• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಬಿಜೆಪಿಯಲ್ಲಿ ವಯೋಮಿತಿ: ಪ್ರಧಾನಿ ಮೋದಿ, ಕೇಂದ್ರ ಸಚಿವ ರಾಜನಾಥ್ ಸಿಂಗ್‌ಗೆ ವಿನಾಯಿತಿ?

by Dynamic Leader
07/03/2024
in ದೇಶ, ರಾಜಕೀಯ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್ ಸಂಪಾದಕರು

ಎಲ್‌.ಕೆ.ಅಡ್ವಾಣಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರನ್ನು 75 ವಯಸ್ಸಿನ ನಂತರ ” ಮಾರ್ಗದರ್ಶಕ್ ಮಂಡಲ್ ” ಎಂದು ಕರೆಯಲ್ಪಡುವ ಸ್ಟೀರಿಂಗ್ ಸಮಿತಿಗೆ ನೇಮಿಸಲಾಗಿತ್ತು. ಈ ನಿಯಮದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ವಿನಾಯಿತಿ ಸಿಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಈಗ 73 ವರ್ಷ ವಯಸ್ಸಾಗಿದೆ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಪ್ರಧಾನಿಯಾದಾಗ, ಮೋದಿ ಅವರು 78 ವರ್ಷ ವಯಸ್ಸಿನವರೆಗೆ ಅಧಿಕಾರದಲ್ಲಿ ಉಳಿಯಬೇಕಾಗುತ್ತಾದೆ. ಹಾಗಾಗಿ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರಂತೆ 75 ವರ್ಷ ವಯಸ್ಸಿನ ನಂತರ ನಿವೃತ್ತಿಯಾಗಬೇಕು ಎಂದು ಬಲವಂತಮಾಡದೇ ಮೋದಿಯೇ ಪೂರ್ಣಾವಧಿಯವರೆಗೆ ಪ್ರಧಾನಿಯಾಗಿ ಮುಂದುವರಿಯಲು ಬಿಜೆಪಿ ತನ್ನ ನಿಲುವನ್ನು ಬದಲಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಪ್ರಧಾನಿ ಮೋದಿಯವರ ಹೆಸರಿನಲ್ಲಿ ಬಿಜೆಪಿ ದೇಶಾದ್ಯಂತ ಮತಗಳನ್ನು ಸಂಗ್ರಹಿಸುತ್ತಿದ್ದು, ಅವರು ನೇತೃತ್ವ ವಹಿಸಿಕೊಂಡ ನಂತರವೇ ವಿವಿಧ ಚುನಾವಣೆಗಳಲ್ಲಿ ಪಕ್ಷವು ಗೆಲುವು ಸಾಧಿಸುತ್ತಿದೆ ಎಂದು ಬಿಜೆಪಿ ನಾಯಕರು ಗಮನಸೆಳೆದಿದ್ದಾರೆ. ಆದ್ದರಿಂದ ಅವರಿಗೆ 75 ವಯಸ್ಸಿನ ನಿಯಮದಿಂದ ವಿನಾಯಿತಿ ಕಡ್ಡಾಯವೆಂದು ಪರಿಗಣಿಸಲಾಗಿದೆ.

ಇದೇ ವೇಳೆ, ಮೋದಿ ಅವರು ಸ್ಟೀರಿಂಗ್ ಕಮಿಟಿಗೆ ಹೋಗಬೇಕು ಎಂದು ಹಿರಿಯ ನಾಯಕರು ಒಮ್ಮತದ ಅಭಿಪ್ರಾಯ ಮಂಡಿಸಿದರೆ ಅರ್ಧದಷ್ಟು ಅವಧಿಗೆ ಮತ್ತೊಂದು ಪ್ರಧಾನಿಯನ್ನು ನೇಮಿಸಬಹುದು ಎಂದೂ ಹೇಳಲಾಗುತ್ತಿದೆ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆಗೆ ಅವಕಾಶವಿಲ್ಲ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ನರೇಂದ್ರ ಮೋದಿಯಷ್ಟೇ ಅಲ್ಲ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ವಯಸ್ಸು ಏರಿದ್ದರೂ ಮತ್ತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ. 72 ವರ್ಷದ ರಾಜನಾಥ್ ಸಿಂಗ್ ಅವರು ಲಕ್ನೋದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಘೋಷಿಸಿದೆ.

ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಸಚಿವರಾದರೆ 77ರ ತನಕ ಅಧಿಕಾರದಲ್ಲಿ ಮುಂದುವರಿಯಬಹುದು. ಇದನ್ನು ಇತರ ಭಾರತೀಯ ಜನತಾ ಪಕ್ಷದ ನಾಯಕರು ಒಪ್ಪಿಕೊಳ್ಳುತ್ತಾರೆಯೇ ಎಂಬ ಪ್ರಶ್ನೆಯೂ ಮೋದಿ ಮತ್ತು ರಾಜನಾಥ್ ಸಿಂಗ್ ಅವರ ಆಯ್ಕೆಯಿಂದಾಗಿ ಉದ್ಭವಿಸಿದೆ.

ಈ ಹಿಂದೆ ಕಲ್‍ರಾಜ್ ಮಿಶ್ರಾ ಅವರಂತಹ ಕೇಂದ್ರ ಸಚಿವರು ತಮ್ಮ 75ನೇ ವಯಸ್ಸಿನಲ್ಲಿ ರಾಜೀನಾಮೆ ನೀಡಿದ್ದರು ಎಂದು ಬಿಜೆಪಿಗರು ಗಮನಸೆಳೆದಿದ್ದಾರೆ. ಅದೇ ರೀತಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ವಯಸ್ಸು 75 ದಾಟುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿಯಬೇಕಾಯಿತು. ಗುಜರಾತ್ ಮುಖ್ಯಮಂತ್ರಿಯಾಗಿದ್ದ ಆನಂದಿಬೆನ್ ಪಟೇಲ್ ಕೂಡ ಇದೇ ರೀತಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ನಂತರ ರಾಜ್ಯಪಾಲರಾಗಿ ನೇಮಕವಾದರು.

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಮಾತ್ರ ಹೊರಬಿದ್ದಿದ್ದು, ಮುಂದಿನ ಪಟ್ಟಿಗಳಲ್ಲಿ 70 ದಾಟಿದ ಹಿರಿಯ ನಾಯಕರಿಗೆ ಮತ್ತೆ ಚುನಾವಣೆಯಲ್ಲಿ ಸ್ಪರ್ದಿಸಲು ಬಿಜೆಪಿ ಅವಕಾಶ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕು. ಮತ್ತು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಅಧಿಕಾರಕ್ಕೆ ಬಂದು, ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ, ಪೂರ್ಣಾವಧಿಯವರೆಗೂ ಅಧಿಕಾರದಲ್ಲಿ ಮುಂದುವರಿಯುತ್ತಾರೆಯೇ ಎಂಬುದು ಅನುಮಾನವೇ ಎಂದು ಬಿಜೆಪಿಯಲ್ಲೇ ಗುಸುಗುಸು ಮಾತನಾಡಿಕೊಳ್ಳುತ್ತಿದ್ದಾರೆ.

Tags: Age LimitAge Limit in BJPBJpModiRajnath Singhಬಿಜೆಪಿಬಿಜೆಪಿಯಲ್ಲಿ ವಯೋಮಿತಿಮೋದಿರಾಜನಾಥ್ ಸಿಂಗ್ಲೋಕಸಭೆ ಚುನಾವಣೆವಯೋಮಿತಿಸಂಸತ್ ಚುನಾವಣೆ
Previous Post

ಚಂದ್ರನಿಗೆ ಹೋಗಲು 41 ದಿನಗಳು ಸಾಕು; ಎಸ್‌ಬಿಐಗೆ ದಾನಿಗಳ ಹೆಸರುಗಳನ್ನು ನೀಡಲು 140 ದಿನಗಳು ಬೇಕೆ?

Next Post

ನಟ ಅಜಿತ್ ಆಸ್ಪತ್ರೆಗೆ ದಾಖಲು!

Next Post

ನಟ ಅಜಿತ್ ಆಸ್ಪತ್ರೆಗೆ ದಾಖಲು!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS