• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ವಿರೋಧ ಪಕ್ಷಗಳ ಉಚಿತಗಳನ್ನು ಟೀಕಿಸುವ ಮೋದಿ, ಸ್ವಂತ ಪಕ್ಷದ ಬಿಟ್ಟಿ ಘೋಷಣೆಗಳ ಬಗ್ಗೆ ಮಾತನಾಡುವುದೇ ಇಲ್ಲ?

by Dynamic Leader
06/11/2023
in ದೇಶ, ರಾಜಕೀಯ
0
0
SHARES
0
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್, ಸಂಪಾದಕರು

ಪ್ರಧಾನಿ ನರೇಂದ್ರ ಮೋದಿಯವರು ಬಿಟ್ಟಿಗಳ ವಿರುದ್ಧ ಮಾತನಾಡುತ್ತಿದ್ದರೂ ಬಿಜೆಪಿ ಚುನಾವಣೆಯ ಸಮಯದಲ್ಲಿ ಬಿಟ್ಟಿಗಳೆಂಬ ಅಸ್ತ್ರವನ್ನು ತಪ್ಪದೇ ಹೊರತಂದು ಮತದಾರರ ಮುಂದೆ ಜಳಪಿಸುತ್ತದೆ!

“ವಿರೋಧ ಪಕ್ಷಗಳು ಮತ ಸೆಳೆಯಲು ಉಚಿತ ಕೊಡುಗೆಗಳನ್ನು ನೀಡುತ್ತವೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉಚಿತಗಳ ವಿರುದ್ಧ ಮಾತನಾಡುತ್ತಾರೆ. ಮತ್ತು “ಉಚಿತಗಳು ನಮ್ಮ ಮಕ್ಕಳ ಹಕ್ಕುಗಳನ್ನು ಕಸಿದುಕೊಂಡು ನಮ್ಮ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ” ಎಂದು ಹೇಳುತ್ತಾರೆ. “ಸ್ವಾರ್ಥ ರಾಜಕಾರಣಕ್ಕಾಗಿ ರಾಜಕೀಯ ಪಕ್ಷಗಳಿಂದ ಘೋಷಿಸಲ್ಪಡುವ ಉಚಿತ ಘೋಷಣೆಗಳು ದೇಶವು ಸ್ವಾವಲಂಬಿಯಾಗುವುದನ್ನು ತಡೆಯುತ್ತದೆ. ಮತ್ತು ಪ್ರಾಮಾಣಿಕ ತೆರಿಗೆದಾರರ ಮೇಲಿನ ಹೊರೆ ಹೆಚ್ಚಿಸುವುದರ ಜೊತೆಗೆ, ಹೊಸ ತಂತ್ರಜ್ಞಾನಗಳಲ್ಲಿನ ಹೂಡಿಕೆಗಳನ್ನು ಸಹ ನಿರ್ಬಂಧಿಸುತ್ತದೆ” ಎಂದು ಪ್ರಧಾನಿ ಮೋದಿ ಎಲ್ಲಡೆಯೂ ಹೇಳುತ್ತಾರೆ.

”ಉಚಿತಗಳನ್ನು ನೀಡುವುದರಿಂದ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಉಚಿತಗಳು ಮುಂದುವರಿದರೆ ಶ್ರೀಲಂಕಾ, ಪಾಕಿಸ್ತಾನದಂತಹ ದೇಶಗಳ ಸ್ಥಿತಿ ಭಾರತಕ್ಕೂ ಬರುತ್ತದೆ” ಎಂಬುದು ಪ್ರಧಾನಿ ಮೋದಿಯವರ ಅಭಿಪ್ರಾಯ. ಮೋದಿ ಅವರು ಉಚಿತಗಳ ವಿರುದ್ಧ ಮಾತನಾಡಲು ಪ್ರಾರಂಭಿಸಿದ ನಂತರ, ಚುನಾವಣಾ ಪ್ರಣಾಳಿಕೆಗಳಲ್ಲಿ ‘ಅಲ್ಪಾವಧಿಯ ಉಚಿತ’ಗಳಿಗೆ ಸಂಬಂಧಿಸಿದ ಘೋಷಣೆಗಳನ್ನು ತಪ್ಪಿಸುವಂತೆ ಬಿಜೆಪಿ ತನ್ನ ರಾಜ್ಯ ಘಟಕಗಳಿಗೆ ಸೂಚನೆ ನೀಡಿದೆ ಎಂದು ವರದಿಗಳಾಗಿವೆ.

ಇದನ್ನೂ ಓದಿ: ಕಾಶ್ಮೀರಿ ಭಯೋತ್ಪಾದಕರ ಕಾಲಿಗೆ ಜಿಪಿಎಸ್ ಸಾಧನ ಅಳವಡಿಕೆ: ಓಡಲು ಸಾಧ್ಯವಿಲ್ಲ; ಅಡಗಿಕೊಳ್ಳಲೂ ಸಾಧ್ಯವಿಲ್ಲ.!

ಉಚಿತಗಳ ವಿರುದ್ಧ ಪ್ರಧಾನಿ ಮೋದಿಯವರ ಹೇಳಿಕೆಗಳಿಗೆ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ. “ನಾವು ಉಚಿತಗಳನ್ನು ನೀಡುವುದಿಲ್ಲ ಶಿಕ್ಷಣ, ವೈದ್ಯಕೀಯ ಮುಂತಾದ ಜನರ ಮೂಲಭೂತ ಅಗತ್ಯಗಳನ್ನು ಪೂರೈಸುತ್ತೇವೆ; ಅದು ಉಚಿತಗಳಲ್ಲ” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಪ್ರಧಾನಿಯವರು ಉಚಿತಗಳ ವಿರುದ್ಧ ಮಾತನಾಡುತ್ತಿರುವಾಗಲೇ ಬಿಜೆಪಿಯ ಭದ್ರಕೋಟೆಯಾಗಿರುವ ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಬಿಟ್ಟಿ ಭರವಸೆಗಳನ್ನು ನೀಡಿತ್ತು. ಅದೇನೆಂದರೆ, ಹಿರಿಯ ನಾಗರಿಕರಿಗೆ ಉಚಿತ ಬಸ್ ಪ್ರಯಾಣ, ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಕಾಲೇಜು ಹೆಣ್ಣುಮಕ್ಕಳಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಆರ್ಥಿಕವಾಗಿ ಹಿಂದುಳಿದ ಗರ್ಭಿಣಿಯರಿಗೆ ಉಚಿತ ಮಾಸಿಕ ಪೌಷ್ಟಿಕಾಂಶ ಯೋಜನೆ, ಪ್ರತಿ ವರ್ಷ ಎರಡು ಅಡುಗೆ ಅನಿಲ ಸಿಲಿಂಡರ್ ಇತ್ಯಾದಿಗಳು. ‘ಇದರೊಂದಿಗೆ ಬಿಜೆಪಿ ಉಚಿತಗಳ ವಿರುದ್ಧ ತನ್ನ ನಿಲುವನ್ನು ಬದಲಿಸಿಕೊಂಡಿದೆ’ ಎಂದು ವಿರೋಧ ಪಕ್ಷಗಳು ಟೀಕಿಸಿತು.

ಮುಂದೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಕಷ್ಟು ಉಚಿತ ಭರವಸೆಗಳನ್ನು ನೀಡಿತ್ತು. ಕರ್ನಾಟಕದಲ್ಲಿ ಬಡವರಿಗೆ ದಿನಕ್ಕೆ ಅರ್ಧ ಲೀಟರ್ ಹಾಲು, ವರ್ಷಕ್ಕೆ ಮೂರು ಅಡುಗೆ ಅನಿಲ ಸಿಲಿಂಡರ್‌ಗಳು, ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಯಂದು ಬಡವರಿಗೆ ಉಚಿತ ಸಿಲಿಂಡರ್ ನೀಡಲಾಗುವುದು ಮುಂತಾದ ಹತ್ತುಹಲವು ಭರವಸೆಗಳನ್ನು ಬಿಜೆಪಿ ನೀಡಿತ್ತು.

ಇದೀಗ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ರಂಗೇರುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಛತ್ತೀಸ್ ಗಢದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ವಿವಾಹಿತ ಮಹಿಳೆಯರಿಗೆ ವಾರ್ಷಿಕ 12 ಸಾವಿರ ರೂಪಾಯಿಗಳು ನೀಡುವುದಾಗಿ ಭರವಸೆ ನೀಡಿದ್ದಾರೆ. ಅಂದರೆ, ತಮಿಳುನಾಡಿನ ಡಿಎಂಕೆ ಸರ್ಕಾರ ಮಹಿಳೆಯರಿಗೆ 1000 ರೂಪಾಯಿ ಮಹಿಳಾ ಸ್ಟೈಫಂಡ್ ನೀಡುತ್ತಿರುವಂತೆಯೇ ಛತ್ತೀಸ್‌ಗಢದಲ್ಲಿ ಬಿಜೆಪಿ ಯೋಜನೆಯನ್ನು ಘೋಷಿಸಿದೆ. ಇದರಿಂದಾಗಿ ಡಿಎಂಕೆ ಆಡಳಿತದ ಯೋಜನೆಯನ್ನು ಬಿಜೆಪಿ ನಕಲು ಮಾಡುತ್ತಿದೆ ಎಂಬ ಟೀಕೆಯೂ ವ್ಯಕ್ತವಾಗಿದೆ.

ಇದನ್ನೂ ಓದಿ: ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಅರಿತುಕೊಳ್ಳಬೇಕು: ಸುಪ್ರೀಂ ಕೋರ್ಟ್!

ಬಿಟ್ಟಿಗಳನ್ನು ವಿರೋಧಿಸುವ ಬಿಜೆಪಿಯವರು ಉಚಿತ ಭರವಸೆಗಳನ್ನು ನೀಡುತ್ತಿರುವುದು ಏಕೆ? ಎಂಬ ಪ್ರಶ್ನೆಯನ್ನೂ ರಾಜಕೀಯ ವಿಮರ್ಶಕರು ಎತ್ತುತ್ತಿದ್ದಾರೆ. ಉಚಿತಗಳು ಎಂದು ಪ್ರಧಾನಿ ಮೋದಿಯಂತಹವರು ಮಾತನಾಡುವುದು ರಾಜ್ಯ ಸರ್ಕಾರಗಳು ಜಾರಿಗೊಳಿಸುವ ಬಡವರ ಕಲ್ಯಾಣ ಯೋಜನೆಗಳನ್ನೇ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಅದನ್ನೇ ಬಿಜೆಪಿ ಮತ್ತು ಸಂಘಪರಿವಾರದವರು ವಿರೋಧಿಸುವುದು.  

ಅದೇ ಸಮಯದಲ್ಲಿ, ದೊಡ್ಡ ಕಾರ್ಪೊರೇಟ್‌ಗಳಿಗೆ ನೀಡುತ್ತಿರುವ ಆ ಉಚಿತಗಳನ್ನು ಬಿಜೆಪಿ ವಿರೋಧಿಸುವುದಿಲ್ಲ! ಕಳೆದ ಒಂಬತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ ಸಾಲ ಮನ್ನಾ ಮತ್ತು ತೆರಿಗೆ ವಿನಾಯಿತಿ ಎಂದು 25 ಲಕ್ಷ ಕೋಟಿ ರೂಪಾಯಿಗಳನ್ನು ಬಿಜೆಪಿ ಸರ್ಕಾರ ದೊಡ್ಡ ಕಾರ್ಪೊರೇಟ್ ಕಂಪನಿಗಳಿಗೆ ನೀಡಿದೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ. ಆದರೆ, ಸಣ್ಣಪುಟ್ಟ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಬಡವರಿಗೆ ನೀಡುವ ಮೂಲಭೂತ ಸೌಲಭ್ಯಗಳನ್ನು ಮಾತ್ರ ‘ಉಚಿತ’ ಎಂದು ಬಿಜೆಪಿ ವಿರೋಧಿಸುತ್ತದೆ.

ಇದನ್ನೂ ಓದಿ: ಜೆಡಿಎಸ್ ‘ರೈತ ಸಾಂತ್ವನ ಯಾತ್ರೆ’ಯನ್ನು ವ್ಯಂಗ್ಯವಾಗಿ ಸ್ವಾಗತ ಮಾಡಿದ ಸಿದ್ದರಾಮಯ್ಯಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ!

ಪ್ರಧಾನಿ ನರೇಂದ್ರ ಮೋದಿಯವರು ಬಿಟ್ಟಿಗಳ ವಿರುದ್ಧ ಮಾತನಾಡುತ್ತಿದ್ದರೂ ಬಿಜೆಪಿ ಚುನಾವಣೆಯ ಸಮಯದಲ್ಲಿ ಬಿಟ್ಟಿಗಳೆಂಬ ಅಸ್ತ್ರವನ್ನು ತಪ್ಪದೇ ಹೊರತಂದು ಮತದಾರರ ಮುಂದೆ ಜಳಪಿಸುತ್ತದೆ! ವಿರೋಧ ಪಕ್ಷಗಳ ಬಿಟ್ಟಿಗಳನ್ನು ಟೀಕಿಸುವ ಮೋದಿ ಅವರು, ಸ್ವಂತ ಪಕ್ಷದ ಬಿಟ್ಟಿ ಘೋಷಣೆಗಳ ಬಗ್ಗೆ ಮಾತನಾಡದೇ ಹಾದುಹೋಗುತ್ತಾರೆ!?

ಇದನ್ನೂ ಓದಿ: ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!

Tags: Bitti BhagyaBJP free promiseCorporateElection ManifestoFree AnnouncementsLoan Waiverಉಚಿತ ಘೋಷಣೆಗಳುಕಾರ್ಪೊರೇಟ್ಚುನಾವಣೆ ಪ್ರಣಾಳಿಕೆಬಿಜೆಪಿ ಉಚಿತ ಭರವಸೆಬಿಟ್ಟಿ ಭಾಗ್ಯಸಾಲ ಮನ್ನಾ
Previous Post

ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಅರಿತುಕೊಳ್ಳಬೇಕು: ಸುಪ್ರೀಂ ಕೋರ್ಟ್!

Next Post

ಬಿಹಾರದಲ್ಲಿ ಒಟ್ಟು ಮೀಸಲಾತಿಯನ್ನು ಶೇ.65ಕ್ಕೆ ಏರಿಸಲು ನಿತೀಶ್ ಕುಮಾರ್ ಶಿಫಾರಸು!

Next Post

ಬಿಹಾರದಲ್ಲಿ ಒಟ್ಟು ಮೀಸಲಾತಿಯನ್ನು ಶೇ.65ಕ್ಕೆ ಏರಿಸಲು ನಿತೀಶ್ ಕುಮಾರ್ ಶಿಫಾರಸು!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS