• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ; ನಮ್ಮವರಲ್ಲಿ ಉಪೇಕ್ಷೆ, ಉಡಾಫೆ ಹೆಚ್ಚು!

by Dynamic Leader
13/09/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್‌ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೊಟ್ಟಿರುವ ನಿರ್ದೇಶನ ಆಘಾತಕಾರಿ. ಯಾವ ಕಾರಣಕ್ಕೂ ರಾಜ್ಯ ಸರಕಾರ ನೀರು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸಂಕಷ್ಟಸೂತ್ರವೇ ಇಲ್ಲ, ಕರ್ನಾಟಕಕ್ಕಷ್ಟೇ ಸಂಕಷ್ಟವೇ? ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ. ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು!! ಹೀಗಿದೆ ನಮ್ಮ ಸ್ಥಿತಿ. ಆ ರಾಜ್ಯವು ಎಷ್ಟು ವಿಸ್ತೀರ್ಣದಲ್ಲಿ ಬೆಳೆ ಬೆಳೆಯುತ್ತಿದೆ ಎಂಬ ಅಂಕಿ-ಅಂಶದ ಬಗ್ಗೆ ಸಮಿತಿಯಲ್ಲಿ ಚರ್ಚಿಸಿಲ್ಲ ಎನ್ನುವುದಕ್ಕೆ ಆ ಸಮಿತಿಯ ಆದೇಶವೇ ಸಾಕ್ಷಿ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಸಮಿತಿ & ಪ್ರಾಧಿಕಾರದ ಸಭೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿಲ್ಲ. ಆ ಸಭೆಗಳಿಗೆ ಅಧಿಕಾರಿಗಳು ಆನ್‌ʼಲೈನ್‌ʼನಲ್ಲಿ ಹಾಜರಾದರೆ, ನೆರೆರಾಜ್ಯದವರು ಖುದ್ದು ಹಾಜರಿದ್ದು ಅಂಕಿ-ಅಂಶ ಸಮೇತ ವಾದ ಮಂಡಿಸುತ್ತಾರೆ. ಹೀಗಾದರೆ, ರಾಜ್ಯದ ಹಿತರಕ್ಷಣೆ ಹೇಗೆ ಸಾಧ್ಯ? ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ. ಇದು ದುರಂತ ಎಂದು ಕಿಡಿಕಾರಿದ್ದಾರೆ.

ನಮ್ಮವರಲ್ಲಿ ಉಪೇಕ್ಷೆ, ಉಡಾಫೆ ಹೆಚ್ಚು. ಟ್ರಿಬ್ಯುನಲ್‌ ಆದೇಶ ಉಲ್ಲಂಘಿಸಿರುವ ತಮಿಳುನಾಡು ವಿರುದ್ಧ ಸಮರ್ಥ ವಾದ ಮಂಡಿಸಲು ಏಕೆ ಸಾಧ್ಯವಾಗಿಲ್ಲ? ನೀರಾವರಿ ಪ್ರದೇಶವನ್ನು ನೆರೆರಾಜ್ಯ ಅಕ್ರಮವಾಗಿ ವಿಸ್ತರಣೆ ಮಾಡಿಕೊಂಡಿರುವುದನ್ನು ಹೇಳಲೇಬೇಕಿತ್ತು. ಮೊದಲು ಸಂಕಷ್ಟಸೂತ್ರ ರೂಪಿಸಿ ಎಂದು ಪಟ್ಟು ಹಿಡಿಯಬೇಕಿತ್ತು ಎಂದಿದ್ದಾರೆ.

ಜಲ ನಿರ್ವಹಣೆ ಪ್ರಾಧಿಕಾರ, ಜಲ ನಿಯಂತ್ರಣ ಸಮಿತಿ ಏನು ಮಾಡುತ್ತಿವೆ? ಟ್ರಿಬ್ಯುನಲ್ ಆದೇಶ ಉಲ್ಲಂಘಿಸಿ, ನೀರಾವರಿ ಪ್ರದೇಶ ಹೆಚ್ಚಿಸಿಕೊಂಡಿರುವ ತಮಿಳುನಾಡು ಬಗ್ಗೆ ಇವುಗಳಿಗೆ ಮಾಹಿತಿ ಇಲ್ಲವೇ? ರಾಜ್ಯಗಳ ನೈಜಸ್ಥಿತಿ ಅರಿಯುವ ಕರ್ತವ್ಯ ಅವುಗಳಿಗೆ ಇಲ್ಲವೇ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ನೀತಿ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ರೈತರಿಗೇ ನೀರಿಲ್ಲದಿದ್ದರೂ, ಅವರು ಬೆಳೆಯನ್ನೇ ಬೆಳೆಯದಿದ್ದರೂ ನೀರು ಬಿಡಲು ಸರಕಾರ ಒಪ್ಪಿದೆ. ಈ ವಿಷಯದಲ್ಲಿ ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ. ರೈತರ ತಾಳ್ಮೆಯನ್ನೂ ದುರುಪಯೋಗ ಮಾಡಿಕೊಂಡಿದೆ. ಸುಪ್ರೀಂ ಕೋರ್ಟ್ ಏನು ಹೇಳುತ್ತದೋ ಅಲ್ಲಿಯವರೆಗೆ ಕಾಯಬೇಕಿತ್ತು. ಪ್ರಾಧಿಕಾರ, ಸಮಿತಿ ಹೇಳಿದವೆಂದು ನೀರು ಬಿಟ್ಟಿದ್ದು ತಪ್ಪು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತರ ಬಗ್ಗೆ ಕಾಳಜಿ, ಬೆಂಗಳೂರಿನ ಜನರ ಕುಡಿಯುವ ನೀರಿನ ಬಗ್ಗೆ ಆತಂಕ ಇದ್ದಿದ್ದರೆ ಸರಕಾರ ನೀರು ಹರಿಸುತ್ತಿರಲಿಲ್ಲ. ಬೆಂಗಳೂರಿಗರ ಮೌನ ನನಗೆ ಅಚ್ಚರಿ ತಂದಿದೆ. ನೆರೆ ರಾಜ್ಯಗಳಿಂದ ವಲಸೆ ಬಂದು ನಮ್ಮ ನೆಲ, ಜಲ, ಆರ್ಥಿಕತೆಯ ಆಸರೆಯಲ್ಲಿ ನೆಮ್ಮದಿಯಾಗಿರುವವರು ಕೂಡ ಕಾವೇರಿ ಬಗ್ಗೆ ದನಿ ಎತ್ತಬೇಕು. ಇವರಾರಿಗೂ ಕಾವೇರಿ ನೀರಿನ ಚಿಂತೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ.

ಸರಕಾರ ಹೆಜ್ಜೆಹೆಜ್ಜೆಗೂ ಎಡವಿದೆ. ತಮಿಳುನಾಡು ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದಾಕ್ಷಣ ರಾಜ್ಯ ಸರಕಾರವೂ ತಕ್ಷಣವೇ ಆಕ್ಷೇಪ ಸಲ್ಲಿಸಬೇಕಿತ್ತು. ವಾಸ್ತವ ಸ್ಥಿತಿಯ ಬಗ್ಗೆ ದಾಖಲೆಗಳನ್ನು ಒದಗಿಸಿ, ಸಮರ್ಥವಾಗಿ ಎದುರಿಸಬೇಕಿತ್ತು. ಕಾಲಹರಣ ಮಾಡಿದ್ದಲ್ಲದೆ, ಈಗ ಕಾವೇರಿ ಬಗ್ಗೆ ಮೊಸಳೆ ಕಣ್ಣೀರು ಹಾಕಿದರೆ ಕನ್ನಡಿಗರು ನಂಬಬೇಕಾ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Tags: cauveryCWRCHD KumaraswamyMekedatuಕಾವೇರಿಮೇಕೆದಾಟುಹೆಚ್.ಡಿ.ಕುಮಾರಸ್ವಾಮಿ
Previous Post

ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ನಾಳೆ ಉಗ್ರ ಪ್ರತಿಭಟನೆ!

Next Post

ಕಾವೇರಿ ಜಲವಿವಾದ: ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು; ಸುಪ್ರೀಂಗೂ ಅರ್ಜಿ ಸಲ್ಲಿಸಲಾಗುವುದು!

Next Post

ಕಾವೇರಿ ಜಲವಿವಾದ: ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು; ಸುಪ್ರೀಂಗೂ ಅರ್ಜಿ ಸಲ್ಲಿಸಲಾಗುವುದು!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS