• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನ: ಹೆಚ್.ಡಿ.ಕುಮಾರಸ್ವಾಮಿ

by Dynamic Leader
26/09/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಕರ್ನಾಟಕದ ನಿರಂತರ ಹೋರಾಟ, ಬಂದ್‌ ನಡುವೆಯೂ ದೆಹಲಿಯ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ಸೂಚಿಸಿದೆ. 18 ದಿನಗಳ ಕಾಲ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ತಿಳಿಸಿದೆ. ಈ ಹಿನ್ನಡೆಗೆ ಕಾಂಗ್ರೆಸ್ ಸರ್ಕಾರ ಕಾರಣವೆಂದು ಮಾಜಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪೆಟ್ಟಿನ ಮೇಲೆ ಪೆಟ್ಟು ತಿನ್ನುತ್ತಿರುವ ಕರ್ನಾಟಕಕ್ಕೆ ಈಗ ಮತ್ತೆ ದೊಡ್ಡ ಹಿನ್ನಡೆ ಆಗಿದೆ. ಹಿನ್ನಡೆ ಎನ್ನುವುದು ನಿರಂತರವಾಗಿದ್ದು, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಇನ್ನೂ 18 ದಿನಗಳ ಕಾಲ ನಿತ್ಯವೂ 3000 ಕ್ಯೂಸೆಕ್ಸ್ ಹರಿಸಲು ಕರ್ನಾಟಕಕ್ಕೆ ಇಂದು ಆದೇಶ ನೀಡಿದೆ. ಇದು ನಿಜಕ್ಕೂ ಆಘಾತಕಾರಿ; ಕಾವೇರಿ ಮತ್ತು ಕನ್ನಡಿಗರ ಪಾಲಿಗೆ ಮರಣಶಾಸನ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕಾವೇರಿ ಕೊಳ್ಳ ಮತ್ತು ಬೆಂಗಳೂರು ನಗರದ ಜನರ ಕತ್ತು ಹಿಚುಕುವುದಕ್ಕೆಂದೇ ಕಾಂಗ್ರೆಸ್ ಸರಕಾರ ಬಂದಿದೆಯೇನೋ ಎಂದು ಬಹಳ ನೋವಿನಿಂದ ಹೇಳಲೇಬೇಕಾಗಿದೆ

‘ಕೆಆರ್ಎಸ್ ಜಲಾಶಯಕ್ಕೆ ನಿತ್ಯವೂ 10,000 ಕ್ಯೂಸೆಕ್ ಒಳಹರಿವು ಇದೆ’ ಎನ್ನುತ್ತಾರೆ ಜಲ ಸಂಪನ್ಮೂಲ ಸಚಿವರು. ಇದಕ್ಕೆ ತದ್ವಿರುದ್ಧವಾಗಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ‘ನಮ್ಮಲ್ಲಿ ನೀರೇ ಇಲ್ಲ’ ಎಂಬ ಮಾಹಿತಿ ನೀಡುತ್ತಾರೆ. ಇನ್ನೊಂದೆಡೆ ಹಿರಿಯ ಅಧಿಕಾರಿಯೊಬ್ಬರು ‘ಈ ಆದೇಶದಿಂದ ರಾಜ್ಯಕ್ಕೆ 2.5 ಟಿಎಂಸಿ ನೀರು ಉಳಿತಾಯವಾಗಿದೆ’ ಎನ್ನುತ್ತಾರೆ. ‘ಎತ್ತು ಏರಿಗೆ, ಕೋಣ ನೀರಿಗೆ’ ಎನ್ನುವಂತಿದೆ ಜಲ ಸಂಪನ್ಮೂಲ ಇಲಾಖೆ ಮತ್ತು ಸರಕಾರದ ಪರಿಸ್ಥಿತಿ. ಹೆಜ್ಜೆಹೆಜ್ಜೆಗೂ ಅನರ್ಥಗಳನ್ನೇ ಮಾಡುತ್ತಿರುವ ಈ ಸರಕಾರದ ವೈಫಲ್ಯದ ಲಾಭವನ್ನು ತಮಿಳುನಾಡು ಅತ್ಯಂತ ಜಾಣತನದಿಂದ ಪಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

ನಾವು ಕುಡಿಯಲು ನೀರು ಕೇಳುತ್ತಿದ್ದೇವೆ, ತಮಿಳುನಾಡು ಅಕ್ರಮವಾಗಿ ಮಿತಿಮೀರಿದ ವಿಸ್ತೀರ್ಣದಲ್ಲಿ ಬೆಳೆದ ‘ಕುರುವೈ’ ಬೆಳೆಗೆ ನೀರು ಕೇಳುತ್ತಿದೆ. ಅಲ್ಲಿ ಸ್ವಾರ್ಥ ಇದೆ; ಇಲ್ಲಿ ಜನರ ಬದುಕಿದೆ. ಮಾನವೀಯ ನ್ಯಾಯಕ್ಕೆ ವಿರುದ್ಧವಾದ ತಮಿಳುನಾಡು ನಡೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಆ ರಾಜ್ಯದ ಇಂಥ ಮನಃಸ್ಥಿತಿಯ ವಿರುದ್ಧ ಪ್ರಬಲ ಹೋರಾಟ ಮಾಡುವ ಇಚ್ಛಾಶಕ್ತಿ ಈ ಸರ್ಕಾರಕ್ಕೆ ಇಲ್ಲದಾಗಿದೆ. ಕೇವಲ ಪಾಲುದಾರ ಪಕ್ಷ ಡಿಎಂಕೆಯ ಯೋಗಕ್ಷೇಮವನ್ನೇ ಕೈ ಸರಕಾರ ನೋಡುತ್ತಾ, ಕರ್ನಾಟಕದ ಹಿತವನ್ನು ಸಂಪೂರ್ಣ ಬಲಿ ಕೊಟ್ಟಿದೆ. ಕನ್ನಡಿಗರ ಮೇಲೆ ‘ಬಂಡೆ’ ಎಳೆದಿದೆ ಎಂದು ಆಡಳಿತ ರೂಢ ಡಿಎಂಕೆ ಮತ್ತು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು. ಈಗಾಗಲೇ ಕಾವೇರಿ ನೀರು ಹಂಚಿಕೆಯನ್ನು ನ್ಯಾಯಾಧಿಕರಣ ಅಖೈರುಗೊಳಿಸಿದ್ದು, ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ, ಸಂಕಷ್ಟ ಕಾಲದಲ್ಲಿ ಪರಿಹಾರವೇನು? ಮಾತೆತ್ತಿದರೆ ನೀರು ಬಿಡಿ ಎಂದು ಆದೇಶಿಸುವ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) & ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಈ ಕೂಡಲೇ ‘ಸಂಕಷ್ಟ ಹಂಚಿಕೆ ಸೂತ್ರ’ವನ್ನು ರೂಪಿಸಲೇಬೇಕು. ಆ ನಿಟ್ಟಿನಲ್ಲಿ ಸರ್ಕಾರ ಒತ್ತಡ ಹೇರಿ, ಆ ಸೂತ್ರ ರೂಪಿಸದ ಹೊರತು ತಮಿಳುನಾಡಿಗೆ ನೀರು ಹರಿಸುವ ಪ್ರಶ್ನೆಯೇ ಇಲ್ಲವೆಂದು ಕಡ್ಡಿ ತುಂಡು ಮಾಡಿದಂತೆ ಸ್ಪಷ್ಟವಾಗಿ ಹೇಳಲೇಬೇಕು. ಯಾವುದೇ ಕಾರಣಕ್ಕೂ ಈಗ ನೀರು ಹರಿಸಬಾರದು ಎಂದು ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Tags: Bangalore BundhcauveryFarmersHogenakalMandyaಕಾವೇರಿಬೆಂಗಳೂರು ಬಂದ್ಮಂಡ್ಯರೈತರುಹೊಗೆನಕಲ್
Previous Post

ಪ್ರಧಾನಿ ನರೇಂದ್ರ ಮೋದಿ ಆಡಳಿತದ ವಿರುದ್ಧ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ “5ಸಿ” ಆರೋಪ!

Next Post

ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು!

Next Post

ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS