• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ: ಕರ್ನಾಟಕ ತಮಿಳರ ಸಂಘ ಘೋಷಣೆ!

by Dynamic Leader
29/03/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಈ ಬಾರಿ ಕರ್ನಾಟಕದಲ್ಲಿ “ಇಂಡಿಯಾ” ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ತಮ್ಮ ಬೆಂಬಲ ಎಂದು “ಕರ್ನಾಟಕ ತಮಿಳರ ಸಂಘ” ತೀರ್ಮಾನಿಸಿದೆ ಎಂದು ಅದರ ಅಧ್ಯಕ್ಷ ಪ್ರಕಾಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸುಮಾರು 80 ಲಕ್ಷ ತಮಿಳರಿದ್ದಾರೆ. ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ,  ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಮುಂತಾದ ಜಿಲ್ಲೆಗಳಲ್ಲಿ ಮತ್ತು ಕೋಲಾರದ ಕೆಜಿಎಫ್‌ನಲ್ಲಿ ವ್ಯಾಪಕವಾಗಿ ವಾಸಿಸುತ್ತಿದ್ದಾರೆ. ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಶಿವಮೊಗ್ಗ ಮತ್ತು ಕೋಲಾರದ ಕೆಜಿಎಫ್‌ನಲ್ಲಿ ತಮಿಳರೆ ನಿರ್ಣಾಯಕರು.

ಆದರೆ, ತಮಿಳರಿಗೆ ಇಲ್ಲಿ ಯಾವುದೇ ರಾಜಕೀಯ ಪ್ರಾತಿನಿತ್ಯ ನೀಡುವುದಿಲ್ಲ. ಇಲ್ಲಿ ಎಲ್ಲರಿಗೂ ಜಾತಿ ಆಧಾರದ ಮೇಲೆಯೆ ಅವಕಾಶ ನೀಡಲಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಯಾರೊಬ್ಬರೂ ತಮ್ಮ ಜಾತಿಯ ಮತಗಳಿಂದ ಗೆದ್ದು ಬರುವುದಿಲ್ಲ. ಗೆಲ್ಲಬೇಕಾದರೆ ಅವರಿಗೆ ತಮಿಳರು ಮತ್ತು ಕೊಳಗೇರಿ ಜನರ ಮತಗಳು ಬೇಕು. ಬೆಂಗಳೂರಿನ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ಸುಮಾರು ಶೇ.60ರಷ್ಟು ಜನ ತಮಿಳು ಭಾಷಿಕರಾಗಿದ್ದಾರೆ ಎಂಬುದು ಇಲ್ಲಿ ಗಮನಾರ್ಹ.

ಕಳೆದ ರಾಜ್ಯ ಬಿಜೆಪಿ ಸರ್ಕಾರದಲ್ಲಿ, ಮತಾಂತರ ನಿಷೇಧ ಕಾಯಿದೆ, ಗೋಹತ್ಯೆ ನಿಷೇಧ ಕಾಯಿದೆ ಮುಂತಾದ ಸಂವಿಧಾನ ವಿರೋಧಿ ಕಾಯಿದೆಗಳನ್ನು ತಂದು ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದಬ್ಬಾಳಿಕೆ ಮಾಡಲಾಯಿತು. ಇದರಿಂದ ಕರ್ನಾಟಕದಲ್ಲಿ ಮುಸ್ಲಿಮರು ಮಾತ್ರವಲ್ಲ ತಮಿಳು ಕ್ರೈಸ್ತರು ಮತ್ತು ಆದಿ ದ್ರಾವಿಡ (ತಮಿಳರು) ಸಮುದಾಯವು ಕೂಡ ದಬ್ಬಾಳಿಕೆಯನ್ನು ಎದುರಿಸಬೇಕಾಯಿತು.

ಬೆಂಗಳೂರು ಮಹಾನಗರದ ಸುತ್ತಮುತ್ತ ಮತ್ತು ಕೆಜಿಎಫ್‌ನಲ್ಲಿರುವ ಕ್ರೈಸ್ತರಲ್ಲಿ ಶೇ.80ರಷ್ಟು ಜನ ತಮಿಳು ಕ್ರೈಸ್ತರಾಗಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃದ ಕಾಂಗ್ರೆಸ್ ಸರ್ಕಾರ ಬಂದಮೇಲೆ ರಾಜ್ಯದಲ್ಲಿ ಅಲ್ಪಸಂಖ್ಯಾತರು ವಿಶೇಷವಾಗಿ ತಮಿಳು ಕ್ರೈಸ್ತರು ಹಾಗೂ ಆದಿ ದ್ರಾವಿಡ ಸಮುದಾಯವು ನಿಟ್ಟುಸಿರು ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

2024-25ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ರೂ.500 ಕೋಟಿ ನಿರೀಕ್ಷಿಸಲಾಗಿತ್ತು. ಆದರೆ, ರೂ.200 ಕೋಟಿಯಷ್ಟೆ ಘೋಷಣೆ ಮಾಡಲಾಗಿದೆ. ತಮಿಳು ಕ್ರೈಸ್ತರಿಗೆ ಇದರಲ್ಲೂ ಸ್ವಲ್ಪ ಮಟ್ಟಿಗೆ ಪಾಲು ದೊರೆತಿದೆ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ 5 ಗ್ಯಾರಂಟಿ (ಅನ್ನ ಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಉಚಿತ ಪ್ರಯಾಣ, ಯುವನಿಧಿ)  ಯೋಜನೆಯಿಂದ ಕರ್ನಾಟಕ ತಮಿಳರು ಹೆಚ್ಚಾಗಿ ಅನುಕೂಲ ಪಡೆದಿದ್ದಾರೆ. ವಿಶೇಷವಾಗಿ ಕೊಳಗೇರಿಗಳಲ್ಲಿ ವಾಸವಾಗಿರುವ ಅಸಂಘಟಿ ತಮಿಳು ಕೂಲಿ ಕಾರ್ಮಿಕರು ಹೆಚ್ಚಿನ ರೀತಿಯಲ್ಲಿ ಅನುಕೂಲತೆಯನ್ನು ಪಡೆದುಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ, ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು, ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ತಮಿಳರ ಮಧ್ಯೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಶೋಭಾ ಕರಂದ್ಲಾಜೆ ವಿರುದ್ಧ ತಮಿಳುನಾಡಿನಲ್ಲಿ ಪ್ರಕರಣಗಳು ದಾಖಲಾದವು. ಡಿಎಂಕೆ ದೂರಿನ ಮೇರೆಗೆ, ಕರ್ನಾಟಕದಲ್ಲೂ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. ಶೋಭಾ ಕರಂದ್ಲಾಜೆ ಅವರ ಈ ಹೇಳಿಕೆಯಿಂದ ಕರ್ನಾಟಕ ತಮಿಳರು ಆಘಾತಕ್ಕೆ ಒಳಗಾಗಿದ್ದಾರೆ.

ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಮಾನ ಅವಕಾಶಕ್ಕಾಗಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಜಾತಿಗಣತಿ ನಡೆಸುವ ಆಶ್ವಾಸನೆಯನ್ನು ನೀಡಿದೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ಮತ್ತು ಅತೀ ಹಿಂದುಳಿದ, ಹಾಗೂ ಅಲ್ಪಸಂಖ್ಯಾತ ಸಮುದಾಯಗಳು ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಹಾಗೂ ಆರ್ಥಿಕವಾಗಿ ಇನ್ನು ಹೆಚ್ಚಾಗಿ ಪ್ರಗತಿ ಹೊಂದಲು ಅನುಕೂಲವಾಗಬಹುದು; ಇದು ಸ್ವಾಗತಾರ್ಹ.

ಮೋದಿ ಸರ್ಕಾರಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ; ಅತ್ಯಾಚಾರವೆಂಬುದು ಸಾಮಾನ್ಯವಾಗಿದೆ. ಅಲ್ಪಸಂಖ್ಯಾತರಿಗೆ ಭದ್ರತೆಯಿಲ್ಲ. ಬಿಜೆಪಿ ಸಂಸದರ ವರ್ತನೆಗೆ ಕಡಿವಾಣವಿಲ್ಲ. ಅವರ ನಾಲಿಗೆಯಲ್ಲಿ ಹಿಡಿತವಿಲ್ಲ; ಸಂವಿಧಾನ ಬದಲಿಸುವ ಬಗ್ಗೆ ಮಾತನಾಡುತ್ತಾರೆ. ರಾಜ್ಯದ, ತಮ್ಮ ಕ್ಷೇತ್ರದ ಬಗ್ಗೆ ಕಾಳಜಿಯಿಲ್ಲ; ಅವರಿಗೆ ಜನರ ಸಮಸ್ಯೆಗಳು ಅರ್ಥವಾಗುತ್ತಿಲ್ಲ. ಒಟ್ಟಾರೆಯಾಗಿ ಪ್ರಧಾನಿ ಮೋದಿಯ ಮುಂದೆ ಮಾತನಾಡುವುದೇ ಇಲ್ಲ. ಇಂತಹ ಸಂಸದರು ಮತ್ತೊಮ್ಮೆ ಬೇಕೆ?

ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಏರಿಕೆ, ಜಿಎಸ್‌ಟಿಯಲ್ಲಿ ತಾರತಮ್ಯ, ಉದ್ಯೋಗದ ನೇಮಕಾತಿಯಲ್ಲಿ ಉತ್ತರದವರಿಗೆ ಆದ್ಯತೆ, ಅತಿವೃಷ್ಟಿ-ಅನಾವೃಷ್ಟಿಯ ಕಾಲದಲ್ಲಿ ಅನುದಾನದ ನಿರಾಕರಣೆ, ಹಣ ನೀಡುತ್ತೇವೆ ಎಂದರೂ ರಾಜ್ಯಕ್ಕೆ ಅಕ್ಕಿ ಕೊಡದೆ “ಭಾರತ್ ರೈಸ್” ಹೆಸರಿನಲ್ಲಿ ಹಕ್ಕಿಯನ್ನು ಕಡಿಮೆ ಬೆಲೆಗೆ ನೇರವಾಗಿ ಮಾರಟ ಮಾಡುವುದು ಮುಂತಾದ ಇನ್ನು ಹಲವಾರು ಜನವಿರೋಧಿ ಕಾರ್ಯಗಳಿಂದ ಜನ ಬೇಸತ್ತು ಹೋಗಿದ್ದಾರೆ.

ಆದ್ದರಿಂದ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕ ತಮಿಳರ ಸಂಘವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ತೀರ್ಮಾನವನ್ನು ಮಾಡಿದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಶಿವಮೊಗ್ಗ ಮತ್ತು ಕೋಲಾರದ ಕೆಜಿಎಫ್‌ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ತಿಗಳನ್ನು ಬೆಂಬಲಿಸಿ ಪ್ರಚಾರ ಮಾಡುವುದರೊಂದಿಗೆ ಅವರ ಗೆಲುವಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡುವುದೆಂದು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags: 5 ಗ್ಯಾರಂಟಿ ಯೋಜನೆBangalore SlumsDravidaKarnataka Tamilara SanghaParliament ElectionTamil'sಆದಿ ದ್ರಾವಿಡಕರ್ನಾಟಕ ತಮಿಳರ ಸಂಘಕಾಂಗ್ರೆಸ್ಕಾಂಗ್ರೆಸ್ ಗ್ಯಾರಂಟಿಕೆಜಿಎಫ್‌ಕೊಳಗೇರಿಚುನಾವಣೆತಮಿಳುತಮಿಳು ಸಂಘದ್ರಾವಿಡಶೋಭಾ ಕರಂದ್ಲಾಜೆಸಂಸತ್ ಚುನಾವಣೆ
Previous Post

‘ಭಾರತ್ ಮಾತಾ ಕಿ ಜೈ,’ ‘ಜೈ ಹಿಂದ್’ ಘೋಷಣೆಯನ್ನು ರಚಿಸಿದವರು ಮುಸ್ಲಿಮರು: ಪಿಣರಾಯಿ ವಿಜಯನ್

Next Post

ಸುಪ್ರೀಂ ಕೋರ್ಟ್ ನಿಷೇಧಕ್ಕೂ ಮುನ್ನ ರೂ.10,000 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಮುದ್ರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸಿತ್ತು?

Next Post

ಸುಪ್ರೀಂ ಕೋರ್ಟ್ ನಿಷೇಧಕ್ಕೂ ಮುನ್ನ ರೂ.10,000 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಮುದ್ರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸಿತ್ತು?

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS