• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯಗಳೇ ಇರುವುದಿಲ್ಲ! “ಪ್ರಜಾಪ್ರಭುತ್ವ ಗೆಲ್ಲುತ್ತದೆ” ಸಮಾವೇಶದಲ್ಲಿ ಎಂ.ಕೆ.ಸ್ಟಾಲಿನ್ ಭಾಷಣ  

by Dynamic Leader
27/01/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ತಿರುಚಿರಾಪಳ್ಳಿ: ತಿರುಚ್ಚಿಯ ಸಿರುಗನೂರಿನಲ್ಲಿ ಸಂಸದ ತೊಲ್.ತಿರುಮಾವಳವನ್ ನೇತೃತ್ವದ ವಿಡುದಲೈ ಚಿರುತ್ತೈಗಳ್ (ಬಿಡುಗಡೆ ಚಿರುತೆಗಳು) ಪಾರ್ಟಿ ವತಿಯಿಂದ “ಪ್ರಜಾಪ್ರಭುತ್ವ ಗೆಲ್ಲುತ್ತದೆ” ಎಂಬ ಶೀರ್ಷಿಕೆಯಡಿ ನಡೆದ ಸಮಾವೇಶದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಭಾಗವಹಿಸಿ ಮಾತನಾಡಿದರು.

ತಿರುಚ್ಚಿ ಸಿರುಗನೂರಿನಲ್ಲಿ ವಿಡುದಲೈ ಚಿರುತ್ತೈಗಳ್ ಪಾರ್ಟಿ ವತಿಯಿಂದ “ಪ್ರಜಾಪ್ರಭುತ್ವ ಗೆಲ್ಲುತ್ತದೆ” ಎಂಬ ಶೀರ್ಷಿಕೆಯಡಿ ಸಮಾವೇಶವನ್ನು ನಡೆಸಲಾಯಿತು. I.N.D.I.A ಮೈತ್ರಿ ಪಕ್ಷದ ನಾಯಕರು ಭಾಗವಹಿಸಿದ್ದ ಈ ಸಮಾವೇಶದಲ್ಲಿ ವಿಡುದಲೈ ಚಿರುತ್ತೈಗಳ್ ನಾಯಕ ತಿರುಮಾವಳವನ್ 33 ನಿರ್ಣಯಗಳನ್ನು ಪ್ರಸ್ತಾಪಿಸಿದರು.

ಈ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, “ಇಡೀ ಭಾರತಕ್ಕೆ ಸಾಮಾಜಿಕ ನ್ಯಾಯ ಮತ್ತು ಸಮತಾವಾದ ಚಿಂತನೆಯನ್ನು ಸಾರುವ ಸರ್ಕಾರವನ್ನು ಸ್ಥಾಪಿಸಲಿಕ್ಕಾಗಿ ಸಹೋದರ ತಿರುಮಾವಳವನ್ “ಪ್ರಜಾಪ್ರಭುತ್ವ ಗೆಲ್ಲುತ್ತದೆ” ಎಂಬ ಸಮಾವೇಶವನ್ನು ಆಯೋಜಿಸಿದ್ದಾರೆ. “ಪ್ರಜಾಪ್ರಭುತ್ವ ಗೆಲ್ಲುತ್ತದೆ” ಎಂದು ಹೇಳಿದರೆ ಸಾಲದು. ಅದಕ್ಕೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು.

ತಮಿಳುನಾಡಿನಲ್ಲಿ ಬಿಜೆಪಿ ಎಂಬುದು ಶೂನ್ಯ. ತಮಿಳುನಾಡಿನಲ್ಲಿ ಬಿಜೆಪಿ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಕೇವಲ ತಮಿಳುನಾಡಿನಲ್ಲಿ ಮಾತ್ರ ಬಿಜೆಪಿಯನ್ನು ಸೋಲಿಸಿದರೆ ಸಾಲದು. ಅದನ್ನು ಅಖಿಲ ಭಾರತ ಮಟ್ಟದಲ್ಲಿ ಸೋಲಿಸಬೇಕು. ಅದಕ್ಕೆ ಬುನಾದಿ I.N.D.I.A ಮೈತ್ರಿಕೂಟ.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಭಾರತದಲ್ಲಿ ಒಕ್ಕೂಟ ವ್ಯವಸ್ಥೆ ಇರುವುದಿಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆ ಇರುವುದಿಲ್ಲ, ಸಂಸದೀಯ ಪ್ರಕ್ರಿಯೆ ಇರುವುದಿಲ್ಲ, ಅಂತಿಮವಾಗಿ ರಾಜ್ಯಗಳೇ ಇರುವುದಿಲ್ಲ. ಇದನ್ನು ಎಲ್ಲರೂ ಅರಿತುಕೊಳ್ಳಬೇಕು. ಅವರು ರಾಜ್ಯಗಳನ್ನು ಪಾಲಿಕೆಗಳಾಗಿ (Corporation) ಮಾಡುತ್ತಾರೆ” ಎಂದು ಅವರು ಎಚ್ಚರಿಸಿದರು.

ಇದನ್ನು ಅನುಸರಿಸಿ ಮಾತನಾಡಿದ ತಿರುಮಾವಳವನ್, “ತಮಿಳುನಾಡು ಉತ್ತರ ಭಾರತದ ರಾಜ್ಯಗಳಂತೆ ಅಲ್ಲ. ಇದು ಚಿರತೆಗಳ ರಾಜ್ಯ. ತಮಿಳುನಾಡಿನ ಪ್ರತಿಯೊಂದು ಹಳ್ಳಿಯಲ್ಲೂ ಚಿರತೆಗಳಿವೆ. ಕುರಿಮರಿಗಳು ಇಲ್ಲಿ ಬಂದು ನೋಡಿದರೆ ಗೊತ್ತಾಗುತ್ತೆ. ಮೋದಿಯನ್ನು ಅಧಿಕಾರದಿಂದ ದೂರವಿಡಬೇಕು. ಇನ್ನು ವಿಳಂಬ ಮಾಡಲು, ಮೋಜು ಮಾಡಲು ಸಾಧ್ಯವಿಲ್ಲ.

ಇದು ಚುನಾವಣಾ ರಾಜಕೀಯ ಲೆಕ್ಕಾಚಾರವಲ್ಲ. ದೇಶವನ್ನು, ದೇಶದ ಜನರನ್ನು ಹಾಗೂ ಪ್ರಜಾಪ್ರಭುತ್ವವನ್ನು ಉಳಿಸಬೇಕಾಗಿದೆ. ಈ ಸಮ್ಮೇಳನದ ಸಮಾರಂಭದ ನಾಯಕ ಸಂವಿಧಾನವೇ ಆಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ವಂಚಿಸುವ ವಂಚಕರ ಕೈಗೆ ಈ ದೇಶ ಸಿಕ್ಕಿಬಿದ್ದಿದೆ. ಮೋದಿ ಜನರಿಗೆ ವಂಚಿಸುತ್ತಿದ್ದಾರೆ.

ಮೋದಿಯಿಂದ ನಾನು ಇದನ್ನು ಸಾಧಿಸಿದ್ದೇನೆ; ಅದನ್ನು ಸಾಧಿಸಿದ್ದೇನೆ, ಈ 10 ವರ್ಷಗಳಲ್ಲಿ ನಾವು ಈ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಲು ಸಾಧ್ಯವೇ? ಮೋದಿ ಮತ್ತು ಅಮಿತ್ ಶಾ ಅವರ ಸೇವೆ ಅಂಬಾನಿ ಮತ್ತು ಅಧಾನಿಗಾಗಿ ಕೆಲಸ ಮಾಡುವುದೊಂದೇ” ಎಂದು ಕಿಡಿಕಾರಿದರು.

“ಪ್ರಜಾಪ್ರಭುತ್ವ ಗೆಲ್ಲುತ್ತದೆ” ಸಮಾವೇಶಕ್ಕೆ ರಾಜ್ಯಾದ್ಯಂತ ಬಂದಿದ್ದ ಲಕ್ಷಾಂತರ ಕಾರ್ಯಕರ್ತರನ್ನು ನೋಡಿ ವಿರೋಧಿಗಳಿಗೆ ನಡುಕ ಉಂಟಾಗಿರುವುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಬಹುದು.   

Tags: DMkINDIA AllianceM.K.StalinThol. ThirumavalavanTiruchiVellum JananayagamViduthalai Chiruthaigalಇಂಡಿಯಾ ಮೈತ್ರಿಕೂಟಎಂ.ಕೆ.ಸ್ಟಾಲಿನ್ಡಿ.ಎಂ.ಕೆತಿರುಚಿರಾಪಲ್ಲಿತೊಲ್.ತಿರುಮಾವಳವನ್ಪ್ರಜಾಪ್ರಭುತ್ವ ಗೆಲ್ಲುತ್ತದೆಬಿಡುಗಡೆ ಚಿರುತೆಗಳು
Previous Post

ಶಾಂತಿನಗರಕ್ಕೆ ಒಳಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ); ಅಧ್ಯಕ್ಷರಾದ ಶಾಸಕ ಎನ್.ಎ.ಹ್ಯಾರಿಸ್!

Next Post

ಆಮ್ ಆದ್ಮಿ ಶಾಸಕರನ್ನು ಖರೀದಿಸಲು ಬಿಜೆಪಿ ಷಡ್ಯಂತ್ರ: ಕೇಜ್ರಿವಾಲ್ ಗುರುತರ ಆರೋಪ!

Next Post

ಆಮ್ ಆದ್ಮಿ ಶಾಸಕರನ್ನು ಖರೀದಿಸಲು ಬಿಜೆಪಿ ಷಡ್ಯಂತ್ರ: ಕೇಜ್ರಿವಾಲ್ ಗುರುತರ ಆರೋಪ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS