• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಂಪಾದಕೀಯ

ಮೋದಿಯ ಕ್ರಿಸ್‌ಮಸ್ ಶುಭಾಶಯ: ಚುನಾವಣೆ ಕಾಲದ ತಾತ್ಕಾಲಿಕ ಜ್ಞಾನೋದಯ; ಸುಳ್ಳು ಉಪದೇಶ! ಸಂಪಾದಕೀಯ

by Dynamic Leader
27/12/2023
in ಸಂಪಾದಕೀಯ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್, ಸಂಪಾದಕರು
dynamicleaderdesk@gmail.com

ಕ್ರಿಸ್‌ಮಸ್ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಸಮಾಜಕ್ಕೆ ಮಾರ್ಗದರ್ಶನ ನೀಡುವ ಮತ್ತು ಸೇವೆ ಮಾಡುವಲ್ಲಿ ಕ್ರಿಶ್ಚಿಯನ್ ಸಮುದಾಯದ ಕೊಡುಗೆಯನ್ನು ಭಾರತವು ಹೆಮ್ಮೆಯಿಂದ ಗುರುತಿಸುತ್ತದೆ ಎಂದು ಹೇಳಿದರು. ಇದು ಚುನಾವಣಾ ಕಾಲದಲ್ಲಿ ಅವರಿಗಾದ ತಾತ್ಕಾಲಿಕ ‘ಜ್ಞಾನೋದಯ’ ಅಷ್ಟೇ.

ಕಳೆದ ಹತ್ತು ವರ್ಷಗಳ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಅಲ್ಪಸಂಖ್ಯಾತರಾದ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ಆಗಿರುವ ತಾರತಮ್ಯ ಮತ್ತು ಅನ್ಯಾಯ ಸಣ್ಣದೇನಲ್ಲ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕ್ರೈಸ್ತರು ಹೆಮ್ಮೆಯ ಕೊಡುಗೆ ನೀಡಿದ್ದಾರೆ ಎಂದು ಪ್ರಧಾನಿ ಈಗ ಬೊಬ್ಬಿಡುತ್ತಿದ್ದಾರೆ. ಆದರೆ, ಅವರು ಈ ಸೇವೆಯನ್ನು ಮತಾಂತರಗೊಳಿಸಲಿಕ್ಕಾಗಿಯೇ ಮಾಡುತ್ತಿದ್ದಾರೆ ಎಂದು ಆರೆಸ್ಸೆಸ್-ಬಿಜೆಪಿ ಪರಿವಾರದವರು ಇನ್ನೂ ದೂಷಣೆ ಮಾಡುತ್ತಿದ್ದಾರೆ.

ಗ್ರಹಾಂ ಸ್ಟೇನ್ಸ್ ಮತ್ತು ಕುಟುಂಬ

ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಪಾದ್ರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಪುತ್ರರನ್ನು ಹಿಂದುತ್ವ ಪರಿವಾರದವರು ಸಜೀವ ದಹನ ಮಾಡಿದರು. ಆ ಹಂತಕರನ್ನು ಆರ್‌ಎಸ್‌ಎಸ್ ಪರಿವಾರ ರಕ್ಷಣೆ ಮಾಡಿತು. ಬುಡಕಟ್ಟು ಜನರ ಸೇವೆ ಮಾಡಿದ ಪಾದ್ರಿ ಸ್ಟಾನ್ ಸ್ವಾಮಿಯನ್ನು ಸುಳ್ಳು ಪ್ರಕರಣದಲ್ಲಿ ಜೈಲಿಗೆ ತಳ್ಳಿತು. ಅವರು ಜಾಮೀನು ಸಿಗದೆ ಜೈಲಿನಲ್ಲೇ ತಮ್ಮ ಕೊನೆಯುಸಿರೆಳೆದರು. ಇದು ಕ್ರೈಸ್ತ ಸಮುದಾಯದ ಕೊಡುಗೆಯನ್ನು ಅನುಮೋದಿಸುವ ಸಂಕೇತವಾ?

ಕರ್ನಾಟಕದಲ್ಲಿ ಮತಾಂತರ ನಿಷೇದ ಕಾಯ್ದೆಯನ್ನು ಜಾರಿಗೆ ತಂದು ಕ್ರೈಸ್ತರಿಗೆ ಅನಾವಶ್ಯಕವಾಗಿ ಕಿರುಕುಳ ನೀಡಲಾಯಿತು. “ಮತಾಂತರ ಮಾಡುತ್ತಿದ್ದಾರೆ; ಬೈಬಲ್ ಹಂಚುತ್ತಿದ್ದಾರೆ” ಎಂದು ಸುಳ್ಳು ಹೇಳಿಕೊಂಡು ಹಲವು ಚರ್ಚ್ ಗಳ ಮೇಲೆ ಹಿಂದೂ ಪರಿವಾರದವರಿಂದ ದಾಳಿ ಮಾಡಲಾಯಿತು. ಪೊಲೀಸರ ಸಹಭಾಗಿತ್ವದಲ್ಲೇ ಹಲವು ಚರ್ಚ್ ಗಳಿಗೆ ನುಗ್ಗಿ ದಾಂಧಲೆ ಮಾಡಿದ ವರದಿಗಳೂ ಇವೆ.

ಈಶಾನ್ಯ ರಾಜ್ಯಗಳಲ್ಲಿ ಕ್ರಿಶ್ಚಿಯನ್ನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಈಶಾನ್ಯ ಹಲವು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಯುತ್ತಿದೆ. ಕ್ರಿಶ್ಚಿಯನ್ನರಲ್ಲಿ ಬಿಜೆಪಿ ಸ್ವೀಕಾರ ಹೆಚ್ಚಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳುತ್ತಿದ್ದಾರೆ.

ಫಾದರ್ ಸ್ಟಾನ್ ಸ್ವಾಮಿ

ಚುನಾವಣೆಗೂ ಮುನ್ನ ಮಣಿಪುರದಲ್ಲಿ ಬಿಜೆಪಿ ಒಕ್ಕೂಟ ಆಡಳಿತ ನಡೆಸಿತ್ತು. ಮುಖ್ಯಮಂತ್ರಿಯ ಬೆಂಬಲದೊಂದಿಗೆ ಕ್ರೈಸ್ತ ಜನಾಂಗದ ಕುಕಿಗಳ ವಿರುದ್ಧ ಮತಾಂಧ ಮತ್ತು ಜನಾಂಗೀಯ ದಾಳಿಯನ್ನು ಪ್ರಾರಂಭಿಸಲಾಯಿತು. ಇಬ್ಬರು ಸಹೋದರಿಯರನ್ನು ವಿವಸ್ತ್ರಗೊಳಿಸಿ, ಬೀದಿಯಲ್ಲಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಯಿತು. ಈಗಲೂ ಆ ರಾಜ್ಯದಲ್ಲಿ ಕ್ರಿಶ್ಚಿಯನ್ ಜನರ ಮೇಲೆ ದಾಳಿ ಮುಂದುವರಿದಿದೆ. ಆ ರಾಜ್ಯದ ಕಡೆ ತಿರುಗಿಯೂ ನೋಡದ ಪ್ರಧಾನಿ ಈ ರೀತಿ ಮಾತನಾಡುತ್ತಿರುವುದು ಆಘಾತಕಾರಿಯಾಗಿದೆ. ಆದರೆ ಈ ರೀತಿ ಮಾತನಾಡುವುದು ಅವರಿಗೆ ಹೊಸದೇನಲ್ಲ.

ಮಾತು ಒಂದು, ಕ್ರಿಯೆ ಇನ್ನೊಂದು ಆರೆಸ್ಸೆಸ್ ಸಂಘಟನೆಯ ಲಕ್ಷಣ. ಆ ಶಾಲೆಯಲ್ಲಿ ಓದಿದ ನರೇಂದ್ರ ಮೋದಿ ಹೀಗೆ ಮಾತನಾಡುವುದರಲ್ಲಿ ಆಶ್ಚರ್ಯವೇನಿಲ್ಲ. ಅವರ ಕ್ರಿಸ್‌ಮಸ್ ದಿನದ ಭಾಷಣ ಎಷ್ಟು ಸುಳ್ಳಾಗಿತ್ತು ಎಂಬುದು ಕ್ರೈಸ್ತರಿಗೆ ಚೆನ್ನಾಗಿ ಗೊತ್ತಿರುತ್ತದೆ. ಅವರ ಮಾತಿನಿಂದಲ್ಲ, ಅವರು ಅನುಭವಿಸುವ ಯಾತನೆಗಳ ಆಧಾರದ ಮೇಲೆ ಅವರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.

Tags: BJpChristianChristmasGraham StainesNarendra ModiRSSStan Swamyಆರ್‌.ಎಸ್‌.ಎಸ್‌ಕ್ರಿಶ್ಚಿಯನ್ಕ್ರಿಸ್‌ಮಸ್ಗ್ರಹಾಂ ಸ್ಟೇನ್ಸ್ನರೇಂದ್ರ ಮೋದಿಬಿಜೆಪಿಸ್ಟಾನ್ ಸ್ವಾಮಿ
Previous Post

ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಆರ್‌ಎಸ್‌ಎಸ್‌ ಆಹ್ವಾನ: ಕುಟುಂಬ ಸಮೇತವಾಗಿ ಸಂತೋಷದಿಂದ ಭಾಗಿಯಾಗುತ್ತೇನೆ! ಹೆಚ್​​ಡಿಕೆ  

Next Post

‘ಭಾರತ್’ ಬ್ರಾಂಡ್‌ನ ಒಂದು ಕಿಲೋ ಅಕ್ಕಿ ಇಪ್ಪತ್ತೈದು ರೂಪಾಯಿ! ಕೇಂದ್ರ ಸರ್ಕಾರ

Next Post

'ಭಾರತ್' ಬ್ರಾಂಡ್‌ನ ಒಂದು ಕಿಲೋ ಅಕ್ಕಿ ಇಪ್ಪತ್ತೈದು ರೂಪಾಯಿ! ಕೇಂದ್ರ ಸರ್ಕಾರ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS