• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ವಿದೇಶ

ಭಾರತೀಯ ಅಧಿಕಾರಿಗಳಿಗೆ ರೂ 2,200 ಕೋಟಿ ಲಂಚ; ಅದಾನಿ ವಿರುದ್ಧ ಅಮೇರಿಕದಲ್ಲಿ ದೂರು! ಪೂರ್ಣ ಹಿನ್ನೆಲೆ

by Dynamic Leader
21/11/2024
in ವಿದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ಗೌತಮ್ ಅಧಾನಿ ಅವರು ಸೋಲಾರ್ ಎನರ್ಜಿ ಪ್ರಾಜೆಕ್ಟ್ ಡೀಲ್ ವಿಚಾರದಲ್ಲಿ ಹೂಡಿಕೆ ಪಡೆಯಲು ಅಮೆರಿಕ ಹೂಡಿಕೆದಾರರಿಗೆ ಸುಳ್ಳು ಹೇಳಿ ಮೋಸಗೊಳಿಸಿದ್ದೂ ಅಲ್ಲದೇ ಭಾರತೀಯ ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ ಲಂಚ ನೀಡಿದ್ದಾರೆ ಎಂದು ಅಮೆರಿಕ ವಕೀಲರು ಆರೋಪಿಸಿದ್ದಾರೆ.

ಭಾರತದ ಅಗ್ರ ಶ್ರೀಮಂತ ವ್ಯಕ್ತಿ ಗುಜರಾತ್‌ನ ಗೌತಮ್ ಅಧಾನಿ, ಪ್ರಧಾನಿ ಮೋದಿಯವರ ಸ್ನೇಹಿತ ಎಂಬುದಕ್ಕಾಗಿ ಬಿಜೆಪಿ ಆಡಳಿತದಲ್ಲಿ ಅಗಾಧ ಬೆಳವಣಿಗೆ ಕಂಡವರು ಎಂದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾದವರು. ಈಗಾಗಲೇ ಅಮೆರಿಕದ ಹಿಂಡೆನ್ ಬರ್ಗ್ ವರದಿ ಹಾಗೂ ಸೆಬಿ ಕ್ರಮಗಳಿಂದ ತತ್ತರಿಸಿರುವ ಅದಾನಿ ಇದೀಗ ಅಮೆರಿಕದ ನ್ಯಾಯಾಲಯದಲ್ಲಿ ಅಲ್ಲಿನ ವಕೀಲರು ಸಲ್ಲಿಸಿರುವ ವರದಿಯಿಂದ ತತ್ತರಿಸಿ ಹೋಗಿದ್ದಾರೆ. ಅದೇನೆಂದರೆ, ಗೌತಮ್ ಅದಾನಿಯವರ “ಅದಾನಿ ಗ್ರೀನ್ ಎನರ್ಜಿ” ಕಂಪನಿಯು ಅಮೆರಿಕದಲ್ಲಿ ಶತಕೋಟಿ ಡಾಲರ್ ಮೌಲ್ಯದ ಒಪ್ಪಂದಗಳನ್ನು ಪಡೆಯುವ ಸಲುವಾಗಿ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 2,200 ಕೋಟಿ ರೂಪಾಯಿ (265 ಮಿಲಿಯನ್ ಡಾಲರ್) ಲಂಚವನ್ನು ನೀಡಿದ್ದಾರೆ ಎಂದು ಅಮೆರಿಕ ಪ್ರಾಸಿಕ್ಯೂಟರ್‌ಗಳು ಆರೋಪಿಸಿದ್ದಾರೆ.

ಈ ಮೂಲಕ ಗೌತಮ್ ಅದಾನಿ ಮಾತ್ರವಲ್ಲ, ಅದಾನಿ ಸೋದರ ಸಂಬಂಧಿ ಸಾಗರ್ ಅದಾನಿ, ವಿನೀತ್ ಜೈನ್ ಕೂಡ ಸುಳ್ಳು ಹೇಳಿ ಅಮೆರಿಕದ ಹೂಡಿಕೆದಾರರಿಂದ ಬಂಡವಾಳ ಪಡೆಯಲು ಷಡ್ಯಂತ್ರ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಗೌತಮ್ ಅದಾನಿ, ಸಾಗರ್ ಅದಾನಿ ಮತ್ತು ಭಾರತೀಯ ಅಧಿಕಾರಿಗಳು ಸೇರಿದಂತೆ ಏಳು ಜನರ ಮೇಲೆ ಈ ಆರೋಪವಿದೆ. ಈ ಆರೋಪಗಳ ಪ್ರಕಾರ, ಭಾರತೀಯ ಇಂಧನ ನಿಗಮ (Indian Power Corporation), ಭಾರತೀಯ ಇಂಧನ ನಿಗಮದ ಅಂಗಸಂಸ್ಥೆಗಳು ಮತ್ತು ಅಮೆರಿಕನ್ ರಿಟೈನರ್ ವ್ಯವಹಾರವನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಉಳಿಸಿಕೊಳ್ಳಲು ಭಾರತ ಸರ್ಕಾರದ ವಿದ್ಯುತ್ ವಿತರಣಾ ಕಂಪನಿಗಳು ಸೌರ ಒಪ್ಪಂದಗಳಿಗೆ ಸಹಿ ಹಾಕಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡಲು ಸಂಚು ರೂಪಿಸಲಾಗಿದೆ ಎಂದು ಆ ವರದಿಯಲ್ಲಿ ತಿಳಿಸಲಾಗಿದೆ.

ನಿರ್ದಿಷ್ಟವಾಗಿ ಹೇಳುವುದಾದರೆ, ಜುಲೈ 2021 ಮತ್ತು ಫೆಬ್ರವರಿ 2022ರ ನಡುವೆ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡುವುದಾಗಿ ಭರವಸೆ ನೀಡಿದ್ದಾರೆ. ತರುವಾಯ, ತಮಿಳುನಾಡು, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಛತ್ತೀಸ್‌ಗಢ, ಆಂಧ್ರಪ್ರದೇಶ ಸೇರಿದಂತೆ ರಾಜ್ಯಗಳ ವಿದ್ಯುತ್ ವಿತರಣಾ ಕಂಪನಿಗಳು ಕೇಂದ್ರ ಸರ್ಕಾರದ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾದೊಂದಿಗೆ (SECI – Solar Energy Corporation of India) ಪಿ.ಎಸ್.ಎ ಒಪ್ಪಂದದಲ್ಲಿ (POWER SALE AGREEMENT – FOR SALE OF SOLAR POWER)  ಸಹಿ ಹಾಕಿದ್ದಾರೆ. ಅಂದರೆ, ಭಾರತದಲ್ಲಿ ಲಂಚದ ಮೂಲಕ ಪಡೆಯಲಾದ ಒಪ್ಪಂದಗಳನ್ನು ಮುಂದಿಟ್ಟು, ಅಮೆರಿಕ ಹೂಡಿಕೆದಾರರನ್ನು ಅದಾನಿ ಮೋಸ ಮಾಡಿದ್ದಾರೆ ಎಂಬುದು ಅಮೆರಿಕ ವಕೀಲರ ಪ್ರಾಥಮಿಕ ಆರೋಪವಾಗಿದೆ. ಈ ಆರೋಪ ಬೆಳಕಿಗೆ ಬಂದ ನಂತರ ಅದಾನಿ ಷೇರುಗಳು ಮತ್ತು ಬಾಂಡ್‌ಗಳು ತೀವ್ರವಾಗಿ ಕುಸಿತವನ್ನು ಖಂಡಿವೆ.

ಅಮೆರಿಕದಲ್ಲಿ ಗುತ್ತಿಗೆ ಪಡೆಯಲು ಅದಾನಿ 2,200 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದ ತನಿಖೆ ಪ್ರಾರಂಭವಾದಾಗ, ತನಿಖೆಯನ್ನು ಸ್ಥಗಿತಗೊಳಿಸಲು ಸಂಚು ರೂಪಿಸಲಾಯಿತು. ಇದೀಗ ಅದಾನಿ ವಿರುದ್ಧ ಅಮೆರಿಕದಲ್ಲಿ ಬಂಧನ ವಾರಂಟ್ ಜಾರಿಯಾಗಿದೆ. ಇದು ವಿಚಿತ್ರವಾಗಿದೆ. ಅದಾನಿ ಮತ್ತು ಅವರಿಗೆ ಸಂಬಂಧಿಸಿದ ಹಗರಣಗಳ ತನಿಖೆಯ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಲೇ ಇದೆ. ಆದರೆ, ನರೇಂದ್ರ ಮೋದಿಯವರು ಅದಾನಿಯನ್ನು ಉಳಿಸಲು ಪ್ರಯತ್ನಿಸುತ್ತಿದ್ದಾರೆ. ಕಾರಣ ಸ್ಪಷ್ಟ – ಅದಾನಿಯನ್ನು ತನಿಖೆಗೆ ಒಳಪಡಿಸಿದರೆ ನರೇಂದ್ರ ಮೋದಿಯೊಂದಿಗಿನ ಪ್ರತಿಯೊಂದು ಕೊಂಡಿಯೂ ಹೊರಬರುತ್ತದೆ!

Tags: 2200 Crore Bribe2200 ಕೋಟಿ ಲಂಚadaniModiSolar Energy ProjectSolar Energy Supply Contractಅದಾನಿಮೋದಿಸೋಲಾರ್ ಎನರ್ಜಿ ಪ್ರಾಜೆಕ್ಟ್ಸೌರ ಶಕ್ತಿ ಪೂರೈಕೆ ಒಪ್ಪಂದ
Previous Post

ರಾಜ್ಯಾದ್ಯಂತ ಏಕಕಾಲದಲ್ಲಿ 25 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ!

Next Post

ಕೆಎಂಡಿಸಿ ಭವನದಲ್ಲಿ ಕಾರ್ಯನಿರ್ವಹಿಸಲಿರುವ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ!

Next Post

ಕೆಎಂಡಿಸಿ ಭವನದಲ್ಲಿ ಕಾರ್ಯನಿರ್ವಹಿಸಲಿರುವ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS