• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಲೇಖನ

4 ಹಂತದ ಮತದಾನ: ಶೇಕಡಾವಾರು ಪ್ರಮಾಣದಲ್ಲಿ ಮುಂದುವರಿದ ಅಕ್ರಮಗಳು; ಏಕಾಏಕಿ ಹೆಚ್ಚಾದ 1 ಕೋಟಿ ಮತಗಳು! ಮೋದಿ ಸರ್ಕಾರದ ಷಡ್ಯಂತ್ರವೇನು?

by Dynamic Leader
18/05/2024
in ಲೇಖನ
0
0
SHARES
1
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್

ಚುನಾವಣಾ ಆಯೋಗದ ಹೊಸ ಶೇಕಡಾವಾರು ಲೆಕ್ಕಾಚಾರದ ಪ್ರಕಾರ, ಮತದಾರರ ಸಂಖ್ಯೆ ಇದ್ದಕ್ಕಿದ್ದಂತೆ ಒಂದು ಕೋಟಿಯಷ್ಟು ಹೆಚ್ಚಾಗಿದೆ.!

ದೇಶಾದ್ಯಂತ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ. ಇದರಲ್ಲಿ 4 ಹಂತದ ಚುನಾವಣೆ ಮುಗಿದಿದೆ. ಹಲವು ರಾಜ್ಯಗಳಲ್ಲಿ ಚುನಾವಣೆ ವೇಳೆ ನಾನಾ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿತ್ತು. ಏತನ್ಮಧ್ಯೆ, ಚುನಾವಣಾ ಆಯೋಗದ ಕಾರ್ಯವೈಖರಿಯಲ್ಲಿ ವಿಶ್ವಾಸಾರ್ಹತೆಯ ಕೊರತೆಯಿದೆ ಎಂದು ಟೀಕಿಸಲಾಗುತ್ತಿದೆ.

ಅದರಲ್ಲೂ ಚುನಾವಣೆ ಘೋಷಣೆಯಾದಾಗಿನಿಂದಲೂ ಕೇವಲ ಇಂಡಿಯಾ ಮೈತ್ರಿಕೂಟದ ನಾಯಕರು ಹಾಗೂ ಅಭ್ಯರ್ಥಿಗಳನ್ನೇ ಗುರಿಯಾಗಿಸಿಕೊಂಡು ಅಡ್ಡಿಪಡಿಸುವ ರೀತಿಯಲ್ಲಿ ಚುನಾವಣಾ ಆಯೋಗ ವರ್ತಿಸುತ್ತಿದೆ ಎನ್ನಲಾಗಿತ್ತು. ಇದಲ್ಲದೇ ಮತದಾನದ ವಿವರ ಪ್ರಕಟಿಸುವಲ್ಲಿ ನಾನಾ ಅಕ್ರಮಗಳು ನಡೆದಿವೆ ಎಂದು ಹೇಳಲಾಗುತ್ತಿದೆ.

ಮೊದಲ ಹಂತ ಹಾಗೂ ಎರಡನೇ ಹಂತದ ಮತದಾನ ಮುಗಿದಮೇಲೆ, ಚುನಾವಣಾ ಆಯೋಗವು ತಕ್ಷಣದ ಮತದಾನದ ಶೇಕಡಾವಾರು ಪ್ರಮಾಣವನ್ನು ಬಿಡುಗಡೆ ಮಾಡದೆ ವಿಳಂಬ ಮಾಡಿ, ಮೊದಲು ಒಂದುರೀತಿಯ ಅಂಕಿಅಂಶವನ್ನು, ನಂತರ ಮತ್ತೊಂದು ಅಂಕಿಅಂಶವನ್ನು ಬಿಡುಗಡೆ ಮಾಡಿ ಗೊಂದಲವನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮತದಾನದ ವಿವರ ಬಿಡುಗಡೆಗೆ ವಿಳಂಬ ಮಾಡಿರುವುದು ಎಲ್ಲರಲ್ಲೂ ಅನುಮಾನ ಮೂಡಿಸಿದೆ.

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಚುನಾವಣಾ ಮತದಾನದ ಶೇಕಡಾವಾರು ಮತ್ತು ಮತದಾರರ ಸಂಖ್ಯೆಯನ್ನು ತಕ್ಷಣವೇ ಪ್ರಕಟಿಸಬೇಕೆಂದು ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದಾರೆ. ಇದಲ್ಲದೆ, ಪ್ರಕರಣವನ್ನು ತುರ್ತಾಗಿ ವಿಚಾರಿಸುವಂತೆ ಮನವಿ ಮಾಡಿದ ನಂತರ, ಚುನಾವಣಾ ಆಯೋಗವು ತನ್ನ ಅಭಿಪ್ರಾಯವನ್ನು ತಕ್ಷಣವೇ ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಈ ವೇಳೆ ಚುನಾವಣಾ ಆಯೋಗ ಇತ್ತೀಚೆಗೆ ಬಿಡುಗಡೆ ಮಾಡಿರುವ ಹೊಸ ಶೇಕಡಾವಾರು ಲೆಕ್ಕಾಚಾರದ ಪ್ರಕಾರ ಮತದಾನ ಮಾಡಿದವರ ಸಂಖ್ಯೆ ಹಠಾತ್ತನೆ ಒಂದು ಕೋಟಿ ಏರಿಕೆಯಾಗಿದೆ. ನಾಲ್ಕು ಹಂತದ ಮತದಾನದಲ್ಲಿ ಚುನಾವಣಾ ಆಯೋಗವು ಆರಂಭದಲ್ಲಿ 65.4% ಮತದಾನವಾಗಿದೆ ಎಂದು ವರದಿ ಮಾಡಿದೆ. ನಂತರ ಮೊನ್ನೆ ಬಿಡುಗಡೆ ಮಾಡಿರುವ ಹೊಸ ವರದಿ ಪ್ರಕಾರ ಶೇ.66.9ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ಲೆಕ್ಕಗಳ ಪ್ರಕಾರ ಒಂದು ಕೋಟಿ ಮತಗಳು (1.07 ಕೋಟಿ) ಹೆಚ್ಚಿರುವುದು ಬೆಳಕಿಗೆ ಬಂದಿದೆ.

ಅಂದರೆ ಪ್ರತಿ ಕ್ಷೇತ್ರಕ್ಕೆ ಸರಾಸರಿ 28,000 ಮತಗಳ ಹೆಚ್ಚಳವಾಗಿದೆ. ಈ ಕುರಿತು ವಿಶ್ಲೇಷಣೆ ನಡೆಸಿದಾಗ ಮೊದಲ ಹಂತದಲ್ಲಿ 18 ಲಕ್ಷ, ಎರಡನೇ ಹಂತದಲ್ಲಿ 32 ಲಕ್ಷ, ಮೂರನೇ ಹಂತದಲ್ಲಿ 22 ಲಕ್ಷ ಹಾಗೂ ನಾಲ್ಕನೇ ಹಂತದಲ್ಲಿ 34 ಲಕ್ಷ ಮತಗಳು ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ.

ಅಸ್ಸಾಂ ನಲ್ಲಿ ಪ್ರತಿ ಕ್ಷೇತ್ರಕ್ಕೆ ಗರಿಷ್ಠ ಸರಾಸರಿ 73,000 ಮತಗಳು ಹೆಚ್ಚಳವಾಗಿದೆ. ಆಂಧ್ರಪ್ರದೇಶದಲ್ಲಿ ಪ್ರತಿ ಕ್ಷೇತ್ರಕ್ಕೆ 69,000 ಮತಗಳು ಹೆಚ್ಚಿವೆ. ಕೇರಳದಲ್ಲಿ ಪ್ರತಿ ಕ್ಷೇತ್ರಕ್ಕೆ 57 ಸಾವಿರ, ಕರ್ನಾಟಕದಲ್ಲಿ 51 ಸಾವಿರ ಮತ್ತು ಮಹಾರಾಷ್ಟ್ರದಲ್ಲಿ 48 ಸಾವಿರ ಮತಗಳು ಪ್ರತಿ ಕ್ಷೇತ್ರದಲ್ಲೂ ಸರಾಸರಿ ಏರಿಕೆಯಾಗಿದೆ.

ಮತದಾನ ಮುಗಿದ ಕೂಡಲೇ ಚಲಾವಣೆಯಾದ ಮತಗಳ ಸಂಖ್ಯೆಯನ್ನು ಪ್ರಕಟಿಸಬೇಕು ಎಂದು ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಘಟನೆಗಳು ಒತ್ತಾಯಿಸುತ್ತಲೇ ಇವೆ. ಆದರೆ ಮತದಾನ ಮಾಡಿದವರ ಸಂಖ್ಯೆಯನ್ನು ಬಹಿರಂಗಪಡಿಸಲು ಚುನಾವಣಾ ಆಯೋಗ ನಿರಾಕರಿಸುತ್ತಿದೆ. ಈ ಪರಿಸ್ಥಿತಿಯಲ್ಲಿ ನಾಲ್ಕು ಹಂತದ ಚುನಾವಣೆಯ ನಂತರ ಮತದಾನದ ಪ್ರಮಾಣ ಹೆಚ್ಚಾಗಿರುವುದು ನಾನಾ ಅನುಮಾನಗಳಿಗೆ ಕಾರಣವಾಗಿದೆ ಎಂದು ರಾಜಕೀಯ ಪಕ್ಷಗಳು ಹೇಳುತ್ತಿವೆ. ಇದರಲ್ಲಿ ಮೋದಿ ಸರ್ಕಾರದ ಷಡ್ಯಂತ್ರವೇನು? ಎಂದು ಇಂಡಿಯಾ ಮೈತ್ರಿಕೂಟದ ನಾಯಕರು ಪ್ರಶ್ನೆ ಎತ್ತಿದ್ದಾರೆ.

SOURCE: kalaignarseithigal.com

Tags: Election CommissionVote Percentageಇಂಡಿಯಾ ಮೈತ್ರಿಕೂಟಚುನಾವಣೆ ಅಕ್ರಮಚುನಾವಣೆ ಆಯೋಗಶೇಕಡಾವಾರು ಮತದಾನಸಂಸತ್ ಚುನಾವಣೆ 2024
Previous Post

ಕಾಂಗ್ರೆಸ್ ಮತ್ತು ಸಮಾಜವಾದಿ ಗೆದ್ದರೆ ರಾಮಮಂದಿರವನ್ನು ಬುಲ್ಡೋಜರ್‌ನಿಂದ ಕೆಡವುತ್ತಾರೆ – ಪ್ರಧಾನಿ ಮೋದಿ ಭಾಷಣ

Next Post

CSK Vs RCB | ಬೆಂಗಳೂರು ಕ್ರೀಡಾಂಗಣ… ಭಾರೀ ಮಳೆಯಿಂದಾಗಿ ಕೈಬಿಡಲಾದ IPL ಪಂದ್ಯಗಳು: ಒಂದು ನೋಟ

Next Post

CSK Vs RCB | ಬೆಂಗಳೂರು ಕ್ರೀಡಾಂಗಣ... ಭಾರೀ ಮಳೆಯಿಂದಾಗಿ ಕೈಬಿಡಲಾದ IPL ಪಂದ್ಯಗಳು: ಒಂದು ನೋಟ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS