• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಮಣಿಪುರವನ್ನು ಮರುಸ್ಥಾಪಿಸಲು ರಾಷ್ಟ್ರಪತಿಗಳ ಮಧ್ಯಸ್ಥಿಕೆ ಮುಖ್ಯವಾಗಿದೆ: ಇಂಡಿಯಾ ಮೈತ್ರಿಕೂಟ

by Dynamic Leader
02/08/2023
in ದೇಶ, ರಾಜಕೀಯ
0
0
SHARES
1
VIEWS
Share on FacebookShare on Twitter

ಮಣಿಪುರದ ಜನರ ಸಂಕಷ್ಟವನ್ನು ನಿವಾರಿಸಲು, ರಾಜ್ಯದಲ್ಲಿ ಸಹಜಸ್ಥಿತಿಯನ್ನು ಮರುಸ್ಥಾಪಿಸಲು ಸಹಾಯ ಮಾಡುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂಡಿಯಾ ಮೈತ್ರಿಕೂಟದ ನಾಯಕರು ಖುದ್ದು ಭೇಟಿಯಾಗಿ ಒತ್ತಾಯಿಸಿದ್ದಾರೆ.

ಈ ಕುರಿತು ಇಂಡಿಯಾ ಮೈತ್ರಿಕೂಟ ಪ್ರಕಟಿಸಿರುವ ಹೇಳಿಕೆಯಲ್ಲಿ, “ಕಳೆದ ಕೆಲವು ವಾರಗಳಿಂದ ಮಣಿಪುರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೊ ದೇಶವನ್ನೇ ಬೆಚ್ಚಿ ಬೀಳಿಸಿದೆ. ರಾಜ್ಯ ಸರಕಾರ ಮತ್ತು ಪೊಲೀಸರು ಕೂಡಲೇ ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ. ಆರೋಪಿಗಳನ್ನು ಬಂಧಿಸುವಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲ ವಿಳಂಬವಾಗುತ್ತಿರುವುದು ಸಮಸ್ಯೆಯ ತೀವ್ರತೆಯನ್ನು ಹೆಚ್ಚಿಸಿದೆ. ಈ ಒಂದು ಘಟನೆಯು ಮಹಿಳೆಯರ ಮೇಲೆ ಅನೇಕ ದೌರ್ಜನ್ಯಗಳು ನಡೆದಿವೆ ಎಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ: ಮೋದಿಯವರು ಮೌನವಾಗುವ ಮತ್ತು ಮಾತನಾಡುವ ಸಂದರ್ಭಗಳು ಯಾವುದು?

ಜುಲೈ 29 ಮತ್ತು 30 ರಂದು ಎರಡು ದಿನಗಳ ಕಾಲ ಇಂಡಿಯಾ ಮೈತ್ರಿಕೂಟದ ಸಂಸದರ ಗುಂಪು ಮಣಿಪುರಕ್ಕೆ ಭೇಟಿ ನೀಡಿತ್ತು.ಇವರು ರಾಜ್ಯದ ದುಸ್ಥಿತಿ ಬಗ್ಗೆ ವರದಿಯನ್ನೂ ನೀಡಿದ್ದಾರೆ. ರಾಜ್ಯದ ರಾಜ್ಯಪಾಲರನ್ನೂ ಭೇಟಿಯಾಗಿ ದೌರ್ಜನ್ಯವನ್ನು ವಿವರಿಸಿದ್ದಾರೆ. ಈ ಹಿಂಸಾಚಾರದ ಪರಿಣಾಮ ಮಣಿಪುರದಲ್ಲಿ ಅನಾಹುತಕ್ಕೆ ಕಾರಣವಾಗಿದೆ. 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಾಜ್ಯದಿಂದ 60 ಸಾವಿರಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಚುರಾಚಂದ್‌ಪುರ, ಮೊಯಿರಾಂಗ್ ಮತ್ತು ಇಂಫಾಲ್‌ನಲ್ಲಿ ಸ್ಥಾಪಿಸಲಾದ ಪರಿಹಾರ ಶಿಬಿರಗಳಲ್ಲಿರುವ ಜನರು ಆಹಾರ ಪೂರೈಕೆಯ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಅವರಲ್ಲಿ ಭಯವಿದೆ; ಅವರು ಅಸುರಕ್ಷಿತ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಈ ಹಿಂಸಾಚಾರದ ಗಂಭೀರತೆಯನ್ನು ಚರ್ಚಿಸಬೇಕು ಮತ್ತು ಪ್ರಧಾನಿ ವಿವರಣೆ ನೀಡಬೇಕು ಎಂದು ಇಂಡಿಯಾ ಮೈತ್ರಿಕೂಟ ಸಂಸತ್ತಿನಲ್ಲಿ ಒತ್ತಾಯಿಸುತ್ತಿದೆ. ಆದರೆ ಸಂಸತ್ತಿನಲ್ಲಿ ನಿರಂತರವಾಗಿ ಜನರ ಧ್ವನಿಯನ್ನು ಹತ್ತಿಕ್ಕಲಾಗುತ್ತದೆ.

ಇದನ್ನೂ ಓದಿ: ಆ್ಯಂಟಿ ಕಮ್ಯುನಲ್ ವಿಂಗ್‌ಗೆ ಶಕ್ತಿ ತುಂಬಿ ಸಕ್ರಿಯಗೊಳಿಸಿ; ಕರ್ನಾಟಕ ಮುಸ್ಲಿಮ್ ಯೂನಿಟಿಯ ಖಾಸಿಂ ಸಾಬ್ ಆಗ್ರಹ!

ಇನ್ನು ತಡಮಾಡದೆ ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಮರುಸ್ಥಾಪಿಸಲು ನಿಮ್ಮ ಮಧ್ಯಸ್ಥಿಕೆ ನಮಗೆ ಅಗತ್ಯವಿದೆ. ಮಣಿಪುರವನ್ನು ಉದ್ದೇಶಿಸಿ ಮಾತನಾಡುವಂತೆ ಪ್ರಧಾನಿ ಮೇಲೆ ಒತ್ತಡ ಹೇರಬೇಕು. ಮಣಿಪುರದ ಜನರ ನೋವನ್ನು ನಿವಾರಿಸಲು ಮತ್ತು ರಾಜ್ಯದಲ್ಲಿ ಸಹಜತೆಯನ್ನು ಮರುಸ್ಥಾಪಿಸಲು ನಿಮ್ಮ ಬೆಂಬಲ ಮತ್ತು ಮಧ್ಯಸ್ಥಿಕೆ ನಿರ್ಣಾಯಕವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಧರ್ಮವನ್ನು ಪಾಲಿಸುವವರು ಮಾತ್ರ ಅದನ್ನು ಬೋಧಿಸಲು ಸಾಧ್ಯ: ಮಣಿಪುರ ಮುಖ್ಯಮಂತ್ರಿ ರಾಜೀನಾಮೆಗೆ ಪಿ.ಚಿದಂಬರಂ ಒತ್ತಾಯ!

Tags: Droupadi MurmuINDIA AllianceIndia Alliance in ManipurMallikarjuna KhargeManipurManipur Violenceಇಂಡಿಯಾ ಮೈತ್ರಿಕೂಟದ್ರೌಪದಿ ಮುರ್ಮುಮಣಿಪುರಮಣಿಪುರ ಗಲಭೆಮಲ್ಲಿಕಾರ್ಜುನ ಖರ್ಗೆ
Previous Post

ಮೋದಿಯವರು ಮೌನವಾಗುವ ಮತ್ತು ಮಾತನಾಡುವ ಸಂದರ್ಭಗಳು ಯಾವುದು? ದಿನೇಶ್ ಗುಂಡೂರಾವ್

Next Post

ಬಿಜೆಪಿ ಅವಧಿಯಲ್ಲಿ ಜಲಜೀವನ್ ಮಿಷನ್ ಭ್ರಷ್ಟಾಚಾರದ ಮಿಷನ್ ಆಗಿತ್ತು; ಇದರ ಪರಿಣಾಮವನ್ನು ಇಂದಿಗೂ ರಾಜ್ಯದ ಜನತೆ ಎದುರಿಸುತ್ತಿದ್ದಾರೆ!

Next Post

ಬಿಜೆಪಿ ಅವಧಿಯಲ್ಲಿ ಜಲಜೀವನ್ ಮಿಷನ್ ಭ್ರಷ್ಟಾಚಾರದ ಮಿಷನ್ ಆಗಿತ್ತು; ಇದರ ಪರಿಣಾಮವನ್ನು ಇಂದಿಗೂ ರಾಜ್ಯದ ಜನತೆ ಎದುರಿಸುತ್ತಿದ್ದಾರೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS