• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ವೆಲ್‌ಫೇರ್ ಪಾರ್ಟಿ: ಸ್ತ್ರೀ ವಿರೋಧಿ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಚೋದಕ ಹೇಳಿಕೆ ಖಂಡನೀಯ: ಸಬೀಹಾ ಪಟೇಲ್

by Dynamic Leader
27/12/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಶ್ರೀರಂಗಪಟ್ಟಣದ ಹನುಮಯಾತ್ರೆಯ ಸಂದರ್ಭದಲ್ಲಿ ಮಂಡ್ಯದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ಮುಸ್ಲಿಂ ಮಹಿಳೆಯರ ಬಗ್ಗೆ ಅಸಾಂವಿಧಾನಿಕ ಮತ್ತು ಅಸಹ್ಯವಾದ ಅಶ್ಲೀಲ ಮಾತುಗಳನ್ನಾಡಿರುವುದನ್ನು ವೆಲ್‌ಫೇರ್ ಪಾರ್ಟಿ ಮಹಿಳಾ ವಿಭಾಗದ ರಾಜ್ಯ ಘಟಕದ ಅಧ್ಯಕ್ಷೆ ಸಬೀಹಾ ಪಟೇಲ್ ತೀವ್ರವಾಗಿ ಖಂಡಿಸಿದ್ದಾರೆ.

“ಪದೇ ಪದೇ ಒಂದು ಸಮುದಾಯದ ವಿರುದ್ದ ಪ್ರಚೋದನಾಕಾರಿ ಹೇಳಿಕೆಗಳನ್ನು ಕೊಡುತ್ತಿರುವ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ರಾಜ್ಯ ಸರಕಾರ ಯಾವುದೇ ಕ್ರಮ ಯಾಕೆ ತೆಗೆದುಕೊಳ್ಳುತ್ತಿಲ್ಲ? ವಿಶೇಷವಾಗಿ ಅಲ್ಪಸಂಖ್ಯಾತ ಹಿಂದುಳಿದ ವರ್ಗಗಳ ಮಹಿಳೆಯರ ಪರವಾಗಿ ಸಹಾನುಭೂತಿ ತೋರಿಸುವ ರಾಜ್ಯ ಸರ್ಕಾರ ಈಗ ಕೇವಲ ಮೂಕ ಪ್ರೇಕ್ಷಕವಾಗಿದೆ. ಇಂತಹ ತುಚ್ಛ ಹೇಳಿಕೆ ಕೊಟ್ಟ ಕಲ್ಲಡ್ಕ ಪ್ರಭಾಕರ್ ಭಟ್ ಕೇವಲ ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಮಾತ್ರ ಹೇಳಿದ ಮಾತುಗಳಲ್ಲ ಬದಲಾಗಿ ಇದು ಇಡೀ ಮಹಿಳಾ ಸಮಾಜಕ್ಕೆ ಅವಮಾನ ಮಾಡಿದ ಹೇಳಿಕೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸ್ತ್ರೀ ವಿರೋಧಿಯಾದ ಇವರು ಈ ಹಿಂದೆ ಎಷ್ಟೋ ಬಾರಿ ಹಿಂದೂ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ. ‘ಮುಸ್ಲಿಂ ಯುವಕರು ಸೆಂಟ್ ಹೊಡೆದು ಬಂದರೆ ಹಿಂದೂ ಯುವತಿಯರು ಅವರ ಹಿಂದೆ ಓಡಿ ಹೋಗುತ್ತಾರೆ’ ಎಂದು ಈ ಹಿಂದೆ ಅಸಭ್ಯ ಹೇಳಿಕೆಯೊಂದನ್ನು ನೀಡಿದ್ದರು. ಇನ್ನೊಂದು ಕಡೆ ಕ್ರಿಶ್ಚಿಯನ್ ಮಹಿಳೆಯರಿಗೆ ಮತ್ತು ಅವರ ಸೇವೆಗಳನ್ನು ಕೂಡಾ ವ್ಯಂಗ್ಯ ಮಾಡಿದ್ದಾರೆ. ಒಂದು ಸಂದರ್ಭದಲ್ಲಿ ಮಸೀದಿ ದರ್ಶನಕ್ಕೆ ಹೋದ ಸಹಧರ್ಮೀಯ ಮಹಿಳೆಯರಿಗೂ ಅಶ್ಲೀಲವಾದ ಮಾತುಗಳನ್ನಾಡಿದ್ದರು. ಇದು ಚುನಾವಣಾ ದಿನಗಳು ಹತ್ತಿರ ಬರುವಾಗ ಕೋಮುವಾದದ ವಿಷ ಬೀಜ ಬಿತ್ತುವ ಹುನ್ನಾರವಾಗಿದೆ.  ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಇಂತಹ ಕೊಳಕು ಮಾತುಗಳು ಅವರ ಸಂಸ್ಕಾರವನ್ನು ಬಿಂಬಿಸುತ್ತಿದೆ” ಎಂದು ಹೇಳಿದ್ದಾರೆ.

ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಯಾರೂ ದಾರಿ ತೋರಿಸುವ ಅವಶ್ಯಕತೆ ಇಲ್ಲ. ಸುಮಾರು 14 ನೂರು ವರ್ಷಗಳ  ಹಿಂದೆಯೇ ಇಸ್ಲಾಂ ಧರ್ಮ ಮಹಿಳೆಯ ಸ್ಥಾನಮಾನ ಹಾಗೂ ಅವಳ ಹಕ್ಕುಗಳನ್ನು ಎತ್ತಿ ಹಿಡಿದಿದೆ. ತ್ರಿವಳಿ ತಲಾಖನ್ನು ಮುಂದಿಟ್ಟುಕೊಂಡು ಯಾವುದೇ ಅಧ್ಯಯನ ಇಲ್ಲದೆ ಇಂತಹ ಹೇಳಿಕೆಗಳನ್ನು ಕೊಡುವುದು ಅಸಾಂವಿಧಾನಿಕ. ಹಲವಾರು ಧಾರ್ಮಿಕ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿರುವ ಇವರು ಎಂತಹಾ ಧರ್ಮರಕ್ಷಕ? ಎಂತಹಾ ಮುಖಂಡ? ಎನ್ನುವುದು ಒಂದು ದೊಡ್ಡ ಪ್ರಶ್ನೆಯಾಗಿದೆ. ಒಂದು ಸಮುದಾಯವನ್ನು ಅಶ್ಲೀಲವಾಗಿ ನಿಂದಿಸಿದರೆ ಅವರ ವಿರುದ್ಧ ಜಾಮೀನು ರಹಿತ ಕೇಸ್ ದಾಖಲಾಗಬೇಕು. ರಾಜ್ಯದಲ್ಲಿ ಹಿಜಾಬ್ ವಿಚಾರವನ್ನೆತ್ತಿಕೊಂಡು ರಾಜಕೀಯ ನಡೆಸುತ್ತಿರುವ ಸಂದರ್ಭದಲ್ಲಿ ಪುನಃ ಹೇಳಲಿಕ್ಕಾಗದ ಅಶ್ಲೀಲವಾದ ಮಾತುಗಳನ್ನಾಡಿ ಮುಸ್ಲಿಂ ಯುವತಿ ಮುಸ್ಕಾನ್ ಅವರಿಗೆ ಬೆದರಿಕೆ ಕೂಡ ಹಾಕಿದ್ದಾರೆ. ಇದೇ ತರಹ ಇನ್ನೂ ಹಲವಾರು ಪ್ರಕರಣಗಳನ್ನು ಇವರ ವಿರುದ್ಧ ದಾಖಲಿಸಬೇಕಾಗಿದೆ” ಎಂದು ಆಗ್ರಹಿಸಿದ್ದಾರೆ.

“ಇಂತಹ ಪ್ರಚೋದನಾಕಾರಿ ಹೇಳಿಕೆಗಳು ನಿಲ್ಲದಿದ್ದರೆ, ಸರ್ಕಾರ ಇಂತಹ ಅಸಂಸ್ಕೃತಿಯ ಮುಖಂಡರುಗಳ ವಿರುದ್ಧ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳದೇ ಇದ್ದರೆ ವೆಲ್‌ಫೇರ್ ಪಾರ್ಟಿಯ ರಾಜ್ಯ ಮಹಿಳಾ ಘಟಕದ ವತಿಯಿಂದ ನೆಲದ ಕಾನೂನಿನ ಅಡಿಯಲ್ಲಿ ಉಗ್ರ ಹೋರಾಟವನ್ನು ಮಾಡುತ್ತೇವೆ. ಕಲ್ಲಡ್ಕ ಪ್ರಭಾಕರ್ ಭಟ್ ತಮ್ಮ ಈ ಅಶ್ಲೀಲವಾದ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆದು ಸಾರ್ವಜನಿಕವಾಗಿ ಮಹಿಳೆಯರಲ್ಲಿ ಕ್ಷಮೆ ಯಾಚಿಸಬೇಕು” ಎಂದು ವೆಲ್‌ಫೇರ್ ಪಾರ್ಟಿಯ ರಾಜ್ಯ ಮಹಿಳಾ ವಿಭಾಗ ಸಬೀಹಾ ಪಟೇಲ್ ಆಗ್ರಹಿಸಿದ್ದಾರೆ.

Tags: Exciting StatementKalladka Prabhakar BhatMinoritiesMuslim WomanProfanityWelfare Partyಅಲ್ಪಸಂಖ್ಯಾತರುಅಶ್ಲೀಲ ಮಾತುಕಲ್ಲಡ್ಕ ಪ್ರಭಾಕರ್ ಭಟ್ಪ್ರಚೋದಕ ಹೇಳಿಕೆಮುಸ್ಲಿಂ ಮಹಿಳೆಮೈನಾರಿಟಿವೆಲ್‌ಫೇರ್ ಪಾರ್ಟಿ
Previous Post

ನಾಳೆ ಕಾಂಗ್ರೆಸ್ ಸಂಸ್ಥಾಪನಾ ದಿನ: ಮಣಿಪುರದಿಂದ ಮುಂಬೈಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯಿಂದ ಎರಡನೇ ಹಂತದ ಯಾತ್ರೆ!

Next Post

ಸಂವಿಧಾನ ಉಳಿದು, ಪ್ರಜಾಪ್ರಭುತ್ವ ಗಟ್ಟಿಯಾದರೆ ದುಡಿಯುವವರಿಗೆ ಬದುಕಿನ ಅವಕಾಶಗಳು ದಕ್ಕುತ್ತವೆ: ಸಿದ್ದರಾಮಯ್ಯ

Next Post

ಸಂವಿಧಾನ ಉಳಿದು, ಪ್ರಜಾಪ್ರಭುತ್ವ ಗಟ್ಟಿಯಾದರೆ ದುಡಿಯುವವರಿಗೆ ಬದುಕಿನ ಅವಕಾಶಗಳು ದಕ್ಕುತ್ತವೆ: ಸಿದ್ದರಾಮಯ್ಯ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS