• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಕುವೆಂಪುನಗರದಲ್ಲಿ ಮಹಾತ್ಮ ಗಾಂಧಿಜೀಯವರ 154ನೇ ಜನ್ಮ ದಿನಾಚರಣೆ!

by Dynamic Leader
02/10/2023
in ಬೆಂಗಳೂರು
0
0
SHARES
0
VIEWS
Share on FacebookShare on Twitter

ಬೆಂಗಳೂರು: ಕೆ.ಆರ್.ಪುರಂ ವ್ಯಾಪ್ತಿಯ ಕುವೆಂಪುನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ “ಕುವೆಂಪುನಗರ ಪೀಪಲ್ಸ್ ವೆಲ್ಫೇರ್ ಅಸೋಸಿಯೇಷನ್” ವತಿಯಿಂದ ಇಂದು ಮಹಾತ್ಮ ಗಾಂಧಿಯವರ 154ನೇ ಜನ್ಮ ದಿನಾಚರನೆಯನ್ನು ಬಹಳ ವಿಭೃಂಜಣೆಯಿಂದ ಆಚರಿಸಲಾಯಿತು.

ಸಂಘದ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು ಮತ್ತು ಕುವೆಂಪುನಗರದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಗಣ್ಯರಿಂದ ಬಾಪೂಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಎಲ್ಲರಿಗೂ ಸಿಹಿ ಹಂಚಲಾಯಿತು.

ಮಹಾತ್ಮಾ ಗಾಂಧಿಯವರದ್ದು ಅಪರೂಪದ ವ್ಯಕ್ತಿತ್ವ; ಶಸ್ತ್ರಾಸ್ತ್ರಗಳ ವಿರುದ್ಧ ಹೋರಾಡಿ ಗೆದ್ದ ಅಹಿಂಸಾತ್ಮಕ ಪಾರಿವಾಳ. ಖ್ಯಾತ ವಿಜ್ಞಾನಿ ಆಲ್ಬರ್ಟ್ ಐನ್ಸ್ಟೈನ್ ಒಮ್ಮೆ ಅವರ ಬಗ್ಗೆ ಪ್ರಸ್ತಾಪಿಸುತ್ತಾ “ಇಂತಹ ಮನುಷ್ಯ ಈ ಭೂಮಿಯ ಮೇಲೆ ಬದುಕಿದ್ದರು ಎಂದು ಮುಂದಿನ ಪೀಳಿಗೆ ನಂಬುವುದು ತುಂಬಾ ಕಷ್ಟ” ಎಂದರು.

“ಉನ್ನತವಾದ ಗುರಿಯಿಟ್ಟುಕೊಂಡರೆ ಸಾಲದು; ಅದನ್ನು ಸಾಧಿಸುವ ಮಾರ್ಗವೂ ಪ್ರಾಮಾಣಿಕವಾಗಿರಬೇಕು” ಎಂದು ಹೇಳಿದ್ದು ಮಾತ್ರವಲ್ಲ ಹೇಳಿದಂತೆ ಬದುಕಿ ತೋರಿಸಿದವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು. ಅಹಿಂಸೆ ಮತ್ತು ಸತ್ಯ ಎಂದಿಗೂ ಸೋಲುವುದಿಲ್ಲ ಎಂದು ಅವರು ದೃಢವಾಗಿ ನಂಬಿದ್ದರು.

ಅನೇಕ ಗುಲಾಮಗಿರಿ ದೇಶಗಳಲ್ಲಿ ಜನರನ್ನು ಮುನ್ನಡೆಸುವ ನಾಯಕರು ಶಸ್ತ್ರಾಸ್ತ್ರಗಳನ್ನು ಹಿಡಿದು ಸ್ವಾತಂತ್ರ್ಯಕ್ಕಾಗಿ ಹೋರಾಡಿದಾಗ, ಅಹಿಂಸೆಯ ಮೂಲಕ ಬ್ರಿಟಿಷ್ ಸಾಮ್ರಾಜ್ಯಶಾಹಿ ವಿರುದ್ಧ ನಿರಾಯುಧವಾಗಿ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ಅವರು. ಅಹಿಂಸೆ, ಸತ್ಯ, ಸಮರ್ಪಣೆ, ಪರಿಶ್ರಮದಲ್ಲಿ ಕೊನೆಯವರೆಗೂ ದೃಢವಾಗಿದ್ದ ಅವರು, ಎಂದಿಗೂ ತಾನು ನಂಬಿದ ತತ್ವ ಸಿದ್ಧಾಂತಗಳೊಂದಿಗೆ ರಾಜಿ ಮಾಡಿಕೊಂಡಿಲ್ಲ ಮತ್ತು ಅವರು ಎಂದಿಗೂ ಹಿಂಸೆಯನ್ನು ಪ್ರತಿಪಾದಿಸಲಿಲ್ಲ.

ರಷ್ಯಾದ ವಿಮೋಚನೆಗಾಗಿ ಹೋರಾಡಿದ ಲೆನಿನ್, ಚೀನಾದ ವಿಮೋಚನೆಗಾಗಿ ಹೋರಾಡಿದ ಮಾವೋ (ಮಾಓ ತ್ಸೆ ತುಂಗ್) ಮುಂತಾದ ವಿಶ್ವದ ಯಾವುದೇ ದೇಶವನ್ನು ತೆಗೆದುಕೊಂಡರೂ ದೇಶಗಳು ಸ್ವಾತಂತ್ರ್ಯ ಪಡೆದಾಗ, ಆ ದೇಶದಲ್ಲಿ ಸ್ಥಾಪಿಸಲಾದ ಸರ್ಕಾರದ ನಾಯಕತ್ವವನ್ನು ಅವರೇ ವಹಿಸಿಕೊಂಡಿದ್ದರು.

ಆದರೆ ಭಾರತದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿಯವರು ಮಾತ್ರ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ, ಇತರರಿಗೆ ಆಡಳಿತದ ಜವಾಬ್ದಾರಿಯನ್ನು ವಹಿಸಿಕೊಟ್ಟು ಮೊದಲಿನಂತೆ ಸರಳ ವ್ಯಕ್ತಿಯಂತೆ ದೇಶದ ಏಕತೆಗೆ ಮತ್ತು ಪ್ರಗತಿಗೆ ಶ್ರಮಿಸಲು ಮುಂದಾದರು.

ಒಂದು ದೇಶವನ್ನು ಮುನ್ನಡೆಸುವ ನಾಯಕ ಹೇಗಿರಬೇಕು ಎಂಬುದಕ್ಕೆ ಅವರೇ ಉದಾಹರಣೆಯಾಗಿದ್ದರು. ಆದ್ದರಿಂದಲೇ ಮೋಹನ್ ದಾಸ್ ಕರಮಚಂದ ಗಾಂಧಿ “ಮಹಾತ್ಮ” ಆದರು. ಈ ಬಿರುದನ್ನು ಕವಿ ರವೀಂದ್ರನಾಥ ಟ್ಯಾಗೋರ್ ಅವರು ನೀಡಿದ್ದಾರೆ. 1909ರಲ್ಲಿ ಪ್ರಂಜಿವನ್ ಮೆಹ್ತಾ ಎಂಬ ಸ್ನೇಹಿತ ಗಾಂಧಿಗೆ ಬರೆದ ಪತ್ರದಲ್ಲಿ ಮೊದಲ ಬಾರಿಗೆ ಅವರನ್ನು “ಮಹಾತ್ಮ” ಎಂದು ಕರೆದಿದ್ದರು.

ಭಾರತ ಸ್ವತಂತ್ರವಾದಾಗ ವಿದೇಶಿ ಪತ್ರಕರ್ತರೊಬ್ಬರು ಮಹಾತ್ಮ ಗಾಂಧಿಯನ್ನು ಭೇಟಿಯಾಗಿ, “ದೇಶದ ಜನತೆಗೆ ನೀವು ಈಗ ಏನು ಹೇಳಲು ಬಯಸುತ್ತೀರಿ?” ಎಂದು ಕೇಳಿದರು. ಅದಕ್ಕೆ ಗಾಂಧಿಯವರು, “ನನ್ನ ಜೀವನವೇ ನನ್ನ ಸಂದೇಶ” ಎಂದರು.

“ನನ್ನ ಜೀವನವೇ ನನ್ನ ಸಂದೇಶ” ಎಂದು ಸಾರಿದ ಮಹಾತ್ಮ ಗಾಂಧಿಯವರ ಜನ್ಮ ದಿನಾಚರನೆಯನ್ನು ಆಚರಿಸುವುದಲ್ಲದೇ  ಅದನ್ನು ಮುಂದಿನ ತಲಮಾರಿಗೆ ಪರಿಚಯಿಸುವ ಕೆಲಸವೂ ಮಾಡುತ್ತಿರುವ ಕುವೆಂಪುನಗರ ಪೀಪಲ್ಸ್ ವೆಲ್ಫೇರ್ ಅಸೋಸಿಯೇಷನ್ ಪದಾಧಿಕಾರಿಗಳ ಮತ್ತು ಆಡಳಿತ ಮಂಡಳಿ ಸದಸ್ಯರ ಕಾರ್ಯ ಶ್ಲಾಘನೀಯ.

ಇದನ್ನೂ ಓದಿ: ಗಾಂಧಿ ಅವರ ಆಶಯದಂತೆ ಕಟ್ಟ ಕಡೆಯ ವ್ಯಕ್ತಿಗೂ ಬದುಕುವ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ! – ಸಿದ್ದರಾಮಯ್ಯ

Tags: Gandhi JayantiIndependenceKuvempunagarMahatma Gandhiಕುವೆಂಪುನಗರಗಾಂಧಿ ಜಯಂತಿಮಹಾತ್ಮಾಗಾಂಧಿಸ್ವಾತಂತ್ರ್ಯ
Previous Post

ಗಾಂಧಿ ಅವರ ಆಶಯದಂತೆ ಕಟ್ಟ ಕಡೆಯ ವ್ಯಕ್ತಿಗೂ ಬದುಕುವ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ!

Next Post

ಗಾಂಧಿಯನ್ನು ಹತ್ಯೆಗೈದ ನಾಥೂರಾಂ ಗೋಡ್ಸೆಯನ್ನು ಪೂಜಿಸುವವರು ಈ ದೇಶದಲ್ಲಿರುವುದು ವಿಷಾದನೀಯ!

Next Post

ಗಾಂಧಿಯನ್ನು ಹತ್ಯೆಗೈದ ನಾಥೂರಾಂ ಗೋಡ್ಸೆಯನ್ನು ಪೂಜಿಸುವವರು ಈ ದೇಶದಲ್ಲಿರುವುದು ವಿಷಾದನೀಯ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS