಜನೆ ಯಾವ ಪಕ್ಷದ್ದು? ಇದ್ಯಾವುದರ ಬಗ್ಗೆ ಸ್ವಲ್ಪವೂ ಸ್ಪಷ್ಟತೆ ಇಲ್ಲ. “ಯುನೈಟೆಡ್ ವಿ ಸ್ಟಾಂಡ್” ಎಂಬ ಈ ಕಿಟ್ಟಿ ಪಾರ್ಟಿಯ ಹೆಸರೇ ಇವರ ಮಧ್ಯೆ ಒಗ್ಗಟ್ಟು ದೂರದ ಬೆಟ್ಟ ಎಂಬುದನ್ನು ನಿರೂಪಿಸುತ್ತದೆ!

ದಶಕಗಳಿಂದ ಪಶ್ಚಿಮ ಬಂಗಾಳದಲ್ಲಿ ಪರಸ್ಪರ ಕಚ್ಚಾಡುತ್ತಿರುವ ಮಮತಾ ಬ್ಯಾನರ್ಜಿಯ ಟಿಎಂಸಿ ಹಾಗೂ ಕಮ್ಯುನಿಸ್ಟರು ಇಂದು ಒಂದೇ ಟೇಬಲ್‌ನಲ್ಲಿ ಕುಳಿತು ಒಗ್ಗಟ್ಟು ಪ್ರದರ್ಶಿಸುತ್ತಾರಂತೆ!! ಕೇರಳದಲ್ಲಿ ಅಧಿಕಾರಕ್ಕಾಗಿ ಹೊಡೆದಾಡುವ ಕಾಂಗ್ರೆಸ್ ಮತ್ತು ಕಮ್ಯುನಿಸ್ಟರು ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಕಾಮ್ರೇಡ್‌ಗಳಂತೆ!! ಪಂಜಾಬ್‌ನಲ್ಲಿ ಬಾಯಿಗೆ ಬಂದಂತೆ ಪರಸ್ಪರ ಬೈದಾಡಿಕೊಳ್ಳುವ ಆಮ್ ಆದ್ಮಿ ಪಕ್ಷದವರು ಹಾಗೂ ಕಾಂಗ್ರೆಸ್‌ನವರು, ಇಲ್ಲಿ ಮಾತ್ರ ಬಾಂಧವರಂತೆ!!

ಕನ್ನಡಿಗರ ಕುಡಿಯುವ ನೀರಿಗೆ, ಕಾವೇರಿ ಹಾಗೂ ಮೇಕೆದಾಟು ಯೋಜನೆಗಳಿಗೆ ಸದಾ ಇನ್ನಿಲ್ಲದಂತೆ ತೊಂದರೆ ಕೊಡುವ ತಮಿಳುನಾಡಿನ ಸಿಎಂ ಸ್ಟಾಲಿನ್‌ಗೆ, ಕರ್ನಾಟಕದ ಕಾಂಗ್ರೆಸ್ ಪಕ್ಷ ಚಿನ್ನತಂಬಿಯಂತೆ!! ಕನ್ನಡಿಗರಿಗೆ ಮಹಾದಾಯಿ ನದಿಯ ಒಂದು ತೊಟ್ಟು ನೀರು ಬಿಡುವುದಿಲ್ಲವೆಂದು ಗೋವಾದಲ್ಲಿ ಘೋಷಿಸಿದ್ದ ಸೋನಿಯಾ ಗಾಂಧಿಗೆ ಇಲ್ಲಿ ದೊಡ್ಡ ಕುರ್ಚಿಯಂತೆ!!

ಸೋನಿಯಾ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬಾರದೆಂದು, ಕಾಂಗ್ರೆಸ್ ಪಕ್ಷವನ್ನೇ ತುಂಡರಿಸಿ ಹೊರ ಬಂದ ಎನ್.ಸಿ.ಪಿ ಸಹ ಇಲ್ಲಿ ಅತಿಥಿಯಂತೆ!! ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಬಿಹಾರವನ್ನು ‘ಬಿಮಾರು’ಗೊಳಿಸಿದ್ದ ನಿತೀಶ್ ಕುಮಾರ್ & ಲಾಲೂ ಪ್ರಸಾದ್ ಯಾದವ್, ಇಲ್ಲಿ ಭಾಯಿ-ಭಾಯಿಗಳಂತೆ!! ಭಾರತವನ್ನು ತುಂಡರಿಸುವಂತಹ ಹೇಳಿಕೆಗಳನ್ನು ನೀಡುವ, ಪಾಕಿಸ್ಥಾನ ಪ್ರೇಮಿ ಫಾರೂಕ್ ಅಬ್ದುಲ್ಲಾಗೂ ಸಹ ಇಲ್ಲಿಗೆ ಆಹ್ವಾನವಿದೆಯಂತೆ!!

ಹಿಂದೂ ಧರ್ಮವನ್ನು ಸದಾ ಅವಹೇಳನ ಮಾಡುವ, ಹಿಂದೂಗಳನ್ನು ಅತ್ಯಂತ ಕೆಟ್ಟದಾಗಿ ನಿಂದಿಸುವ, ದ್ವೇಷಿಸುವ ತಮಿಳುನಾಡಿನ ತೋಳ್ ತಿರುಮಾವಳವನ್, ಮುಸ್ಲಿಂ ಲೀಗ್‌ಗೆ ಇಲ್ಲಿ ಪಾಲಿದೆಯಂತೆ!! ಇಂತಹವರಿಂದ ಸಧೃಡ ಭಾರತ ಹಾಗೂ ಸಶಕ್ತ ಭಾರತವನ್ನು ನಿರ್ಮಿಸಲು ಸಾಧ್ಯವೇ..? ತಿಂಡಿ ತಿನ್ನುವ ವೇಳೆ ಇರುವ ಇವರುಗಳ ಸ್ನೇಹ, ಊಟದ ವೇಳೆಗೆ ಮಾಯವಾದರೂ ಅಚ್ಚರಿ ಇಲ್ಲ. ಎಂದು ಕರ್ನಾಟಕ ಬಿಜೆಪಿ ಸರಣಿ ಟ್ವೀಟ್ ಮಾಡಿ ಆಕ್ರೂಶ ವ್ಯಕ್ತ ಪಡಿಸಿದೆ.

Tags: Banagalore MeetingOpposition LeadersOpposition MeetParliament Election 2024ಪ್ರತಿಪಕ್ಷಗಳ ಸಭೆಬೆಂಗಳೂರು ಮೀಟಿಂಗ್ಬೆಂಗಳೂರು ಸಭೆವಿರೊಧಪಕ್ಷ ನಾಯಕರುಸಂಸತ್ ಚುನಾವಣೆ 2024
Previous Post

DRDOನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಮೋಸ ಮಾಡಿದ ಮಾಲಕೊಂಡಯ್ಯ ಮತ್ತು ಇತರರ ವಿರುದ್ಧ ದೂರು!

Next Post

ಕೇರಳದ ಮಾಜಿ ಮುಖ್ಯಮಂತ್ರಿ‌ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ!

Next Post

ಕೇರಳದ ಮಾಜಿ ಮುಖ್ಯಮಂತ್ರಿ‌ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS