• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಚುನಾವಣಾ ಬಾಂಡ್‌ಗಳ ಮೂಲಕ 45 ಸಂಶಯಾಸ್ಪದ ಕಂಪನಿಗಳಿಂದ ಬಿಜೆಪಿ 1,068 ಕೋಟಿ ರೂ. ಸಂಗ್ರಹ: ತನಿಖೆಗೆ ಆಮ್ ಆದ್ಮಿ ಆಗ್ರಹ!

by Dynamic Leader
09/04/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ನವದೆಹಲಿ: ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಯು 45 ಸಂಶಯಾಸ್ಪದ ಕಂಪನಿಗಳಿಂದ 1,068 ಕೋಟಿ ರೂಪಾಯಿ ದೇಣಿಗೆಯನ್ನು ಪಡೆದಿದ್ದು, ಈ ಬಗ್ಗೆ ಕೇಂದ್ರ ಗುಪ್ತಚರ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.

ನಿನ್ನೆ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಮಾಡಿದ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ಜಾಸ್ಮಿನ್ ಶಾ ಅವರು, “ಬಿಜೆಪಿಗೆ 45 ಸಂಶಯಾಸ್ಪದ ಕಂಪನಿಗಳು ರೂ.1,068 ಕೋಟಿಯವರೆಗೆ ದೇಣಿಗೆ ನೀಡಿದೆ. ಅವು ನಷ್ಟದ ಕಂಪನಿಗಳಾಗಿವೆ. ಅಥವಾ ಅವರು ತೆರಿಗೆಗಳನ್ನು ಪಾವತಿಸದವರು ಅಥವಾ ಲಾಭಕ್ಕಿಂತ ಹೆಚ್ಚಾಗಿ ದೇಣಿಗೆ ನೀಡಿದವರಾಗಿದ್ದಾರೆ.

ಏಳು ವರ್ಷಗಳಲ್ಲಿ 33 ಕಂಪನಿಗಳು ಒಟ್ಟು ಒಂದು ಲಕ್ಷ ಕೋಟಿ ರೂಪಾಯಿಯವರೆಗೆ ನಷ್ಟ ಅನುಭವಿಸಿದ ಕಂಪನಿಗಳಾಗಿರುತ್ತವೆ. ಈ ಕಂಪನಿಗಳು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ 450 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿರುತ್ತವೆ. ಈ ಪೈಕಿ 17 ಕಂಪನಿಗಳು ಶೂನ್ಯ ತೆರಿಗೆ ಅಥವಾ ಋಣಾತ್ಮಕ ತೆರಿಗೆ ಪಾವತಿಸಿದ ಕಂಪನಿಗಳಾಗಿವೆ.

ಇದಲ್ಲದೆ, ಈ ಕಂಪನಿಗಳು ತೆರಿಗೆ ವಿನಾಯಿತಿಗಳನ್ನು ಸಹ ಪಡೆದಿರುತ್ತವೆ. ಅಲ್ಲದೆ, ಆರು ಕಂಪನಿಗಳು ಬಿಜೆಪಿಗೆ 600 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿವೆ. ಆ ಮೊತ್ತವು ಆ ಕಂಪನಿಗಳ ಲಾಭಕ್ಕಿಂತ ಹೆಚ್ಚಿನ ಮೊತ್ತವಾಗಿರುತ್ತದೆ. ಇನ್ನೊಂದು ಕಂಪನಿ ಅವರ ಲಾಭಕ್ಕಿಂತ 93 ಪಟ್ಟು ಹೆಚ್ಚು ನೀಡಿದೆ. ಮೂರು ಕಂಪನಿಗಳು 28 ಕೋಟಿ ದೇಣಿಗೆ ನೀಡಿ ಶೂನ್ಯ ತೆರಿಗೆ ಪಾವತಿಸಿವೆ. ಉದಾಹರಣೆಗೆ, ನಷ್ಟದ ನಡುವೆಯೂ ಅನೇಕ ಕಂಪನಿಗಳು ಉದಾರವಾಗಿ ಬಿಜೆಪಿಗೆ ದೇಣಿಗೆ ನೀಡಿದವು. ಅದರಲ್ಲಿ ಪ್ರಮುಖವಾದದ್ದು ಭಾರ್ತಿ ಏರ್‌ಟೆಲ್ ಕಂಪೆನಿ.

77,000 ಕೋಟಿ ನಷ್ಟ ಅನುಭವಿಸಿದರೂ ಕಂಪನಿ 200 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಇದಕ್ಕೆ ಪ್ರತಿಯಾಗಿ ರೂ.8,200 ಕೋಟಿ ತೆರಿಗೆ ರಿಯಾಯಿತಿ ಪಡೆದುಕೊಂಡಿದೆ. ಇನ್ನೊಂದು ಕಂಪನಿ DLF. 7 ವರ್ಷಗಳಲ್ಲಿ 130 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಆದರೂ 25 ಕೋಟಿ ರೂಪಾಯಿ ದೇಣಿಗೆ ನೀಡಿ, 20 ಕೋಟಿ ರೂಪಾಯಿ ತೆರಿಗೆ ಲಾಭವನ್ನು ಪಡೆದುಕೊಂಡಿದೆ. ಧರಿವಾಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ 115 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿ, ಬಿಜೆಪಿಗೆ ಸುಮಾರು 24.96 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದೆ. ಈ ಕಂಪನಿಯ ನಷ್ಟ ರೂ.299 ಕೋಟಿಯಾಗಿದೆ. ಹೀಗಾಗಿ ಅವರು ಶೂನ್ಯ ತೆರಿಗೆ ಪಾವತಿಸಿದ್ದಾರೆ.

ಅದೇ ರೀತಿ ಪಿಆರ್‌ಎಲ್ ಡೆವಲಪರ್ಸ್ 20 ಕೋಟಿ ರೂಪಾಯಿ ಚುನಾವಣಾ ಬಾಂಡ್‌ಗಳನ್ನು ಖರೀದಿಸಿ, 10 ಕೋಟಿ ರೂಪಾಯಿ ದೇಣಿಗೆ ನೀಡಿ 4.7 ಕೋಟಿ ರೂಪಾಯಿ ತೆರಿಗೆ ವಿನಾಯಿತಿ ಪಡೆದುಕೊಂಡಿದೆ. ಈ ಕಂಪನಿ 1550 ಕೋಟಿ ನಷ್ಟವನ್ನು ಅನುಭವಿಸಿದ ಕಂಪನಿಯಾಗಿದೆ. ಯುಜಿಯಾ ಫಾರ್ಮಾ ಲಿಮಿಟೆಡ್ ಶರತ್ ಚಂದ್ರ ರೆಡ್ಡಿ ಅವರ ಕಂಪನಿಯಾಗಿದೆ. 7 ವರ್ಷದಲ್ಲಿ 28 ಕೋಟಿ ನಷ್ಟ ಅನುಭವಿಸಿದ್ದರೂ ಚುನಾವಣಾ ಬಾಂಡ್ ನಿಧಿಯಾಗಿ 15 ಕೋಟಿ ನೀಡಿ, ರೂ.7.20 ಕೋಟಿ ತೆರಿಗೆ ವಿನಾಯಿತಿ ಪಡೆದುಕೊಂಡಿದೆ.

7 ವರ್ಷದಲ್ಲಿ ರೂ.86 ಕೋಟಿ ನಷ್ಟವನ್ನು ಉಂಟುಮಾಡಿಕೊಂಡಿದ್ದ ಮೈತ್ರಾ ಎನರ್ಜಿ ಪ್ರೈವೇಟ್ ಲಿಮಿಟೆಡ್ ಕಂಪನಿ, 19 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್ ಗಳನ್ನು ಖರೀದಿಸಿ, 9.99 ಕೋಟಿ ಪಾವತಿಸುವ ಮೂಲಕ ರೂ.126 ಕೋಟಿ ತೆರಿಗೆ ವಿನಾಯಿತಿ ಪಡೆದುಕೊಂಡಿದೆ.

ಪಿರಮಲ್ ಕ್ಯಾಪಿಟಲ್ ಮತ್ತು ಹೌಸಿಂಗ್ ಫೈನಾನ್ಸ್ ಲಿಮಿಟೆಡ್ 10 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸುವ ಮೂಲಕ 16,376 ಕೋಟಿ ರೂಪಾಯಿ ನಷ್ಟವನ್ನು ಅನುಭವಿಸಿದರೂ 10 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ. ಇದಕ್ಕೆ ರೂ.5178.50 ಕೋಟಿ ರೂ. ತೆರಿಗೆ ವಿನಾಯಿತಿ ಸಿಕ್ಕಿದೆ.

ಓರಿಯಂಟಲ್ ಸೌತ್ ದೆಹಲಿ ಹೊಟೇಲ್ ಪ್ರೈವೇಟ್ ಲಿಮಿಟೆಡ್ 5 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ್ದು, 5 ಕೋಟಿ ದೇಣಿಗೆಯನ್ನೂ ನೀಡಿದೆ. ಕಂಪನಿ 49 ಕೋಟಿ ನಷ್ಟವನ್ನು ಅನುಭವಿಸಿದ್ದು, ಶೂನ್ಯ ತೆರಿಗೆ ಪಾವತಿಸಿದೆ. ವಿಲೇಜ್ ಡಿ ನಂದಿ ಪ್ರೈವೇಟ್ ಲಿಮಿಟೆಡ್ ಚುನಾವಣಾ ಬಾಂಡ್‌ಗಳನ್ನು ರೂ.5 ಕೋಟಿಗೆ ಖರೀದಿಸಿದೆ. ಮತ್ತು ರೂ.48 ಕೋಟಿ ನಷ್ಟದ ಹೊರತಾಗಿಯೂ, ಸಂಪೂರ್ಣ ಮೊತ್ತವನ್ನು ದೇಣಿಗೆಯಾಗಿ ನೀಡಿದೆ.

ರೂ.167 ಕೋಟಿ ನಷ್ಟವನ್ನು ಅನುಭವಿಸಿದ ಟಕಿಡೋ ಲೀಸಿಂಗ್ ಆಪರೇಟರ್ಸ್ ಪ್ರೈವೇಟ್ ಲಿಮಿಟೆಡ್ 4 ಕೋಟಿ ಮೌಲ್ಯದ ಬಾಂಡ್ ಖರೀದಿಸಿ ಸಂಪೂರ್ಣ ಹಣವನ್ನು ನೀಡಿದೆ. ಇದಲ್ಲದೇ ಇನ್ನೂ ಹಲವು ಕಂಪನಿಗಳು ತಮ್ಮ ಲಾಭದ ಆರು ಪಟ್ಟು ಹಣವನ್ನು ಉದಾರವಾಗಿ ನೀಡಿದೆ. ಇದೆಲ್ಲವೂ ಅತ್ಯಂತ ಅನುಮಾನಾಸ್ಪದವಾಗಿದೆ. ಈ ಕಂಪನಿಗಳು ಮತ್ತು ಸಂಬಂಧಪಟ್ಟ ಬಿಜೆಪಿ ಮುಖಂಡರ ವಿರುದ್ಧ ಕೂಡಲೇ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

Tags: aam aadmi partyAAPBJpElectoral BondsElectoral Bonds ScamModiSanjay Singhಆಪ್ಆಮ್ ಆದ್ಮಿ ಪಾರ್ಟಿಚುನಾವಣಾ ಬಾಂಡ್ಚುನಾವಣಾ ಬಾಂಡ್ ಹಗರಣಬಿಜೆಪಿಮೋದಿಸಂಜಯ್ ಸಿಂಗ್
Previous Post

ಬರಪರಿಹಾರ ವಿಚಾರದಲ್ಲಿ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ: ಸಿದ್ದರಾಮಯ್ಯ

Next Post

ಮಹಾರಾಷ್ಟ್ರದಲ್ಲಿ ಶಿವಸೇನೆ 21, ಕಾಂಗ್ರೆಸ್ 17, ಎನ್.ಸಿ.ಪಿ 10, “ಇಂಡಿಯಾ” ಮೈತ್ರಿ ಪಕ್ಷಗಳ ನಡುವಿನ ಕ್ಷೇತ್ರ ಹಂಚಿಕೆ ಪೂರ್ಣ!

Next Post

ಮಹಾರಾಷ್ಟ್ರದಲ್ಲಿ ಶಿವಸೇನೆ 21, ಕಾಂಗ್ರೆಸ್ 17, ಎನ್.ಸಿ.ಪಿ 10, "ಇಂಡಿಯಾ" ಮೈತ್ರಿ ಪಕ್ಷಗಳ ನಡುವಿನ ಕ್ಷೇತ್ರ ಹಂಚಿಕೆ ಪೂರ್ಣ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS