• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ರಷ್ಯಾದಲ್ಲಿ ಕಟ್ಟಡದ ಸೆಕ್ಯುರಿಟಿ ಗಾರ್ಡ್‌ಗಳಾಗಿ ಕೆಲಸಕ್ಕೆ ಹೋದ ಭಾರತೀಯರನ್ನು ಯುದ್ಧಕ್ಕೆ ದೂಡಲಾಗುತ್ತಿದೆ! – ಓವೈಸಿ

by Dynamic Leader
22/02/2024
in ದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ರಷ್ಯಾದಲ್ಲಿ ಕಟ್ಟಡದ ಸೆಕ್ಯುರಿಟಿ ಗಾರ್ಡ್‌ ಕೆಲಸ ಕೊಡಿಸುವುದಾಗಿ ನಂಬಿಸಿ ಏಜೆಂಟ್‌ಗಳ ಮೂಲಕ ಕರೆದೊಯ್ಯದ ಭಾರತೀಯರನ್ನು ಯುದ್ಧಭೂಮಿಗೆ ವರ್ಗಾಯಿಸಲಾಗುತ್ತಿದೆ ಎಂದು ಓವೈಸಿ ಆರೋಪಿಸಿದ್ದಾರೆ.

ಅಮೆರಿಕ ಸದಸ್ಯರಾಗಿರುವ ನ್ಯಾಟೋಗೆ ಸೇರುವ ಉಕ್ರೇನ್ ಪ್ರಸ್ತಾಪವನ್ನು ವಿರೋಧಿಸಿದ ರಷ್ಯಾ, ಅಧ್ಯಕ್ಷ ಪುಟಿನ್ ಅವರ ಆದೇಶದ ಮೇರೆಗೆ ಫೆಬ್ರವರಿ 24, 2022 ರಂದು ಉಕ್ರೇನ್ ಮೇಲಿನ ಯುದ್ಧ ಪ್ರಾರಂಭವಾಯಿತು. ಯುದ್ಧ ಪ್ರಾರಂಭವಾಗಿ ನಾಳೆಗೆ ಎರಡು ವರ್ಷ ಪೂರ್ಣಗೊಳ್ಳಲಿದೆ. ಆದರೂ ರಷ್ಯಾದ ದಾಳಿ, ಉಕ್ರೇನ್‌ನ ಪ್ರತಿರೋಧ ನಿರಂತರವಾಗಿದೆ. ಯುದ್ಧ ಪ್ರಾರಂಭವಾದಾಗಿನಿಂದ ಕನಿಷ್ಠ 3 ಲಕ್ಷದ 15 ಸಾವಿರ ಜನರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಗುಪ್ತಚರ ಇಲಾಖೆಯ ವರದಿಗಳು ಹೇಳುತ್ತವೆ.

ಆದಾಗ್ಯೂ, ಉಕ್ರೇನ್ ಸಂಪೂರ್ಣವಾಗಿ ರಷ್ಯಾಕ್ಕೆ ಶರಣಾದರೆ ಮಾತ್ರ ಪುಟಿನ್ ಯುದ್ಧವನ್ನು ನಿಲ್ಲಿಸುತ್ತಾರೆ ಎಂದು ಹೇಳಲಾಗುತ್ತದೆ. ಈ ಹಿನ್ನಲೆಯಲ್ಲಿ, ಉದ್ಯೋಗಕ್ಕಾಗಿ ಏಜೆಂಟ್‌ಗಳಿಂದ ರಷ್ಯಾಕ್ಕೆ ಕರೆದೊಯ್ಯಲ್ಪಟ್ಟ ಭಾರತೀಯರನ್ನು ಸೈನ್ಯಕ್ಕೆ ಸ್ವಯಂ ಸೇವಕರು ಎಂಬ ಹೆಸರಿನಲ್ಲಿ, ಆಯುಧಗಳನ್ನು ನಿರ್ವಹಿಸು ತರಬೇತಿ ನೀಡಿ, ಮಾರಿಯುಪೋಲ್, ಖಾರ್ಕಿವ್ ಮತ್ತು ಡೊನೆಟ್ಸ್ಕ್‌ನಲ್ಲಿ ಬಲವಂತಪಡಿಸಿ ಯುದ್ಧಭೂಮಿಗೆ ದೂಡಲಾಗುತ್ತಿದೆ ಎಂಬ ವರದಿಗಳಿವೆ.

ವ್ಲಾಡಿಮಿರ್‌ ಪುಟಿನ್‌

ಇದರಲ್ಲಿ, ವಿದೇಶದಲ್ಲಿ ಉದ್ಯೋಗ ಪಡೆಯುವುದು ಹೇಗೆ ಎಂಬ ವೀಡಿಯೋಗಳನ್ನು, ‘ಬಾಬಾ ವ್ಲಾಗ್ಸ್’ (Baba Vlogs) ಎಂಬ ಯೂಟ್ಯೂಬ್ ಚಾನೆಲ್ ನಲ್ಲಿ ಪೋಸ್ಟ್ ಮಾಡುತ್ತಿರುವ ಫೈಸಲ್ ಖಾನ್ ಎಂಬಾತನೇ ಭಾರತೀಯರನ್ನು ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಹಿನ್ನಲೆಯಲ್ಲಿ, ಎಐಎಂಐಎಂ (AIMIM) ನಾಯಕ ಮತ್ತು ಲೋಕಸಭಾ ಸದಸ್ಯ ಅಸಾದುದ್ದೀನ್ ಓವೈಸಿ, ಕೆಲಸದ ಹೆಸರಿನಲ್ಲಿ ರಷ್ಯಾಕ್ಕೆ ಕರೆದೊಯ್ಯಲಾದ ಭಾರತೀಯರನ್ನು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಭಾಗವಹಿಸಲು ಕಡ್ಡಾಯಗೊಳಿಸಲಾಗುತ್ತಿದ್ದು, ಕೂಡಲೇ ಅವರನ್ನು ರಕ್ಷಿಸಿ ಅಲ್ಲಿಂದ ಕರೆತರಲು ನೆರವಾಗುವಂತೆ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಓವೈಸಿ, “ತೆಲಂಗಾಣ, ಗುಜರಾತ್, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶದಿಂದ ನಿರುದ್ಯೋಗಿ ಪುರುಷರನ್ನು ರಷ್ಯಾದಲ್ಲಿ ಕಟ್ಟಡ ಭದ್ರತಾ ಸಿಬ್ಬಂದಿಯ ಕೆಲಸ ಕೊಡಿಸುವುದಾಗಿ ನಂಬಿಸಿ, ಏಜೆಂಟ್‌ಗಳ ಮೂಲಕ ಕರೆದೊಯ್ಯಲಾಗಿದೆ. ಆದರೆ, ಅಲ್ಲಿ ಅವರನ್ನು ವಂಚಿಸಿ ಯುದ್ಧಭೂಮಿಗೆ ಕಳುಹಿಸಲಾಗಿದೆ.

ಅಸಾದುದ್ದೀನ್ ಓವೈಸಿ

ಅಲ್ಲಿ ಸಿಕ್ಕಿಬಿದ್ದವರಿಗೆ ಸಂಬಂಧಿಸಿದಂತೆ, ನನ್ನ ಬಳಿ ಸಹಾಯ ಕೇಳಿ ಬಂದ ಕುಟುಂಬಗಳನ್ನು ನಾನು ಕಳೆದ ಡಿಸೆಂಬರ್‌ನಲ್ಲಿ ಭೇಟಿಯಾದೆ. ಇದಾದ ಬಳಿಕ ಅಲ್ಲಿನ ಜನರನ್ನು ವಾಪಸ್ ಕರೆತರುವಂತೆ ವಿದೇಶಾಂಗ ಸಚಿವ ಜೈಶಂಕರ್ ಹಾಗೂ ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಅವರಿಗೆ ಪತ್ರ ಬರೆದಿದ್ದೇನೆ.

ದುಬೈನಲ್ಲಿರುವ ಫೈಸಲ್ ಖಾನ್, ಮುಂಬೈ ಮೂಲದ ಸುಫಿಯಾನ್ ಮತ್ತು ಭೋಜಾ ಎಂಬುವವರೊಂದಿಗೆ ಸೇರಿ ವಂಚಿಸಿದ್ದಾರೆ. ಅಲ್ಲಿ ಸಿಕ್ಕಿಬಿದ್ದು ಬಲವಂತವಾಗಿ ಯುದ್ಧಭೂಮಿಗೆ ದೂಡಲ್ಪಟ್ಟ ಒಬ್ಬ ಭಾರತೀಯನು ಸಾವನ್ನಪ್ಪಿದ್ದಾನೆ” ಎಂದು ಹೇಳಿದರು.

ಅಲ್ಲದೆ, ಜೈಶಂಕರ್‌ಗೆ ಓವೈಸಿ ಬರೆದಿರುವ ಪತ್ರದಲ್ಲಿ, “ಮೊಹಮ್ಮದ್ ಅಸ್ಫಾನ್, ಅರ್ಬಾಬ್ ಹುಸೇನ್ ಮತ್ತು ಜಹೂರ್ ಅಹ್ಮದ್ ಹೈದರಾಬಾದ್‌ಗೆ ಮರಳಲು ಸಹಾಯವನ್ನು ಎದುರು ನೋಡುತ್ತಿದ್ದಾರೆ. ಆದರೆ ಅವರನ್ನು ಭಾರತೀಯ ಏಜೆಂಟರು ದಾರಿ ತಪ್ಪಿಸಿ ಬಲವಂತವಾಗಿ ರಷ್ಯಾದ ಸೇನೆಗೆ ಸೇರಿಸಿದ್ದಾರೆ ಎಂಬ ಅಂಶವೂ ಬಹಿರಂಗವಾಗಿದೆ.

ವೊಲೊಡಿಮಿರ್ ಝೆಲೆನ್ಸ್ಕಿ

25 ದಿನಗಳಿಂದ ಅವರು ತಮ್ಮ ಕುಟುಂಬದವರನ್ನು ಸಂಪರ್ಕಿಸಿಲ್ಲ. ಅವರ ಕುಟುಂಬಗಳು ತುಂಬಾ ಚಿಂತಿತರಾಗಿದ್ದಾರೆ. ಅಲ್ಲದೆ, ಅವರ ಕುಟುಂಬದಲ್ಲಿ ಅವರೊಬ್ಬರೇ ಸಂಪಾದನೆ ಮಾಡುವವರಾಗಿದ್ದರು” ಎಂದು ನಮೂದಿಸಿದ್ದಾರೆ.

ಇದಕ್ಕೂ ಮೊದಲು, ಕಳೆದ ಡಿಸೆಂಬರ್‌ನಲ್ಲಿ ಬಿಡುಗಡೆಯಾದ ವೀಡಿಯೊದಲ್ಲಿ, ಯುರೋಪಿಯನ್ ದೇಶಗಳ ಕೆಲಸದ ಪರವಾನಿಗೆ (Work Permit) ತನಗೆ ಸಿಕ್ಕಿರುವುದಾಗಿ ಹೇಳಿದ್ದ ಫೈಸಲ್ ಖಾನ್, ರಷ್ಯಾದ ಸೈನ್ಯದೊಂದಿಗೆ ಕೆಲಸ ಪ್ರಗತಿಯಲ್ಲಿದೆ ಎಂದು ಹೇಳಿದ್ದರು. ಮತ್ತೊಂದು ವೀಡಿಯೊದಲ್ಲಿ, ಏಳು ಜನರು ರಷ್ಯಾದಲ್ಲಿ ಕೆಲಸ ಮಾಡಲು ಅನುಮತಿ ಪಡೆದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದರು ಎಂಬುದು ಗಮನಾರ್ಹ.   

Tags: Indians Stuck in Russiaಉಕ್ರೇನ್ಜೈಶಂಕರ್ಝೆಲೆನ್ಸ್ಕಿನ್ಯಾಟೋಪುಟಿನ್ರಷ್ಯಾರಷ್ಯಾ ಉಕ್ರೇನ್ ಯುದ್ಧರಷ್ಯಾದಲ್ಲಿ ಸಿಲುಕಿರುವ ಭಾರತೀಯರುಸೆಕ್ಯುರಿಟಿ ಗಾರ್ಡ್‌
Previous Post

ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಯುವ ಸಮೃದ್ಧಿ’ ಮೆಗಾ ಉದ್ಯೋಗ ಮೇಳವನ್ನು ಆಯೋಜಿಸಿರುವ ಸರ್ಕಾರ!

Next Post

ಕೇಂದ್ರ ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ವಿರುದ್ಧ ವರ್ತಿಸುತ್ತಿದೆ: ‘ಎಕ್ಸ್’ ಕಂಪನಿ ಆರೋಪ!

Next Post

ಕೇಂದ್ರ ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ವಿರುದ್ಧ ವರ್ತಿಸುತ್ತಿದೆ: 'ಎಕ್ಸ್' ಕಂಪನಿ ಆರೋಪ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS