• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಶಭ್ಬಾಷ್: ಶಿಷ್ಯನ ಮೊದಲ ಹೆಜ್ಜೆಗೆ ಕ್ಲಾಪ್ ಮಾಡಿ ಚಾಲನೆ ನೀಡಿದ ಓಂ ಸಾಯಿಪ್ರಕಾಶ್!

by Dynamic Leader
16/01/2024
in ಸಿನಿಮಾ
0
0
SHARES
0
VIEWS
Share on FacebookShare on Twitter

• ಅರುಣ್ ಜಿ

ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ರುದ್ರಶಿವ ನಿರ್ದೇಶನದ ‘ಶಭ್ಬಾಷ್’ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ.

ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ಈ ಮುಹೂರ್ತ ಸಮಾರಂಭ ಅರ್ಥವತ್ತಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ‘ಶಭ್ಬಾಷ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡಾ ಅನಾವರಣಗೊಂಡಿದೆ. ಹೀಗೆ ಮುಹೂರ್ತ ಸಮಾರಂಭ ಸಾಂಘವಾಗಿ ನೆರವೇರಿದ ನಂತರ ಚಿತ್ರತಂಡ ಸುದ್ದಿಗೋಷ್ಟಿಯ ಮೂಲಕ ಮಾಧ್ಯಮದವರನ್ನು ಮುಖಾಮುಖಿಯಾಗಿದೆ.

ಈ ಸಂದರ್ಭದಲ್ಲಿ ‘ಶಭ್ಬಾಷ್’ ಕುರಿತಾದ ಒಂದಷ್ಟು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಪ್ರಧಾನವಾಗಿ ಈ ಹಂತದಲ್ಲಿ ನಿರ್ದೇಶಕ ರುದ್ರಶಿವ ಶೀರ್ಷಿಕೆಯ ಒಳಾರ್ಥವನ್ನು ಸಮರ್ಥವಾಗಿ ತೆರೆದಿಡುವ ಪ್ರಯತ್ನ ಮಾಡಿದ್ದಾರೆ. ಸಾಮಾನ್ಯವಾಗಿ ಮಹತ್ತರವಾದುದನ್ನು ಸಾಧಿಸಿದಾಗ, ಮೆಚ್ಚುವಂತೆ ನಡೆದುಕೊಂಡಾಗ ಶಭ್ಬಾಷ್ ಗಿರಿಯ ಮೂಲಕ ಮೆಚ್ಚಿಕೊಳ್ಳಲಾಗುತ್ತೆ. ಹಾಗಾದರೆ, ಈ ಸಿನಿಮಾ ನಾಯಕ ಶಭ್ಬಾಷ್ ಅನ್ನಿಸಿಕೊಳ್ಳುವಂಥಾ ಯಾವ ಕೆಲಸ ಮಾಡುತ್ತಾನೆ? ಯಾವ ಥರದ ಕಥೆ ಇದರ ಸುತ್ತ ಚಲಿಸುತ್ತದೆಂಬುದು ಈ ಸಿನಿಮಾ ಜೀವಾಳ. ಅಂದಹಾಗೆ, ‘ಹೊಡಿರೋ ಸೆಲ್ಯೂಟ್’ ಎಂಬ ಅಡಿ ಬರಹ ಹೊಂದಿರುವ ಶಭ್ಬಾಷ್, ಆಕ್ಷನ್ ಡ್ರಾಮಾ ಜಾನರಿನ ಸಿನಿಮಾ.

‘ಶಭ್ಬಾಷ್’ ಮೂಲಕ ರುದ್ರಶಿವ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಏಸ್ 22 (ACE 22) ಬ್ಯಾನರಿನಡಿಯಲ್ಲಿ ಪವೀಂದ್ರ ಮುತ್ತಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ದಶಕಗಳಿಗೂ ಹೆಚ್ಚು ಕಾಲ ದಿಗ್ಗಜ ನಿರ್ದೇಶಕರ ಗರಡಿಯಲ್ಲಿ ಪಳಗಿಕೊಂಡಿರುವ ರುದ್ರಶಿವ, ಒಂದೊಳ್ಳೆ ಕಥೆಯೊಂದಿಗೆ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರಂತೆ. ಶಿವಮಣಿ, ಅಯ್ಯಪ್ಪ ಶರ್ಮಾ, ಪಲ್ಲಕ್ಕಿ ರಾಧಾಕೃಷ್ಣರಂಥಾ ನಿರ್ದೇಶಕರೊಂದಿಗೆ ಕಾರ್ಯ ನಿರ್ವಹಿಸಿದ್ದ ರುದ್ರಶಿವ, ಓಂ ಸಾಯಿಪ್ರಕಾಶ್ ನಿರ್ದೇಶನದ ಗಂಗ ಎಂಬ ಚಿತ್ರದಲ್ಲಿಯೂ ಕೆಲಸ ಮಾಡಿದ್ದರು. ಈ ಮೂಲಕ ಸಾಯಿಪ್ರಕಾಶ್ ಅವರನ್ನು ಗುರುವೆಂದೇ ಪರಿಭಾವಿಸಿಕೊಂಡಿದ್ದರು. ಇದೀಗ ಓಂ ಸಾಯಿಪ್ರಕಾಶ್ ತಮ್ಮ ಶಿಷ್ಯನ ಮೊದಲ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿ ಶುಭ ಹಾರೈಸಿದ್ದಾರೆ.

ಈ ಚಿತ್ರದಲ್ಲಿ ಶರತ್ ನಾಯಕನಾಗಿ ನಟಿಸಿದ್ದಾರೆ. ನಿಸರ್ಗ ನಾಯಕಿಯಾಗಿ ಜೊತೆಯಾಗಿದ್ದಾರೆ. ಈಗಾಗಲೇ ‘ಕ’ ಮತ್ತು ‘ಮಳೆಬಿಲ್ಲು’ ಎಂಬೆರಡು ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿದ್ದ ಶರತ್, ಸುದೀರ್ಘ ಕಾಲಾವಧಿಯ ನಂತರ ‘ಶಭ್ಬಾಷ್’ ಮೂಲಕ ನಾಯಕನಾಗಿ ಮರಳುತ್ತಿದ್ದಾರೆ. ಎಲ್ಲ ತಯಾರಿಗಳನ್ನೂ ಮುಗಿಸಿಕೊಂಡಿರುವ ಚಿತ್ರತಂಡ ಇಂದಿನಿಂದಲೇ ಚಿತ್ರೀಕರಣಕ್ಕೂ ಚಾಲನೆ ನೀಡಿದೆ. ಮೊದಲ ಹಂತದಲ್ಲಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಹದಿನೈದು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಆ ನಂತರ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ವಿಶೇಷವೆಂದರೆ, ಚಿತ್ರೀಕರಣ ಶುರುವಾಗುವ ಮುನ್ನವೇ ‘ಶಭ್ಬಾಷ್’ ನ ಆರು ಹಾಡುಗಳನ್ನು ರೂಪಿಸಲಾಗಿದೆ. ಈ ಆರೂ ಹಾಡುಗಳಿಗೆ ಮ್ಯಾಡಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಆಂಜನೇಯನ ಕುರಿತಾದ ಹಾಡಿಗೆ ಶಂಕರ್ ಮಹಾದೇವನ್  ಧ್ವನಿಯಾಗಿದ್ದಾರೆ.  ರವೀಂದ್ರ ಸೊರಗಾವಿ ಹಾಗೂ ಶಮಿತಾ ಮಲ್ನಾಡ್ ಕಂಠಸಿರಿಯಲ್ಲಿ ಒಂದು ಗೀತೆ, ಇಂದೂ ನಾಗರಾಜ್ ಹಾಗೂ ವ್ಯಾಸರಾಜ್ ಕಾಂಬಿನೇಷನ್ ನಲ್ಲಿ ಒಂದು ಹಾಡು, ವಿಜಯ್ ಪ್ರಕಾಶ್ ಮತ್ತು ಅನುರಾಧ್ ಭಟ್ ಧ್ವನಿಯಲ್ಲಿ ಮತ್ತೊಂದು ಸುಮಧುರ ಗೀತೆ,  ಜೋಗಿ ಪ್ರೇಮ್, ನವೀನ್ ಸಜ್ಜು ಕೂಡ ಶಭ್ಬಾಷ್ ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರಂತೆ. ಸದ್ಯಕ್ಕೆ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಳ್ಳುವತ್ತ ಗಮನ ಹರಿಸಿರುವ ಚಿತ್ರತಂಡ, ಮುಂದಿನ ದಿನಗಳಲ್ಲಿ ಮತ್ತಷ್ಟು ರಸವತ್ತಾದ ವಿಚಾರಗಳನ್ನು ಪ್ರೇಕ್ಷಕರೊಂದಿಗೆ ಹಂಚಿಕೊಳ್ಳುವ ಉಮೇದಿನಲ್ಲಿದೆ.

Tags: Antha Kannada CinemaOm SaiprakashShabbashSharatಓಂ ಸಾಯಿಪ್ರಕಾಶ್ಕನ್ನಡ ಸಿನಿಮಾನಿಸರ್ಗಶಭ್ಬಾಷ್ಶರತ್
Previous Post

ಹಿಂದೂ ಕೋಮುವಾದ: AI ಯುಗದಲ್ಲೂ ಸನಾತನವನ್ನು ಎತ್ತಿ ಹಿಡಿಯುವ ಸಂಕಟ – ಡಿ.ಸಿ.ಪ್ರಕಾಶ್

Next Post

ಹಾನಗಲ್ ಅತ್ಯಾಚಾರ ಪ್ರಕರಣ: ಅನೈತಿಕ ಪೋಲಿಸ್ ಗಿರಿಯನ್ನು ಮಟ್ಟ ಹಾಕಲು ವೆಲ್‌ಫೇರ್ ಪಾರ್ಟಿ ಒತ್ತಾಯ!

Next Post

ಹಾನಗಲ್ ಅತ್ಯಾಚಾರ ಪ್ರಕರಣ: ಅನೈತಿಕ ಪೋಲಿಸ್ ಗಿರಿಯನ್ನು ಮಟ್ಟ ಹಾಕಲು ವೆಲ್‌ಫೇರ್ ಪಾರ್ಟಿ ಒತ್ತಾಯ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS