• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

Privilege Motion Notice: ಪ್ರಧಾನಿ ಮೋದಿಯ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಕಾಂಗ್ರೆಸ್.!

by Dynamic Leader
31/07/2024
in ದೇಶ, ರಾಜಕೀಯ
0
0
SHARES
0
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್

ಬಿಹಾರದಲ್ಲಿ, 2022 ರ ದ್ವಿತೀಯಾರ್ಧದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ನಿತೀಶ್ ಕುಮಾರ್, ಆರ್‌ಜೆಡಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅದೇ ವರ್ಷದ ಅಕ್ಟೋಬರ್‌ನಲ್ಲಿ ರಾಜ್ಯ ಮಟ್ಟದ ಜಾತಿವಾರು ಸಮೀಕ್ಷೆಯನ್ನು ಬಿಡುಗಡೆ ಮಾಡಿದರು.

ಜೊತೆಗೆ, ರಾಜ್ಯ ಸರ್ಕಾರಿ ಮೀಸಲಾತಿಯನ್ನು ಶೇ.65ಕ್ಕೆ ಹೆಚ್ಚಿಸುವುದಾಗಿಯೂ ಭರವಸೆ ನೀಡಿದರು. ಅಂದಿನಿಂದ, ಕಾಂಗ್ರೆಸ್ ಸೇರಿದಂತೆ ‘ಇಂಡಿಯಾ ಮೈತ್ರಿಕೂಟ’ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ಜಾತಿವಾರು ಜನಗಣತಿ ನಡೆಸುವಂತೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿವೆ.

ಆದರೆ, ಈ ಬಗ್ಗೆ ಮೌನ ವಹಿಸಿದ್ದ ಬಿಜೆಪಿ ಸರ್ಕಾರ ಲೋಕಸಭೆ ಚುನಾವಣೆಯಲ್ಲಿ ಎಸ್.ಸಿ, ಎಸ್.ಟಿ ಮೀಸಲಾತಿಯನ್ನು ಕಸಿಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಪ್ರಚಾರ ಮಾಡಿತ್ತು. ಜಾತಿವಾರು ಗಣತಿಯನ್ನು ಬೆಂಬಲಿಸುವ ನಿತೀಶ್ ಕುಮಾರ್ ಮತ್ತು ಇತರರ ಬೆಂಬಲದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರವೂ ಬಿಜೆಪಿ ಈ ವಿಷಯದಲ್ಲಿ ಮೌನವಾಗಿದೆ.

ಆದರೂ, ಸರ್ಕಾರದ ಎಲ್ಲಾ ಯೋಜನೆಗಳು ಹಿಂದುಳಿದ, ಪರಿಶಿಷ್ಟ ಮತ್ತು ಬುಡಕಟ್ಟು ಜನರಿಗೆ ಸರಿಯಾಗಿ ಸಿಗುವಂತೆ ಮಾಡಲು ರಾಷ್ಟ್ರಮಟ್ಟದಲ್ಲಿ ಜಾತಿವಾರು ಜನಗಣತಿ ನಡೆಸಬೇಕು ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಈ ಹಿನ್ನೆಲೆಯಲ್ಲಿ, 2024-25ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಕಳೆದ ವಾರ ಮಂಡಿಸಲಾಗಿತ್ತು. ಈ ಕುರಿತು ಲೋಕಸಭೆಯಲ್ಲಿ ಸೋಮವಾರ (ಜುಲೈ 29) ರಂದು ದಿನ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಕೇಂದ್ರ ಬಜೆಟ್‌ ತಯಾರಿಸುವಲ್ಲಿ 20 ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಆದರೆ ಹಿಂದುಳಿದ, ಪರಿಶಿಷ್ಟ ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ ಒಬ್ಬ ವ್ಯಕ್ತಿಯನ್ನೂ ಅದರಲ್ಲಿ ಸೇರಿಸಲಾಗಿಲ್ಲ.

ದೇಶದ ಶೇ.73ರಷ್ಟು ಜನಸಂಖ್ಯೆ ಹೊಂದಿರುವ ಈ ಮೂರು ಸಮುದಾಯಗಳಿಗೆ ಬಜೆಟ್ ನಲ್ಲಿ ಏನೂ ಸಿಗಲಿಲ್ಲ. ಇಂದಿನ ಭಾರತದಲ್ಲಿ ಕಮಲ ಆಕಾರದ ಚಕ್ರವ್ಯೂಹ ಇದೆ. ಯುವಕರು, ರೈತರು, ಮಹಿಳೆಯರು, ಸಣ್ಣ ಮತ್ತು ಮಧ್ಯಮ ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಇದನ್ನು ಮೋದಿ, ಅಮಿತ್ ಶಾ, ಮೋಹನ್ ಭಾಗವತ್, ಅಜಿತ್ ದೋವಲ್, ಅಂಬಾನಿ ಮತ್ತು ಅದಾನಿ ಮುಂತಾದ ಆರು ಜನರು ನಿಯಂತ್ರಿಸುತ್ತಾರೆ” ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ, ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಸಂಸದ ಅನುರಾಗ್ ಠಾಕೂರ್ ಅವರು ರಾಹುಲ್ ಗಾಂಧಿ ವಿರುದ್ಧ ಜಾತಿ, ಧರ್ಮದ ಆಧಾರದಲ್ಲಿ ಪರೋಕ್ಷ ವಾಗ್ದಾಳಿ ನಡೆಸಿದ್ದು, ಪ್ರಧಾನಿ ಮೋದಿ ಇದನ್ನು ಹೊಗಳಿದ್ದು ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

ನಿನ್ನೆ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣಕ್ಕೆ ಪ್ರತಿಕ್ರಿಯಿಸಿದ ಅನುರಾಗ್ ಠಾಕೂರ್, “ತನ್ನ ಜಾತಿ ಗೊತ್ತಿಲ್ಲದ ವ್ಯಕ್ತಿ ಜಾತಿವಾರು ಗಣತಿ ಬಗ್ಗೆ ಮಾತನಾಡುತ್ತಿದ್ದಾರೆ. ಅಲ್ಲದೆ, ಕೆಲವರು ಆಕಸ್ಮಿಕವಾಗಿ ಹಿಂದೂಗಳಾಗಿದ್ದಾರೆ. ಆದ್ದರಿಂದ, ಮಹಾಭಾರತದ ಬಗ್ಗೆ ಅವರ ಜ್ಞಾನವು ಹಾಗೆ ಆಗಿರುತ್ತದೆ” ಎಂದು ವಾಗ್ದಾಳಿ ನಡೆಸಿದರು.

ಅನುರಾಗ್ ಠಾಕೂರ್

ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, “ಆದಿವಾಸಿ, ದಲಿತ ಮತ್ತು ಹಿಂದುಳಿದವರ ಸಮಸ್ಯೆಗಳನ್ನು ಯಾರೇ ಎತ್ತಿದರೂ ಅವರನ್ನು ನಿಂದಿಸಲಾಗುತ್ತದೆ. ಆದಾಗ್ಯೂ, ನಾನು ಇದನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ಅನುರಾಗ್ ಠಾಕೂರ್ ನನ್ನನ್ನು ನಿಂದಿಸಿ ಅವಮಾನ ಮಾಡಿದ್ದಾರೆ.

ಆದರೆ, ನಾನು ಅವರಿಂದ ಯಾವುದೇ ಕ್ಷಮೆಯನ್ನು ಬಯಸುವುದಿಲ್ಲ. ನೀವು ನನ್ನನ್ನು ಎಷ್ಟು ಬೇಕಾದರೂ ಅವಮಾನಿಸಬಹುದು. ಸಂಸತ್ತಿನಲ್ಲಿ ಜಾತಿವಾರು ಜನಗಣತಿಯನ್ನು ನಾವು ಅಂಗೀಕರಿಸುತ್ತೇವೆ” ಎಂದರು. ಮತ್ತೊಂದೆಡೆ, ಸಮಾಜವಾದಿ ನಾಯಕ ಅಖಿಲೇಶ್ ಯಾದವ್, “ಅದು ಹೇಗೆ ಒಬ್ಬರ ಜಾತಿಯನ್ನು ಕೇಳುವುದು?” ಎಂದು ಅನುರಾಗ್ ಠಾಕೂರ್ ಅವರನ್ನು ಪ್ರಶ್ನಿಸಿದರು.

ಅಲ್ಲದೆ, ಅನೇಕ ವಿರೋಧ ಪಕ್ಷದ ಸಂಸದರು ಸಹ ಅನುರಾಗ್ ಠಾಕೂರ್ ಅವರ ಇಂತಹ ಭಾಷಣವನ್ನು ವಿರೋಧಿಸಿದರು. ಆದರೆ, ಸದನದಲ್ಲಿ ನಡೆದ ಈ ಘಟನೆಗೆ ಇನ್ನಷ್ಟು ತುಪ್ಪ ಸುರಿಯುವ ಸಲುವಾಗಿ ಪ್ರಧಾನಿ ಮೋದಿ, ನನ್ನ ಯುವ ಮತ್ತು ಶಕ್ತಿಯುತ ಸಹೋದ್ಯೋಗಿ ಅನುರಾಗ್ ಠಾಕೂರ್ ಅವರ ಈ ಭಾಷಣ, ಕೇಳಲೇಬೇಕು. ಸತ್ಯ ಮತ್ತು ಹಾಸ್ಯದ ಈ ಪರಿಪೂರ್ಣ ಮಿಶ್ರಣವು ಇಂಡಿಯಾ ಮೈತ್ರಿಕೂಟದ ಕೊಳಕು ರಾಜಕೀಯವನ್ನು ಬಹಿರಂಗಪಡಿಸುತ್ತದೆ” ಎಂದು ಟ್ವೀಟ್ ಮಾಡಿ, ಅನುರಾಗ್ ಠಾಕೂರ್ ಅವರು ಸದನದಲ್ಲಿ ಮಾಡಿದ ಭಾಷಣದ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ಪುಟ X ನಲ್ಲಿ ಹಂಚಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ಅನುರಾಗ್ ಠಾಕೂರ್ ಅವರು ಅಖಿಲೇಶ್ ಯಾದವ್ ಅವರ ಹಳೆಯ ವಿಡಿಯೋವನ್ನು ಕಟ್ ಮಾಡಿ, “ನೀವು ಜಾತಿಯ ಬಗ್ಗೆ ಅದು ಹೇಗೆ ಕೇಳಬಹುದು ಅಖಿಲೇಶ್ ಯಾದವ್?” ಎಂದು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.

ಮತ್ತೊಂದೆಡೆ, ಕಮ್ಯುನಿಸ್ಟ್ ಪಕ್ಷದ ಸಂಸದ ಸಿ.ವೆಂಕಟೇಶನ್ ಅವರು ತಮ್ಮ ಎಕ್ಸ್ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ, “ನಿನ್ನೆ ಸಂಸತ್ತಿನಲ್ಲಿ, ‘ತನ್ನ ಜಾತಿ ಗೊತ್ತಿಲ್ಲದ ವ್ಯಕ್ತಿ ಜಾತಿವಾರು ಗಣತಿ ಬಗ್ಗೆ ಮಾತನಾಡಬಹುದಾ?’ ಎಂದು ರಾಹುಲ್ ಗಾಂಧಿ ಬಗ್ಗೆ ಅನುರಾಗ್ ಠಾಕೂರ್ ಮಾತನಾಡಿದರು.

ಈ ಭಾಷಣವನ್ನು ಎಲ್ಲರೂ ಕೇಳಲೇಬೇಕಾದ ಅತ್ಯುತ್ತಮ ಭಾಷಣ ಎಂದು ಪ್ರಧಾನಿ ತಮ್ಮ ‘ಎಕ್ಸ್’ ಸೈಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ದೇಶದ ಅತ್ಯುನ್ನತ ಸದನಗಳಲ್ಲಿ ಬಿಜೆಪಿಯ ಧ್ವನಿ ಎಷ್ಟು ನೋವಿನಿಂದ ಹೊರಹೊಮ್ಮುತ್ತಿದೆ ಎಂಬುದನ್ನು ನೋಡಿ” ಎಂದು ಟೀಕಿಸಿದ್ದಾರೆ. ಅವರನ್ನು ಅನುಸರಿಸಿ ಹಲವು ವಿರೋಧ ಪಕ್ಷಗಳ ನಾಯಕರು, ಅನುರಾಗ್ ಠಾಕೂರ್ ಅವರ ಕ್ರಮವನ್ನು ಖಂಡಿಸುತ್ತಾ, ಮೋದಿಯವರ ಹೊಗಳಿಕೆಯನ್ನು ಟೀಕಿಸುತ್ತಿದ್ದಾರೆ.

ಅಲ್ಲದೆ, ಅನುರಾಗ್ ಠಾಕೂರ್ ಅವರ ವೀಡಿಯೊವನ್ನು ವೀಕ್ಷಿಸಲು ಮೋದಿಯವರ ಮನವಿಗೆ ವಿರುದ್ಧವಾಗಿ ಕಾಂಗ್ರೆಸ್ ಪಕ್ಷವು, ಇದು ಸಂಸತ್ತಿನ ವಿಶೇಷ ಹಕ್ಕುಗಳ ಉಲ್ಲಂಘನೆ ಮತ್ತು ಅಸಂವಿಧಾನಿಕ ಎಂದು ಲೋಕಸಭೆಯ ರೂಲ್ ಬುಕ್ ಚಾಪ್ಟರ್ 20ರ ರೂಲ್ ನಂಬರ್ 222ರ ಪ್ರಕಾರ ಮೋದಿಯವರ ವಿರುದ್ಧ ಹಕ್ಕುಚ್ಯುತಿ (Privilege Motion Notice) ಮಂಡಿಸಿದೆ.

Tags: Privilege Motion Noticeಅಖಿಲೇಶ್ ಯಾದವ್ಅನುರಾಗ್ ಠಾಕೂರ್ಇಂಡಿಯಾ ಮೈತ್ರಿಕೂಟಕಾಂಗ್ರೆಸ್ಚಕ್ರವ್ಯೂಹಜಾತಿ ಗಣತಿಮೋದಿ ವಿರುದ್ಧ ಹಕ್ಕುಚ್ಯುತಿ ಮಂಡನೆರಾಹುಲ್ ಗಾಂಧಿಹಕ್ಕುಚ್ಯುತಿ ಮಂಡನೆ
Previous Post

ಕೇರಳದಲ್ಲಿ ಭಾರೀ ಭೂಕುಸಿತ! ಇದು ಕಾರಣವೇ? ತಜ್ಞರು ಏನು ಹೇಳುತ್ತಾರೆ?

Next Post

ಭಾರತೀಯ ರೈಲ್ವೇಯಲ್ಲಿ 7,951 ಹುದ್ದೆಗಳು… ಇಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಬಹುದು..!

Next Post

ಭಾರತೀಯ ರೈಲ್ವೇಯಲ್ಲಿ 7,951 ಹುದ್ದೆಗಳು... ಇಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಬಹುದು..!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS