• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಪ್ರವಾದಿಯನ್ನು ನಿಂದಿಸಿದ ಧಾರ್ಮಿಕ ಮುಖಂಡನ ವಿರುದ್ಧ 67 ಪ್ರಕರಣ ದಾಖಲು!

by Dynamic Leader
01/10/2024
in ದೇಶ
0
0
SHARES
0
VIEWS
Share on FacebookShare on Twitter

ಮಹಾರಾಷ್ಟ್ರದಲ್ಲಿ ಇಸ್ಲಾಂ ಧರ್ಮ ಮತ್ತು ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿಂದೂ ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ 67 ಪ್ರಕರಣಗಳು ದಾಖಲಾಗಿವೆ.

ರಾಮಗಿರಿ ಮಹಾರಾಜರು ಹಂಚಿಕೊಂಡಿರುವ ವಿವಾದಾತ್ಮಕ ಮಾನಹಾನಿಕರ ಅಭಿಪ್ರಾಯಗಳು ಮತ್ತು ಮಾಹಿತಿಗಳನ್ನು ಅಂತರ್ಜಾಲದಿಂದ ತೆಗೆದುಹಾಕುತ್ತಿದ್ದೇವೆ ಎಂದು ಸೈಬರ್ ಕ್ರೈಂ ಬ್ರಾಂಚ್ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇಸ್ಲಾಂ ಧರ್ಮ ಮತ್ತು ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸಿದ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ ರಾಜ್ಯಾದ್ಯಂತ ಇದುವರೆಗೆ 67 ಪ್ರಕರಣಗಳು ದಾಖಲಾಗಿವೆ.

‘ರಾಮಗಿರಿ ಮಹಾರಾಜ್ ವಿರುದ್ಧ ಹಲವು ಪ್ರಕರಣಗಳು ದಾಖಲಾದ ನಂತರ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು ಎಂಬ ಕಾರಣಕ್ಕಾಗಿ ಅವರ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎಂಬ ಮನವಿಯನ್ನು ವಿರೋಧಿಸಿ, ಮಹಾರಾಷ್ಟ್ರ ಅಡ್ವೊಕೇಟ್ ಜನರಲ್ ವೀರೇಂದ್ರ ಸರಾಫ್ ಅವರು,  ಸಲ್ಲಿಸಿದ ಅರ್ಜಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ.

ವಕೀಲ ವಾಸಿ ಸೈಯದ್ ಮತ್ತು ಇತರರು ಸಲ್ಲಿಸಿದ ಅರ್ಜಿಯಲ್ಲಿ, ‘2014 ರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರವು ಮುಸ್ಲಿಮರ ವಿರುದ್ಧ ಕೋಮುವಾದಿ ಕ್ರಮಗಳನ್ನು ನಿರಂತರವಾಗಿ ತೆಗೆದುಕೊಳ್ಳುತ್ತಿದೆ. ಮುಸ್ಲಿಮರನ್ನು ಕಡೆಗಣಿಸುವುದು, ಸಾಮೂಹಿಕ ಹತ್ಯೆಗಳನ್ನು ಮಾಡುವುದು, ಗಲಭೆಗಳನ್ನು ಮಾಡುವುದು ಮುಂತಾದ ಹಲವು ವಿಷಯಗಳು ನಿರಂತರವಾಗಿ ನಡೆಯುತ್ತಿವೆ ಎಂದು ಉಲ್ಲೇಖಿಸಲಾಗಿತ್ತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಇಜಾಜ್ ನಖ್ವಿ, ‘ರಾಮಗಿರಿ ಮಹಾರಾಜ್ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಶಿಂಧೆ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಮತ್ತು ರಾಜ್ಯದ ಧರ್ಮ ಪ್ರಚಾರಕರನ್ನು ರಕ್ಷಿಸುತ್ತಿದ್ದಾರೆ’ ಎಂದು ವಾದಿಸಿದರು. ‘ಅದೇ ರೀತಿ ಬಿಜೆಪಿ ಶಾಸಕ ನಿತೇಶ್ ರಾಣೆ ಅವರ ಅವಹೇಳನಕಾರಿ ಭಾಷಣದ ವಿರುದ್ಧವೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ನಖ್ವಿ ಉಲ್ಲೇಖಿಸಿದರು.

ಆದರೆ, ನ್ಯಾಯಮೂರ್ತಿಗಳಾದ ರೇವತಿ ಮೊಹಿತೆ ಮತ್ತು ಪೃಥ್ವಿರಾಜ್ ಚವಾಣ್ ಅವರನ್ನೊಳಗೊಂಡ ಪೀಠವು, ‘ರಾಮಗಿರಿ ಮಹಾರಾಜ್ ಅವರ ವೀಡಿಯೊಗಳನ್ನು ತೆಗೆದುಹಾಕಲು ಮತ್ತು ರಾಣೆ ಅವರು ಮಾಡಿರುವ ಮಾನಹಾನಿ ಭಾಷಣಕ್ಕೆ ಸಂಬಂಧಿಸಿದ ಆರೋಪಗಳಿಗೆ, ಕಾನೂನು ಕ್ರಮಗಳಿಗೆ ಸಂಬಂಧಿಸಿದ ಅರ್ಜಿಗಳ ಮೇಲೆ ಈಗಾಗಲೇ ತಡಮಾಡದೆ ತನಿಖೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ದ್ವೇಷದ ಭಾಷಣದ ಬಗ್ಗೆ ಕೇಳಲಾದ ಪ್ರಶ್ನೆಗೆ, ‘ನಾವು ಮಾತನಾಡುವುದನ್ನು ತಡೆಯಲು ಸಾಧ್ಯವಿಲ್ಲ. ಆದರೆ, ಈ ಬಗ್ಗೆ ಪೊಲೀಸರು ಎಲ್ಲಿ ಬೇಕಾದರೂ ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸುತ್ತಾರೆ. ಏಕನಾಥ್ ಶಿಂಧೆ ಮತ್ತು ರಾಮಗಿರಿ ಒಂದೇ ವೇದಿಕೆಯಲ್ಲಿದ್ದರು ಎಂದ ಮಾತ್ರಕ್ಕೆ ಎಫ್‌ಐಆರ್ ದಾಖಲಿಸಬೇಕು ಎಂದಲ್ಲ. ನೀವು ತಪ್ಪು ಉದ್ದೇಶಗಳನ್ನು ಸಾಬೀತು ಪಡಿಸಬೇಕು. ತಪ್ಪು ಕಂಡುಬಂದಲ್ಲಿ ಎಫ್‌ಐಆರ್ ದಾಖಲಿಸಲಾಗುವುದು. ನೀವು (ನಖ್ವಿ) ಇದನ್ನು ರಾಜಕೀಯ ವಿಷಯವಾಗಿ ಪರಿವರ್ತಿಸುತ್ತಿದ್ದೀರಿ. ನೀವು ಮುಖ್ಯ ವಿಷಯದಿಂದ ಹೊರಗುಳಿದರೆ ಅದು ತಪ್ಪಾಗುತ್ತದೆ. ನಿಮ್ಮ ಮುಖ್ಯ ಸಮಸ್ಯೆ ವಿಡಿಯೋಗಳನ್ನು ತೆಗೆದುಹಾಕುವುದು ಅಷ್ಟೇ ಆಗಿದೆ’ ಎಂದು ಹೇಳಿದರು.

ರಾಮಗಿರಿ ಮಹಾರಾಜರ ವಿರುದ್ಧ ಈಗಾಗಲೇ ಸೆಪ್ಟೆಂಬರ್ 19 ರವರೆಗೆ 67 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದ ಅಡ್ವೊಕೇಟ್ ಜನರಲ್ ವೀರೇಂದ್ರ ಸರಾಫ್, ಅರ್ಜಿದಾರರ ಮನವಿಗೆ ವಿರೋಧ ವ್ಯಕ್ತಪಸಿದರು. ಪ್ರಕರಣದಿಂದ ಮುಖ್ಯಮಂತ್ರಿ ಹೆಸರನ್ನು ತೆಗೆದುಹಾಕಬೇಕು ಎಂಬ ವಕೀಲ ಸರಾಫ್ ಅವರ ಮನವಿಗೆ ಸಮ್ಮತಿಸಿದ ಪೀಠ, ಅರ್ಜಿದಾರರಿಗೆ ದಂಡ ವಿಧಿಸುವ ಎಚ್ಚರಿಕೆಯನ್ನು ನೀಡಿತು. ಅಕ್ಟೋಬರ್ 17 ರಂದು ಮತ್ತೊಮ್ಮೆ ಈ ಅರ್ಜಿಯ ವಿಚಾರಣೆಯನ್ನು ನಡೆಸುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.

Tags: Cyber CrimeIslamMahant Ramgiri MaharajPravadi Muhammadಇಸ್ಲಾಂ ಧರ್ಮಏಕನಾಥ್ ಶಿಂಧೆದ್ವೇಷ ಭಾಷಣಪ್ರವಾದಿ ಮುಹಮ್ಮದ್ಮಹಂತ್ ರಾಮಗಿರಿ ಮಹಾರಾಜ್ಮಾನಹಾನಿ ಭಾಷಣಸೈಬರ್ ಕ್ರೈಂಹಿಂದೂ ಧಾರ್ಮಿಕ ಮುಖಂಡರು
Previous Post

ತಾಯಿಯನ್ನು ಕೊಂದು ದೇಹದ ಭಾಗಗಳನ್ನು ಹುರಿದು ತಿಂದ ಹೃದಯವಿದ್ರಾವಕ ಕ್ರೌರ್ಯ: ಅರೋಪಿಗೆ ಮರಣ ದಂಡನೆ ವಿಧಿಸಿದ ಬಾಂಬೆ ಹೈಕೋರ್ಟ್!

Next Post

ಗಾಂಧಿ ಜಯಂತಿ: ಸ್ಮಾರಕಕ್ಕೆ ರಾಷ್ಟ್ರಪತಿ, ಪ್ರಧಾನಿ ಗೌರವ

Next Post

ಗಾಂಧಿ ಜಯಂತಿ: ಸ್ಮಾರಕಕ್ಕೆ ರಾಷ್ಟ್ರಪತಿ, ಪ್ರಧಾನಿ ಗೌರವ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS