• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ನಿಸ್ವಾರ್ಥ ನಾಯಕ ವಸಂತ ಬಂಗೇರ ಅವರ ಸ್ಮರಣಾರ್ಥವಾಗಿ ಬೆಳ್ತಂಗಡಿ ಬಸ್ಟಾಂಡ್‌ಗೆ ಅವರ ಹೆಸರು: ಸಿದ್ದರಾಮಯ್ಯ

by Dynamic Leader
21/05/2024
in ರಾಜ್ಯ
0
0
SHARES
1
VIEWS
Share on FacebookShare on Twitter

ಬೆಳ್ತಂಗಡಿ (ದಕ್ಷಿಣ ಕನ್ನಡ): ಹಿರಿಯ ನಾಯಕರು, ಮಾಜಿ ಮುಖ್ಯ ಸಚೇತಕರೂ ಆದ ವಸಂತ ಬಂಗೇರ ಅವರ ಉತ್ತರಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಮಾತನಾಡಿದರು.

“ನೇರ-ನಿಷ್ಠುರ ನಡೆ ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ. ಸತ್ಯ, ಬಡವರ ಪರ ಕಾಳಜಿ, ರಾಜಿರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡ ಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ.” ಎಂದು ಹೇಳಿದರು.

“ಬಂಗೇರ ಅವರು ತಮ್ಮ ಬದುಕಿನುದ್ದಕ್ಕೂ ವಿಶ್ವಮಾನವ ಮೌಲ್ಯವನ್ನು ಪಾಲಿಸಿದರು. ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. ಐದು ಬಾರಿ ಶಾಸಕರಾದರೂ ಮಂತ್ರಿ ಆಗಲು ಯಾವತ್ತೂ ಸಣ್ಣ ಲಾಭಿ ಕೂಡ ನಡೆಸಿದವರಲ್ಲ. ಹೀಗಾಗಿ ಇವರು ಅತ್ಯಂತ ಮಾದರಿ ರಾಜಕೀಯ ನಾಯಕರಾಗಿದ್ದರು. 2023ರ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ.

ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು. ಅವರು ಇಂದು ನಮ್ಮೊಂದಿಗಿಲ್ಲ ಎಂಬುದು ಅತ್ಯಂತ ನೋವಿನ ಸಂಗತಿ. ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ ರಾಜಕಾರಣ ಬಡವಾಗಿದೆ. ಅವರ ಆರೋಗ್ಯ ಚೇತರಿಸಿಕೊಳ್ಳುತ್ತದೆ, ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ ನಮ್ಮನ್ನು ಅಗಲಿದ್ದಾರೆ, ಒಬ್ಬ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡ ದುಃಖ ನನ್ನದು.” ಎಂದರು.

ವಸಂತ ಬಂಗೇರ ಅವರು ಮರೆಯಾದರೂ ಅವರು ತಮ್ಮ ಕೆಲಸ ಕಾರ್ಯಗಳ ಮೂಲಕ ಜನಮಾನಸದಲ್ಲಿದ್ದಾರೆ. ಸದಾಕಾಲ ಬೆಳ್ತಂಗಡಿ ಕ್ಷೇತ್ರದ ಅಭಿವೃದ್ಧಿ, ಜನರ ಹಿತದ ಬಗ್ಗೆಯೇ ಯೋಚಿಸುತ್ತಿದ್ದ ಬಂಗೇರ ಅವರದು ಅಪರೂಪದ ವ್ಯಕ್ತಿತ್ವ. ನಿಸ್ವಾರ್ಥ ನಾಯಕ ಬಂಗೇರ ಅವರ ನೆನಪಿಗಾಗಿ ಬೆಳ್ತಂಗಡಿ ಬಸ್ಟಾಂಡ್‌ಗೆ ಅವರ ಹೆಸರಿಡಲು ಸರ್ಕಾರ ಸಿದ್ಧವಿದೆ. ಜೊತೆಗೆ ಸರ್ಕಲ್‌ನಲ್ಲಿ ಅವರ ಪ್ರತಿಮೆ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ನಾನು ಮುಕ್ತವಾಗಿದ್ದೇನೆ. ಇದು ಬಂಗೇರ ಅವರ ಜೀವನ ಸಾಧನೆಯನ್ನು ಗೌರವಿಸಲು ನನಗೆ ದೊರೆತ ಅವಕಾಶ ಎಂದು ಭಾವಿಸಿದ್ದೇನೆ.” ಎಂದು ಹೇಳಿದರು.

Tags: BelthangadyVasath Bangeraದಕ್ಷಿಣ ಕನ್ನಡನುಡಿ ನಮನಬೆಳ್ತಂಗಡಿವಸಂತ ಬಂಗೇರಸಿದ್ದರಾಮಯ್ಯ
Previous Post

ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ!

Next Post

ಪವಿತ್ರ ಹಜ್ ಯಾತ್ರೆಗೆ ಹೊರಟಿರುವ ಯಾತ್ರಾರ್ಥಿಗಳನ್ನು ಬೀಳ್ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ!

Next Post

ಪವಿತ್ರ ಹಜ್ ಯಾತ್ರೆಗೆ ಹೊರಟಿರುವ ಯಾತ್ರಾರ್ಥಿಗಳನ್ನು ಬೀಳ್ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS