• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ವಿದೇಶ

17ನೇ ಶತಮಾನದ ಚಿತ್ರಕಲೆಯಿಂದ ಅಧಿಕಾರ ಕಳೆದುಕೊಂಡ ಇಟಲಿ ಸಚಿವ ವಿಟ್ಟೋರಿಯೊ ಸ್ಗಾರ್ಬಿ!

by Dynamic Leader
03/02/2024
in ವಿದೇಶ
0
0
SHARES
1
VIEWS
Share on FacebookShare on Twitter

ಯುರೋಪಿನ ಪ್ರಾಚೀನ ದೇಶ ಇಟಲಿ. ರೋಮನ್ ಸಂಸ್ಕೃತಿಯನ್ನು ಹೊಂದಿರುವ ಆ ದೇಶದಲ್ಲಿ ಪ್ರಾಚೀನ ವರ್ಣಚಿತ್ರಗಳಿಗೆ ಹಾಗೂ ವರ್ಣಚಿತ್ರಕಾರರಿಗೆ ಇಂದಿಗೂ ಅನೇಕ ಉತ್ಸಾಹಿಗಳಿದ್ದಾರೆ.

ಆ ದೇಶದ 605 ಆಸನಗಳ ಸಂಸತ್ತಿನ ಸದಸ್ಯರಾದ ಮತ್ತು ಸಂಸ್ಕೃತಿ ಸಚಿವರೂ ಆಗಿರುವ 71 ವರ್ಷದ ವಿಟ್ಟೋರಿಯೊ ಸ್ಗಾರ್ಬಿ (Vittorio Sgarbi) ಪುರಾತನ ಕಲಾಕೃತಿಗಳು ಮತ್ತು ಅಪರೂಪದ ವರ್ಣಚಿತ್ರಗಳನ್ನು ಖರೀದಿಸುವುದರಲ್ಲಿ ಉತ್ಸಾಹಿಯಾಗಿದ್ದಾರೆ.

2013ರಲ್ಲಿ, ಇಟಲಿಯ ಉತ್ತರ ಪೀಡ್ಮಾಂಟ್ (Piedmont) ಪ್ರದೇಶದ ಒಬ್ಬರ ಒಡೆತನದ ಕೋಟೆಯಲ್ಲಿ, ಹಲವಾರು ವರ್ಷಗಳಿಂದ ಇದ್ದ 17ನೇ ಶತಮಾನದ ರೂಟಿಲಿಯೊ ಮನೆಟ್ಟಿ (Rutilio Manetti) ಎಂಬ ಕಲಾವಿದರಿಂದ ಬರೆದ ದಿ ಕ್ಯಾಪ್ಚರ್ ಆಫ್ ಸೈಂಟ್ ಫೇಟರ್ (The Capture of Saint Peter) ಎಂಬ ಚಿತ್ರಕಲೆ ಕಳ್ಳತನವಾಗಿತ್ತು.

2021ರಲ್ಲಿ ಸಚಿವ ಸ್ಗಾರ್ಬಿ ಆಯೋಜಿಸಿದ್ದ ಪ್ರದರ್ಶನದಲ್ಲಿ ಈ ವರ್ಣಚಿತ್ರವನ್ನು ಮತ್ತೆ ಪ್ರದರ್ಶಿಸಲಾಯಿತು. ಇದು 2013ರಲ್ಲಿ ಕಣ್ಮರೆಯಾದ ಪೇಂಟಿಂಗ್ ಅನ್ನು ಹೋಲುತ್ತದೆಯಾದರೂ, ಪೇಂಟಿಂಗ್‌ನ ಮೇಲಿನ ಎಡ ಮೂಲೆಯಲ್ಲಿ ಮೇಣದಬತ್ತಿ ಕಂಡುಬಂದಿದೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ವಿಟ್ಟೋರಿಯೊ ಸ್ಗಾರ್ಬಿ

ಸುಮಾರು 20 ವರ್ಷಗಳ ಹಿಂದೆ ತನ್ನ ತಾಯಿ ಖರೀದಿಸಿದ ಹಳೆಯ ವಿಲ್ಲಾದಲ್ಲಿ ತಾನು ಅದನ್ನು ಕಂಡುಕೊಂಡಿದ್ದೇನೆ ಮತ್ತು ಇದು ರೂಟಿಲಿಯೊ ಮನೆಟ್ಟಿಯ “ಮೂಲ” ಪೇಂಟಿಂಗ್ ಮತ್ತು 2013ರಲ್ಲಿ ಕಳವಾಗಿದ್ದು “ನಕಲು” ಎಂದು ಸ್ಗಾರ್ಬಿ ಹೇಳಿಕೊಂಡಿದ್ದಾರೆ.

ಆದರೆ 2013ರಲ್ಲಿ ಸ್ಗಾರ್ಬಿಯವರು ಕದ್ದ ಪೇಂಟಿಂಗ್ ಗೆ ಚಿತ್ರಕಲಾ ತಜ್ಞರ ನೆರವಿನಿಂದ ಕೆಲವು ಬದಲಾವಣೆ ಮಾಡಿ ಹೊಸದಾಗಿ ಕಾಣುವಂತೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಅಂದಿನಿಂದ ನಾಪತ್ತೆಯಾಗಿರುವ ಪೇಂಟಿಂಗ್ ಅನ್ನು ಪತ್ತೆ ಹಚ್ಚಲು ಮತ್ತು ಸ್ಗಾರ್ಬಿಯ ಪೇಂಟಿಂಗ್ ಅಸಲಿಯೇ ಅಥವಾ 2013ರಲ್ಲಿ ಕಳವಾದ ಪೇಂಟಿಂಗೇ ಎಂಬುದನ್ನು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಲಾಗಿದೆ. ಟೀಕೆಗಳ ಪರಿಣಾಮವಾಗಿ ಇದೀಗ ಸಚಿವ ವಿಟ್ಟೋರಿಯೊ ಸ್ಗಾರ್ಬಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

“ನಾನು ಯಾವುದೇ ಅಪರಾಧ ಮಾಡಿಲ್ಲ. ನನ್ನ ಸ್ಥಾನವು ತನಿಖೆಗೆ ಅಡ್ಡಿಯಾಗಬಹುದು ಎಂಬ ಕಾರಣಕ್ಕಾಗಿ ನಾನು ರಾಜೀನಾಮೆ ನೀಡಿದ್ದೇನೆ. ನಾನು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ತಿಳಿಸಿದ್ದೇನೆ” ಎಂದು ವಿಟ್ಟೋರಿಯೊ ಸ್ಗಾರ್ಬಿ ಹೇಳಿದ್ದಾರೆ.

Tags: PaintingRutilio ManettiThe Capture of Saint PeterVittorio Sgarbiಇಟಲಿಕ್ಯಾಪ್ಚರ್ ಆಫ್ ಸೈಂಟ್ ಫೇಟರ್ಚಿತ್ರಕಲೆಜಾರ್ಜಿಯಾ ಮೆಲೋನಿಪೇಂಟಿಂಗ್ರೂಟಿಲಿಯೊ ಮನೆಟ್ಟಿವಿಟ್ಟೋರಿಯೊ ಸ್ಗಾರ್ಬಿ
Previous Post

ಕೇಂದ್ರ ಬಜೆಟ್: ರಾಜ್ಯಕ್ಕೆ ಹಲವು ಕೊಡುಗೆಗಳನ್ನು ನಿರೀಕ್ಷೆ ಮಾಡಲಾಗಿತ್ತು; ಎಲ್ಲವೂ ಹುಸಿಯಾಗಿದೆ! ಡಿ.ಕೆ.ಶಿವಕುಮಾರ್

Next Post

ದುಬೈನ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಸಿಸಿಎಲ್ ವೈಭವ: ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗಿ? ಫುಲ್ ಡಿಟೇಲ್ಸ್

Next Post

ದುಬೈನ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಸಿಸಿಎಲ್ ವೈಭವ: ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗಿ? ಫುಲ್ ಡಿಟೇಲ್ಸ್

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS