• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು: ಸಿದ್ದರಾಮಯ್ಯ

by Dynamic Leader
01/11/2023
in ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ, ನಾಡಬಂಧುಗಳಿಗೆ ರಾಜ್ಯೋತ್ಸವದ ಶುಭ ಕೋರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

“ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು” ಎಂದರು.

“ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು. ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ” ಎಂದು ಹೇಳಿದರು.

“ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ; ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ. ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು, ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ. ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು” ಎಂದು ಹೇಳಿದರು.  

Tags: D.K.ShivakumarGovt SchoolKannada MediumKannada RajyotsavaKanteerava StadiumKarnataka RajyotsavaRajyotsavaSiddaramaiahಕಂಠೀರವ ಸ್ಟೇಡಿಯಂಕನ್ನಡ ಮಾಧ್ಯಮಕನ್ನಡ ರಾಜ್ಯೋತ್ಸವಕರ್ನಾಟಕ ರಾಜ್ಯೋತ್ಸವಡಿ.ಕೆ.ಶಿವಕುಮಾರ್ರಾಜ್ಯೋತ್ಸವಸರ್ಕಾರಿ ಶಾಲೆಸಿದ್ದರಾಮಯ್ಯ
Previous Post

ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಜಾರಿ ನಿರ್ದೇಶನಾಲಯ: ಜೆಟ್ ಏರ್ವೇಸ್ ನ ರೂ.538 ಕೋಟಿ ಮೌಲ್ಯದ ಆಸ್ತಿ ಸ್ಥಗಿತ-ಬಂಧನ!

Next Post

ಜಾರಿ ನಿರ್ದೇಶನಾಲಯ: ಜೆಟ್ ಏರ್ವೇಸ್ ನ ರೂ.538 ಕೋಟಿ ಮೌಲ್ಯದ ಆಸ್ತಿ ಸ್ಥಗಿತ-ಬಂಧನ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS